
ಮಯಾಂಕ್ ಅಗರ್ವಾಲ್ ಸಿದ್ಧ
ಹೀಗೆ ಟೀಮ್ ಇಂಡಿಯಾದ ಹಲವು ಆಟಗಾರರು ಕೊರೊನಾ ಸೋಂಕಿಗೆ ಒಳಗಾಗಿದ್ದ ಕಾರಣ ಟೀಮ್ ಇಂಡಿಯಾ ಆಯ್ಕೆ ಸಮಿತಿ ಹೆಚ್ಚುವರಿ ಆಟಗಾರರನ್ನಾಗಿ ಮಯಾಂಕ್ ಅಗರ್ವಾಲ್ ಮತ್ತು ಇಶಾನ್ ಕಿಶನ್ ಅವರನ್ನು ಆಯ್ಕೆ ಮಾಡಿತು. ಹೀಗೆ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ ಸೇರಿದ ಮಯಾಂಕ್ ಅಗರ್ವಾಲ್ ಕಡ್ಡಾಯ ಐಸೋಲೇಷನ್ ನಿಯಮವನ್ನು ಅನುಸರಿಸಿದ್ದು, ಸದ್ಯ ವಿಂಡೀಸ್ ವಿರುದ್ಧದ ದ್ವಿತೀಯ ಏಕದಿನ ಪಂದ್ಯವನ್ನಾಡಲು ಸಿದ್ಧರಾಗಿದ್ದಾರೆ.

ಮರಳಿದ ಕೆಎಲ್ ರಾಹುಲ್
ಅತ್ತ ವೈಯಕ್ತಿಕ ಕಾರಣಗಳಿಂದ ವೆಸ್ಟ್ ಇಂಡೀಸ್ ವಿರುದ್ಧದ ಪ್ರಥಮ ಏಕದಿನ ಪಂದ್ಯವನ್ನು ತಪ್ಪಿಸಿಕೊಂಡಿದ್ದ ಕೆಎಲ್ ರಾಹುಲ್ ಕೂಡ ಮರಳಿದ್ದು ವಿಂಡೀಸ್ ವಿರುದ್ಧದ ದ್ವಿತೀಯ ಪಂದ್ಯದಲ್ಲಿ ಕಣಕ್ಕಿಳಿಯಲು ತಯಾರಿ ನಡೆಸುತ್ತಿದ್ದಾರೆ. ಇವರ ಜತೆಗೆ ಕೊರೊನಾ ಸೋಂಕಿಗೆ ಒಳಗಾಗಿದ್ದ ಸಿಬ್ಬಂದಿಯ ಸಂಪರ್ಕದಲ್ಲಿದ್ದ ಕಾರಣದಿಂದಾಗಿ ವೆಸ್ಟ್ ಇಂಡೀಸ್ ವಿರುದ್ಧದ ಪ್ರಥಮ ಏಕದಿನ ಪಂದ್ಯಕ್ಕೆ ಅಲಭ್ಯರಾಗಿದ್ದ ನವದೀಪ್ ಸೈನಿ ಕೂಡ ಇದೀಗ ವಿಂಡೀಸ್ ವಿರುದ್ಧದ ದ್ವಿತೀಯ ಏಕದಿನ ಪಂದ್ಯದಲ್ಲಿ ಕಣಕ್ಕಿಳಿಯಲು ಸಿದ್ಧರಾಗಿದ್ದಾರೆ.

ಧವನ್, ಗಾಯಕ್ವಾಡ್ ಅಲಭ್ಯ
ಹೀಗೆ ಕೆ ಎಲ್ ರಾಹುಲ್, ಮಯಾಂಕ್ ಅಗರ್ವಾಲ್ ಮತ್ತು ನವದೀಪ್ ಸೈನಿ ಟೀಮ್ ಇಂಡಿಯಾ ಸೇರಲು ಸಜ್ಜಾಗಿದ್ದು, ಇಂದು ( ಫೆಬ್ರವರಿ 8 ) ನರೇಂದ್ರ ಮೋದಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನೆಟ್ ಪ್ರ್ಯಾಕ್ಟೀಸ್ ನಡೆಸಿದ್ದಾರೆ. ಬಿಸಿಸಿಐ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಈ ಮೂವರು ಅಭ್ಯಾಸದಲ್ಲಿ ತೊಡಗಿಕೊಂಡಿರುವ ಚಿತ್ರಗಳನ್ನು ಹಂಚಿಕೊಂಡು ಟ್ವೀಟ್ ಮಾಡಿದೆ. ಆದರೆ ಇನ್ನುಳಿದ ಆಟಗಾರರಾದ ಶಿಖರ್ ಧವನ್, ರುತುರಾಜ್ ಗಾಯಕ್ವಾಡ್ ಮತ್ತು ಶ್ರೇಯಸ್ ಅಯ್ಯರ್ ಅಭ್ಯಾಸದಲ್ಲಿ ಭಾಗವಹಿಸದೇ ಇರುವುದು ಕೊಂಚ ಬೇಸರವನ್ನು ಕೂಡಾ ತಂದಿದೆ.


Click it and Unblock the Notifications












