For Quick Alerts
ALLOW NOTIFICATIONS  
For Daily Alerts
 

"ನೀವು ಏನು ಮಾಡುತ್ತಿದ್ದೀರೋ ಅರ್ಥವಾಗುತ್ತಿಲ್ಲ"; ಪಂದ್ಯ ಗೆದ್ದರೂ ದ್ರಾವಿಡ್, ರೋಹಿತ್ ವಿರುದ್ಧ ಕೈಫ್ ಕಿಡಿ

IND vs WI: Mohammad Kaif slams Rohit Sharma and Dravid for giving opener slot for Suryakumar Yadav

ಸದ್ಯ ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ನಿರತವಾಗಿರುವ ಟೀಮ್ ಇಂಡಿಯಾ ಕೆರಿಬಿಯನ್ನರ ವಿರುದ್ಧದ ಏಕದಿನ ಸರಣಿಯಲ್ಲಿ ವೈಟ್ ವಾಷ್ ಸಾಧನೆ ಮಾಡಿದ ನಂತರ ಇದೀಗ ಟಿ ಟ್ವೆಂಟಿ ಸರಣಿಯಲ್ಲಿ ಸೆಣಸಾಟವನ್ನು ಆರಂಭಿಸಿದೆ. ಏಕದಿನ ಸರಣಿಗೆ ವಿಶ್ರಾಂತಿಯ ಕಾರಣದಿಂದಾಗಿ ಅಲಭ್ಯರಾಗಿದ್ದ ಭಾರತ ತಂಡದ ಪೂರ್ಣಾವಧಿ ನಾಯಕ ರೋಹಿತ್ ಶರ್ಮಾ ಇದೀಗ ವಿಂಡೀಸ್ ವಿರುದ್ಧದ ಟಿ ಟ್ವೆಂಟಿ ಸರಣಿಗೆ ತಂಡ ಸೇರಿಕೊಂಡಿದ್ದು ನಾಯಕನಾಗಿ ತಂಡವನ್ನು ಮುನ್ನಡೆಸುತ್ತಿದ್ದಾರೆ.

ಇತ್ತಂಡಗಳ ನಡುವಿನ 5 ಪಂದ್ಯಗಳ ಟಿ ಟ್ವೆಂಟಿ ಸರಣಿಯ ಪ್ರಥಮ ಪಂದ್ಯ ನಿನ್ನೆ ( ಜುಲೈ 29 ) ಟೌರಾಬಾದ ಬ್ರಿಯಾನ್ ಲಾರಾ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಿತು. ಈ ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ತಂಡದ ನಾಯಕ ನಿಕೋಲಸ್ ಪೂರನ್ ಫೀಲ್ಡಿಂಗ್ ಆಯ್ದುಕೊಂಡು ಎದುರಾಳಿ ಭಾರತ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ರೋಹಿತ್ ಶರ್ಮಾ ಮತ್ತು ದಿನೇಶ್ ಕಾರ್ತಿಕ್ ಅಬ್ಬರದ ಬ್ಯಾಟಿಂಗ್ ನೆರವಿನಿಂದ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 190 ರನ್ ಕಲೆಹಾಕಿ ಕೆರಿಬಿಯನ್ನರಿಗೆ 191 ರನ್‌ಗಳ ಕಠಿಣ ಗುರಿಯನ್ನು ನೀಡಿತು.

ಆದರೆ ಈ ಗುರಿಯನ್ನು ತಲುಪುವಲ್ಲಿ ವಿಫಲವಾದ ವೆಸ್ಟ್ ಇಂಡೀಸ್ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 122 ರನ್ ಕಲೆಹಾಕಿ 68 ರನ್‌ಗಳ ಹೀನಾಯ ಸೋಲನ್ನು ಅನುಭವಿಸಿತು. ಹೀಗೆ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದ್ದರೂ ಸಹ ಭಾರತದ ಮಾಜಿ ಕ್ರಿಕೆಟಿಗ ಮೊಹಮ್ಮದ್ ಕೈಫ್ ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ ಹಾಗೂ ಹೆಡ್ ಕೋಚ್ ರಾಹುಲ್ ದ್ರಾವಿಡ್ ಅವರ ವಿರುದ್ಧ ಬೇಸರ ವ್ಯಕ್ತಪಡಿಸಿ ಈ ಕೆಳಕಂಡಂತೆ ಕಿಡಿಕಾರಿದ್ದಾರೆ.

