ರೋಹಿತ್ ಬಲ, ಟೀಮ್ ಇಂಡಿಯಾ ಫೇವರಿಟ್
ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಸರಣಿಗಳಲ್ಲಿ ಟೀಮ್ ಇಂಡಿಯಾವೇ ಗೆಲ್ಲುವ ತಂಡ ಎಂದು ಅಜಿತ್ ಅಗರ್ಕರ್ ಅಭಿಪ್ರಾಯಪಟ್ಟಿದ್ದಾರೆ. ರೋಹಿತ್ ಶರ್ಮಾ ಫಿಟ್ ಆಗಿದ್ದು ಮತ್ತೆ ತಂಡ ಸೇರಿಸುವುದರಿಂದ ಟೀಮ್ ಇಂಡಿಯಾ ಬಲಿಷ್ಠವಾಗಿದೆ ಎಂದು ಅಜಿತ್ ಅಗರ್ಕರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಟೀಮ್ ಇಂಡಿಯಾಕ್ಕೆ ಮಧ್ಯಮ ಕ್ರಮಾಂಕದ ತಲೆನೋವು
ಇನ್ನೂ ಮುಂದುವರೆದು ಮಾತನಾಡಿರುವ ಅಜಿತ್ ಅಗರ್ಕರ್ ಈ ಸರಣಿಯಲ್ಲಿಯೂ ಕೂಡ ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ಗಳ ಸಮಸ್ಯೆ ಟೀಮ್ ಇಂಡಿಯಾಗೆ ತಲೆನೋವಾಗಲಿದೆ ಎಂದಿದ್ದಾರೆ. ಸಾಧ್ಯವಾದರೆ ಕೆಎಲ್ ರಾಹುಲ್ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿದು ತಂಡಕ್ಕೆ ಆಸರೆಯಾಗಬೇಕೆಂದು ಕೂಡ ಅಜಿತ್ ಅಗರ್ಕರ್ ಸಲಹೆ ನೀಡಿದ್ದಾರೆ.
ತಂಡಕ್ಕೆ ಮಯಾಂಕ್ ಮತ್ತು ಇಶಾನ್ ಕಿಶನ್ ಸೇರ್ಪಡೆ
ವೆಸ್ಟ್ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯ ಆರಂಭಕ್ಕೂ ಮುನ್ನವೇ ಟೀಮ್ ಇಂಡಿಯಾದ ಅನುಭವಿ ಆಟಗಾರ ಶಿಖರ್ ಧವನ್, ಯುವ ಕ್ರಿಕೆಟಿಗ ಋತುರಾಜ್ ಗಾಯಕ್ವಾಡ್, ನವದೀಪ್ ಸೈನಿ ಹಾಗೂ ಶ್ರೇಯಸ್ ಐಯ್ಯರ್ ಕೊರೊನಾ ವೈರಸ್ ಸೋಂಕಿಗೆ ಒಳಗಾದರು. ಹೀಗಾಗಿ ಆಯ್ಕೆಗಾರರು ತಂಡಕ್ಕೆ ಮಯಾಂಕ್ ಅಗರ್ವಾಲ್ ಮತ್ತು ಇಶಾನ್ ಕಿಶನ್ ಈ ಇಬ್ಬರು ಆಟಗಾರರನ್ನು ಆಯ್ಕೆ ಮಾಡಿಕೊಂಡಿದ್ದು, ಮೊದಲನೇ ಏಕದಿನ ಪಂದ್ಯದಲ್ಲಿ ಕೆಎಲ್ ರಾಹುಲ್ ಸ್ಥಾನವನ್ನು ಈ ಒಬ್ಬರಲ್ಲಿ ಒಬ್ಬರು ತುಂಬಲಿದ್ದಾರೆ.