ವಿರಾಟ್ ಕೊಹ್ಲಿಗೆ ಜಿಂಬಾಬ್ವೆ ವಿರುದ್ಧದ ಸರಣಿಯಿಂದಲೂ ವಿಶ್ರಾಂತಿ
ಯುವ ಬ್ಯಾಟ್ಸ್ಮನ್ ರಾಹುಲ್ ತ್ರಿಪಾಠಿ ಅವರನ್ನೂ ತಂಡಕ್ಕೆ ಸೇರಿಸಿಕೊಳ್ಳಲಾಗಿದ್ದು, ಆಡುವ 11ರ ಬಳಗದಲ್ಲಿ ಅವಕಾಶ ಸಿಕ್ಕರೆ ಅವರು ಯಾವ ರೀತಿ ಪ್ರದರ್ಶನ ನೀಡುತ್ತಾರೆ ಎಂಬುದು ಕುತೂಹಲ ಮೂಡಿಸಿದೆ. ಮಾಜಿ ನಾಯಕ ವಿರಾಟ್ ಕೊಹ್ಲಿಗೆ ಜಿಂಬಾಬ್ವೆ ವಿರುದ್ಧದ ಸರಣಿಯಿಂದಲೂ ವಿಶ್ರಾಂತಿ ನೀಡಲಾಗಿದ್ದು, ನೇರವಾಗಿ ಏಷ್ಯಾಕಪ್ನಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ.
ಗಾಯದಿಂದ ಚೇತರಿಸಿಕೊಂಡಿರುವ ದೀಪಕ್ ಚಹಾರ್ ಪೂರ್ಣ ಫಿಟ್ನೆಸ್ಗೆ ಮರಳಿದ್ದಾರೆ ಮತ್ತು ವೇಗದ ಬೌಲಿಂಗ್ ಜೊತೆಗೆ ಬ್ಯಾಟಿಂಗ್ಗೂ ಶಕ್ತಿ ನೀಡಲಿದ್ದಾರೆ. ದೀಪಕ್ ಚಹಾರ್ ಅವರ ಫಿಟ್ನೆಸ್ ಸಾಬೀತುಪಡಿಸಲು ಜಿಂಬಾಬ್ವೆ ವಿರುದ್ಧದ ಸರಣಿ ನಿರ್ಣಾಯಕವಾಗಲಿದೆ. ಅವರು ಟಿ20 ಪಂದ್ಯಗಳನ್ನು ಸಹ ಆಡಲು ಆಶಿಸುತ್ತಿದ್ದಾರೆ, ಇದರಿಂದಾಗಿ ಅವರು ಟಿ20 ವಿಶ್ವಕಪ್ಗಾಗಿ ತಂಡದಲ್ಲಿ ಸ್ಥಾನಕ್ಕಾಗಿ ತಮ್ಮ ಆಯ್ಕೆಯನ್ನು ಸಮರ್ಥಿಸಿಕೊಳ್ಳಬಹುದು.
ಐಪಿಎಲ್ನಿಂದ ಹೊರಗುಳಿದಿದ್ದ ದೀಪಕ್ ಚಹಾರ್
ಗಾಯದ ಸಮಸ್ಯೆಯಿಂದಾಗಿ ದೀಪಕ್ ಚಹಾರ್ ಐಪಿಎಲ್ನಿಂದ ಹೊರಗುಳಿದಿದ್ದರು. ಕೆಳ ಕ್ರಮಾಂಕದಲ್ಲಿ ಅವರ ಬ್ಯಾಟಿಂಗ್ ಸಾಮರ್ಥ್ಯವು ಅವರನ್ನು ವೈಟ್ ಬಾಲ್ ಕ್ರಿಕೆಟ್ನಲ್ಲಿ ತಂಡದ ಉತ್ತಮ ಆಸ್ತಿಯನ್ನಾಗಿ ಮಾಡುತ್ತದೆ.
ಇನ್ನು ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್ ಮತ್ತು ವಾಷಿಂಗ್ಟನ್ ಸುಂದರ್ ಕೂಡ ತಂಡಲ್ಲಿದ್ದಾರೆ ಮತ್ತು ಭಾರತ ತಂಡದೊಂದಿಗೆ ಸ್ವಲ್ಪ ಸಮಯವನ್ನು ಹೊಂದಲು ಇದು ಅವರಿಗೆ ಪ್ರಮುಖ ಅವಕಾಶವಾಗಿದೆ. ಕನ್ನಡಿಗ ಪ್ರಸಿದ್ಧ್ ಕೃಷ್ಣ ಮತ್ತು ಅವೇಶ್ ಖಾನ್ ಅವರ ಜೊತೆಯಲ್ಲಿ ಮೊಹಮ್ಮದ್ ಸಿರಾಜ್ ವೇಗದ ಪಡೆಯನ್ನು ಮುನ್ನಡೆಸಲಿದ್ದಾರೆ.
ಜಿಂಬಾಬ್ವೆ ವಿರುದ್ಧದ 3 ಏಕದಿನ ಪಂದ್ಯಗಳಿಗೆ ಭಾರತ ತಂಡ
ಶಿಖರ್ ಧವನ್ (ನಾಯಕ), ರುತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಇಶಾನ್ ಕಿಶನ್ (ವಿಕೆಟ್-ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್-ಕೀಪರ್), ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ಅವೇಶ್ ಖಾನ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್, ದೀಪಕ್ ಚಾಹರ್.