
ಭಾರತದ ಆಡುವ ಬಳಗ
ಟಾಸ್ ಮುಕ್ತಾಯವಾದ ನಂತರ ಮಾತನಾಡಿರುವ ನಾಯಕ ಶಿಖರ್ ಧವನ್ ಟೀಮ್ ಇಂಡಿಯಾದಲ್ಲಿ ಆಗಿರುವ ಪ್ರಮುಖ ಬದಲಾವಣೆ ಏನೆಂಬುದನ್ನು ತಿಳಿಸಿದ್ದಾರೆ. ಕಳೆದ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದ ಪ್ರಸಿದ್ಧ್ ಕೃಷ್ಣ ಈ ಪಂದ್ಯದಲ್ಲಿ ಆಡುವ ಬಳಗದಿಂದ ಹೊರಬಿದ್ದಿದ್ದು, ಬದಲಾಗಿ ಅವೇಶ್ ಖಾನ್ ಸ್ಥಾನಗಿಟ್ಟಿಸಿಕೊಂಡಿದ್ದಾರೆ. ಈ ಮೂಲಕ ಅವೇಶ್ ಖಾನ್ ಅಂತರರಾಷ್ಟ್ರೀಯ ಏಕದಿನ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ್ದಾರೆ.
ಆಡುವ ಬಳಗ: ಶಿಖರ್ ಧವನ್(ನಾಯಕ), ಶುಬ್ಮನ್ ಗಿಲ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್(ವಿಕೆಟ್ ಕೀಪರ್), ದೀಪಕ್ ಹೂಡಾ, ಅಕ್ಸರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಾಹಲ್, ಅವೇಶ್ ಖಾನ್

ವೆಸ್ಟ್ ಇಂಡೀಸ್ ಆಡುವ ಬಳಗ
ಶಾಯ್ ಹೋಪ್(ವಿಕೆಟ್ ಕೀಪರ್), ಬ್ರಾಂಡನ್ ಕಿಂಗ್, ಶಮರ್ಹ್ ಬ್ರೂಕ್ಸ್, ಕೈಲ್ ಮೇಯರ್ಸ್, ನಿಕೋಲಸ್ ಪೂರನ್(ನಾಯಕ), ರೋವ್ಮನ್ ಪೊವೆಲ್, ಅಕೆಲ್ ಹೊಸೈನ್, ರೊಮಾರಿಯೋ ಶೆಫರ್ಡ್, ಅಲ್ಜಾರಿ ಜೋಸೆಫ್, ಜೇಡನ್ ಸೀಲ್ಸ್, ಹೇಡನ್ ವಾಲ್ಷ್

ಪ್ರಥಮ ಪಂದ್ಯದಲ್ಲಿ ದುಬಾರಿಯಾಗಿದ್ದ ಪ್ರಸಿದ್ಧ್ ಕೃಷ್ಣ
ಇನ್ನು ಈ ಪಂದ್ಯದ ಟೀಂ ಇಂಡಿಯಾ ಆಡುವ ಬಳಗದಿಂದ ಸ್ಥಾನ ಕಳೆದುಕೊಂಡಿರುವ ಪ್ರಸಿದ್ಧ್ ಕೃಷ್ಣ ವಿಂಡೀಸ್ ವಿರುದ್ಧದ ಪ್ರಥಮ ಏಕದಿನ ಪಂದ್ಯದಲ್ಲಿ ಕಣಕ್ಕಿಳಿದು 10 ಓವರ್ ಬೌಲಿಂಗ್ ಮಾಡಿ 62 ರನ್ ಕಲೆಹಾಕಿದ್ದರು. ಹೆಚ್ಚು ರನ್ ಬಿಟ್ಟುಕೊಟ್ಟದ್ದು ಮಾತ್ರವಲ್ಲದೆ ಪ್ರಸಿದ್ಧ್ ಕೃಷ್ಣ ಯಾವುದೇ ವಿಕೆಟ್ ಪಡೆಯದೇ ಕಳಪೆ ಪ್ರದರ್ಶನ ನೀಡಿದ್ದರು.


Click it and Unblock the Notifications