ರಿಷಭ್ ಪಂತ್ ಬ್ಯಾಟಿಂಗ್ ಕ್ರಮಾಂಕದ ಕುರಿತು ಕಿಡಿಕಾರಿದ ಕೈಫ್

ರಿಷಭ್ ಪಂತ್ ಬ್ಯಾಟಿಂಗ್ ಕ್ರಮಾಂಕದ ಕುರಿತು ಕಿಡಿಕಾರಿದ ಕೈಫ್

ಕಳೆದ ಇಂಗ್ಲೆಂಡ್ ವಿರುದ್ಧದ ಟಿ ಟ್ವೆಂಟಿ ಸರಣಿಯಲ್ಲಿ ರಿಷಭ್ ಪಂತ್ ಅವರನ್ನು ಆರಂಭಿಕ ಆಟಗಾರನನ್ನಾಗಿ ಕಣಕ್ಕಿಳಿಸಲಾಗಿತ್ತು. ಇನ್ನು ಅನಾರೋಗ್ಯದ ಕಾರಣ ವಿಂಡೀಸ್ ವಿರುದ್ಧದ ಈ ಸರಣಿಗೂ ಕೆಎಲ್ ರಾಹುಲ್ ಅಲಭ್ಯರಾಗುರುವ ಕಾರಣ ರಿಷಭ್ ಪಂತ್ ಆರಂಭಿಕನಾಗಿ ಕಣಕ್ಕಿಳಿಯುವುದು ಬಹುತೇಕ ಖಚಿತ ಎನ್ನಲಾಗಿತ್ತು. ಆದರೆ ಅಚ್ಚರಿಯ ನಿರ್ಧಾರವನ್ನು ತೆಗೆದುಕೊಂಡ ನಾಯಕ ರೋಹಿತ್ ಶರ್ಮಾ ಮತ್ತು ಕೋಚ್ ರಾಹುಲ್ ದ್ರಾವಿಡ್ ಮಧ್ಯಮ ಕ್ರಮಾಂಕದ ಆಟಗಾರನಾದ ಸೂರ್ಯಕುಮಾರ್ ಯಾದವ್ ಅವರನ್ನು ಆರಂಭಿಕನನ್ನಾಗಿ ಕಣಕ್ಕಿಳಿಸಿದರು. ಈ ಕುರಿತು ಇದೀಗ ಮಾಜಿ ಕ್ರಿಕೆಟಿಗ ಮೊಹಮ್ಮದ್ ಕೈಫ್ ಪ್ರತಿಕ್ರಿಯಿಸಿದ್ದು ಪಂತ್ ಅವರಿಗೆ ಐದಾರು ಪಂದ್ಯಗಳಲ್ಲಾದರೂ ಆರಂಭಿಕ ಆಟಗಾರನಾಗಿ ಕಣಕ್ಕಿಳಿಯುವ ಅವಕಾಶವನ್ನು ನೀಡಬೇಕಿತ್ತು, ಕೇವಲ ಒಂದೆರಡು ಪಂದ್ಯಗಳಲ್ಲಿ ಅವಕಾಶ ನೀಡಿ ದಿಢೀರ್ ಬದಲಾವಣೆ ಮಾಡುವುದು ಸರಿಯಲ್ಲ, ರಾಹುಲ್ ದ್ರಾವಿಡ್ ಮತ್ತು ರೋಹಿತ್ ಶರ್ಮಾ ಏನು ಮಾಡುತ್ತಿದ್ದಾರೆ ಎಂಬುದೇ ಅರ್ಥವಾಗುತ್ತಿಲ್ಲ ಎಂದು ಕೈಫ್ ಕಿಡಿಕಾರಿದ್ದಾರೆ.

ಸೂರ್ಯಕುಮಾರ್ ಯಾದವ್ ಆರಂಭಿಕನಾಗುವುದು ಸರಿಯಲ್ಲ

ಸೂರ್ಯಕುಮಾರ್ ಯಾದವ್ ಆರಂಭಿಕನಾಗುವುದು ಸರಿಯಲ್ಲ

ಇನ್ನೂ ಮುಂದುವರೆದು ಮಾತನಾಡಿರುವ ಮೊಹಮ್ಮದ್ ಕೈಫ್ ಸೂರ್ಯಕುಮಾರ್ ಯಾದವ್ ಏನಿದ್ದರೂ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಫಿನಿಶಿಂಗ್ ಮಾಡಬೇಕು, ಈಗ ಮಾತ್ರವಲ್ಲ ವಿರಾಟ್ ಕೊಹ್ಲಿ ತಂಡಕ್ಕೆ ಬಂದ ನಂತರವೂ ಕೂಡ ಸೂರ್ಯಕುಮಾರ್ ಯಾದವ್ ಅವರ ಕೆಲಸವೇ ಅದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Dinesh Karthik ಹೆಸರೇಳಿದ ಅಭಿಮಾನಿಗೆ ಹೊಡೆಯೋದಕ್ಕೆ ಫೀಲ್ಡಿಂಗ್ ಬಿಟ್ಟು ಆಚೆ ಬಂದ ಮರಳಿ ವಿಜಯ್ *Cricket |Oneindia
ತಂಡದೊಳಗೆ ಏನಾಗುತ್ತಿದೆ?

ತಂಡದೊಳಗೆ ಏನಾಗುತ್ತಿದೆ?

ಒಂದೆಡೆ ಸೂರ್ಯಕುಮಾರ್ ಯಾದವ್ ಅವರನ್ನು ಆರಂಭಿಕನನ್ನಾಗಿ ಕಣಕ್ಕಿಳಿಸುತ್ತಿದ್ದಾರೆ, ರಿಷಭ್ ಪಂತ್ ಅವರನ್ನು ಕೂಡ ಆರಂಭಿಕನನ್ನಾಗಿ ಕಣಕ್ಕಿಳಿಸಿದ್ದಾರೆ, ಮತ್ತೊಂದೆಡೆ ತಂಡದಲ್ಲಿ ಆರಂಭಿಕ ಇಶಾನ್ ಕಿಶನ್ ಬೆಂಚ್ ಕಾಯುತ್ತಿದ್ದಾರೆ, ಅಸಲಿಗೆ ತಂಡದೊಳಗೆ ಏನು ನಡೆಯುತ್ತಿದೆ, ಅವರ ತಂತ್ರವೇನು ಎಂಬುದೇ ಅರ್ಥವಾಗುತ್ತಿಲ್ಲ ಎಂದು ಕೈಫ್ ಕಿಡಿಕಾರಿದ್ದಾರೆ.

Story first published: Saturday, July 30, 2022, 13:29 [IST]
Other articles published on Jul 30, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+