ಪೊಲಾರ್ಡ್ ಗೈರು
ಭಾರತ ಮತ್ತು ವೆಸ್ಟ್ ಇಂಡೀಸ್ ದ್ವಿತೀಯ ಏಕದಿನ ಪಂದ್ಯದ ಆರಂಭಕ್ಕೂ ಮುನ್ನ ಮಾತನಾಡಿದ ನಾಯಕ ನಿಕೋಲಸ್ ಪೂರನ್ ಕೀರನ್ ಪೊಲಾರ್ಡ್ ಗಾಯದ ಸಮಸ್ಯೆಗೊಳಗಾಗಿರುವ ಕಾರಣ ಕಣಕ್ಕಿಳಿಯಲು ಫಿಟ್ ಆಗಿಲ್ಲ ಎಂದಿದ್ದಾರೆ. ಹೀಗೆ ಕೀರನ್ ಪೊಲಾರ್ಡ್ ಅಲಭ್ಯತೆಯ ಜೊತೆ ಕಣಕ್ಕಿಳಿಯಲಿರುವ ತಮ್ಮ ತಂಡ ಉತ್ತಮ ಕ್ರಿಕೆಟ್ ಆಡುವ ಗುರಿಯನ್ನು ಹೊಂದಿದೆ ಎಂದಿದ್ದಾರೆ ಹಾಗೂ ಈ ಪಂದ್ಯದಲ್ಲಿ ಆಗಿರುವ ಒಂದೇ ಒಂದು ಬದಲಾವಣೆ ಎಂದರೆ ಅದು ಕೀರನ್ ಪೊಲಾರ್ಡ್ ಬದಲು ಓಡಿಯನ್ ಸ್ಮಿತ್ ಆಗಮಿಸಿರುವುದು ಎಂದು ನಿಕೋಲಸ್ ಪೂರನ್ ತಿಳಿಸಿದ್ದಾರೆ.
ಪ್ರಥಮ ಏಕದಿನ ಪಂದ್ಯದಲ್ಲಿ ಶೂನ್ಯ ಸುತ್ತಿದ್ದ ಪೊಲಾರ್ಡ್
ಕಳೆದ ಭಾನುವಾರದಂದು ನಡೆದ ಭಾರತ ಮತ್ತು ವೆಸ್ಟ್ ಇಂಡೀಸ್ ತಂಡಗಳ ನಡುವಿನ ಪ್ರಥಮ ಏಕದಿನ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡದ ನಾಯಕನಾಗಿದ್ದ ಕೀರನ್ ಪೊಲಾರ್ಡ್ ಶೂನ್ಯಕ್ಕೆ ಔಟ್ ಆಗಿದ್ದರು. ಯುಜ್ವೇಂದ್ರ ಚಾಹಲ್ ಎಸೆದಿದ್ದ ಗೂಗ್ಲಿಗೆ ಬಲಿಯಾಗಿದ್ದ ಕೀರನ್ ಪೊಲಾರ್ಡ್ ಗೋಲ್ಡನ್ ಡಕ್ ಔಟ್ ಆಗಿ ಪೆವಿಲಿಯನ್ ಸೇರಿಕೊಂಡಿದ್ದರು.
ದ್ವಿತೀಯ ಏಕದಿನ ಪಂದ್ಯದ ಆಡುವ ಬಳಗಗಳು
ಭಾರತ ಆಡುವ ಬಳಗ: ರೋಹಿತ್ ಶರ್ಮಾ(ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ರಿಷಭ್ ಪಂತ್(ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಾಹಲ್, ಪ್ರಸಿದ್ಧ್ ಕೃಷ್ಣ
ವೆಸ್ಟ್ ಇಂಡೀಸ್ ಆಡುವ ಬಳಗ: ಶಾಯ್ ಹೋಪ್ (ವಿಕೆಟ್ ಕೀಪರ ), ಬ್ರಾಂಡನ್ ಕಿಂಗ್, ಡ್ಯಾರೆನ್ ಬ್ರಾವೋ, ಶಮರ್ ಬ್ರೂಕ್ಸ್, ನಿಕೋಲಸ್ ಪೂರನ್ (ನಾಯಕ), ಜೇಸನ್ ಹೋಲ್ಡರ್, ಓಡಿಯನ್ ಸ್ಮಿತ್, ಅಕೇಲ್ ಹೊಸೈನ್, ಫ್ಯಾಬಿಯನ್ ಅಲೆನ್, ಅಲ್ಜಾರಿ ಜೋಸೆಫ್, ಕೆಮರ್ ರೋಚ್