
1. ಶುಬ್ಮನ್ ಗಿಲ್ ಬದಲು ರುತುರಾಜ್ ಗಾಯಕ್ವಾಡ್
ವೆಸ್ಟ್ ಇಂಡೀಸ್ ವಿರುದ್ಧದ ಮೊದಲೆರಡು ಪಂದ್ಯಗಳಲ್ಲಿ ಆಡುವ ಅವಕಾಶವನ್ನು ಪಡೆದುಕೊಂಡ ಶುಬ್ ಮನ್ ಗಿಲ್ ಪ್ರಥಮ ಪಂದ್ಯದಲ್ಲಿ 64 ಮತ್ತು ಎರಡನೇ ಪಂದ್ಯದಲ್ಲಿ 43 ರನ್ ಕಲೆ ಹಾಕಿ ಉತ್ತಮ ಆಟವನ್ನಾಡಿದರು. ಹೀಗೆ ಉತ್ತಮ ಪ್ರದರ್ಶನ ನೀಡುವ ಮೂಲಕ ತಂಡದಲ್ಲಿ ತನ್ನ ಸ್ಥಾನವನ್ನು ಬಲಪಡಿಸಿಕೊಂಡಿರುವ ಶುಬ್ ಮನ್ ಗಿಲ್ ಅವರನ್ನು ತೃತೀಯ ಏಕದಿನ ಪಂದ್ಯದಿಂದ ಹೊರಗಿಟ್ಟು ಇನ್ನೂ ಸಹ ಅಂತರರಾಷ್ಟ್ರೀಯ ಏಕದಿನ ಕ್ರಿಕೆಟ್ಗೆ ಪದಾರ್ಪಣೆ ಮಾಡಬೇಕಿರುವ ರುತುರಾಜ್ ಗಾಯಕ್ವಾಡ್ ಅವರಿಗೆ ಅವಕಾಶ ನೀಡುವ ಸಾಧ್ಯತೆಗಳಿವೆ.

2. ಸ್ಯಾಮ್ಸನ್ ಬದಲು ಇಶಾನ್ ಕಿಶನ್
ಟೀಂ ಇಂಡಿಯಾ ವೆಸ್ಟ್ ಇಂಡೀಸ್ ವಿರುದ್ಧದ ತೃತೀಯ ಏಕದಿನ ಪಂದ್ಯಕ್ಕೆ ತಂಡದಲ್ಲಿ ಪ್ರಯೋಗಾತ್ಮಕ ಬದಲಾವಣೆ ಮಾಡಲು ಬಯಸಿದರೆ ವಿಕೆಟ್ ಕೀಪರ್ ಸಂಜು ಸ್ಯಾಮ್ಸನ್ ಅವರನ್ನು ಹೊರಗಿಟ್ಟು ಇಶಾನ್ ಕಿಶನ್ ಅವರಿಗೆ ಆಡುವ ಅವಕಾಶ ನೀಡುವ ಸಾಧ್ಯತೆಗಳಿವೆ. ಪ್ರಥಮ ಏಕದಿನ ಪಂದ್ಯದಲ್ಲಿ ವೈಡ್ ಎಸೆತವನ್ನು ತಡೆಯುವ ಮೂಲಕ ಬೌಂಡರಿ ತಪ್ಪಿಸಿ ಪಂದ್ಯದ ಗೆಲುವಿಗೆ ಕಾರಣರಾಗಿದ್ದ ಸಂಜು ಸ್ಯಾಮ್ಸನ್ ದ್ವಿತೀಯ ಏಕದಿನ ಪಂದ್ಯದಲ್ಲಿ ತನ್ನ ಚೊಚ್ಚಲ ಏಕದಿನ ಅರ್ಧ ಶತಕವನ್ನು ಬಾರಿಸಿ ಉತ್ತಮ ಆಟವನ್ನಾಡಿದ್ದರು.

3. ಸಿರಾಜ್ ಬದಲು ಅರ್ಷದೀಪ್
ವಿಂಡೀಸ್ ವಿರುದ್ಧದ ತೃತೀಯ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಕೆಲ ಪ್ರಯೋಗಾತ್ಮಕ ಬದಲಾವಣೆಗಳನ್ನು ಮಾಡಿಕೊಂಡರೆ, ಮೊಹಮ್ಮದ್ ಸಿರಾಜ್ ಅವರನ್ನು ಹೊರಗಿಟ್ಟು ಅರ್ಷದೀಪ್ ಸಿಂಗ್ ಅವರಿಗೆ ಅಂತರರಾಷ್ಟ್ರೀಯ ಏಕದಿನ ಕ್ರಿಕೆಟ್ಗೆ ಪದಾರ್ಪಣೆ ಮಾಡುವ ಅವಕಾಶ ನೀಡುವ ಸಾಧ್ಯತೆಗಳಿವೆ. ಅರ್ಷದೀಪ್ ಸಿಂಗ್ ಇಂಗ್ಲೆಂಡ್ ವಿರುದ್ಧದ ಟಿ ಟ್ವೆಂಟಿ ಪಂದ್ಯವೊಂದರಲ್ಲಿ ಕಣಕ್ಕಿಳಿಯುವ ಅವಕಾಶವನ್ನು ಗಿಟ್ಟಿಸಿಕೊಂಡು ಉತ್ತಮ ಪ್ರದರ್ಶನ ನೀಡಿದ್ದರು. ಹೀಗಾಗಿ ಈ ಆಟಗಾರನ ಏಕದಿನ ಕ್ರಿಕೆಟ್ ಪ್ರದರ್ಶನ ಹೇಗಿರಲಿದೆ ಎಂಬುದನ್ನು ಕಂಡುಕೊಳ್ಳಲು ಟೀಮ್ ಇಂಡಿಯಾ ಅವಕಾಶ ನೀಡುವ ಸಾಧ್ಯತೆಗಳಿವೆ.


Click it and Unblock the Notifications












