
ಟೀಂ ಇಂಡಿಯಾ ಏಷ್ಯಾ ಕಪ್ಗೆ ಮುಂಚಿತವಾಗಿ ಜಿಂಬಾಬ್ವೆ ಪ್ರವಾಸ ಕೈಗೊಳ್ಳಲಿದ್ದು, ಆಗಸ್ಟ್ 18ರಿಂದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಜಿಂಬಾಬ್ವೆ ತಂಡವನ್ನು ಎದುರಿಸಲು ಸಜ್ಜಾಗಿದೆ.
ಜಿಂಬಾಬ್ವೆ ವಿರುದ್ಧದ ಸರಣಿಗೆ ಮತ್ತೆ ಫಿಟ್ ಆಗಿ ತಂಡಕ್ಕೆ ಮರಳಿರುವ ಕೆಎಲ್ ರಾಹುಲ್ ಭಾರತ ತಂಡವನ್ನು ಮುನ್ನಡೆಸಲಿದ್ದರೆ, ಈ ಹಿಂದೆ ನಾಯಕರಾಗಿ ನೇಮಕವಾಗಿದ್ದ ಶಿಖರ್ ಧವನ್ ಅವರನ್ನು ಉಪ ನಾಯಕ ಸ್ಥಾನಕ್ಕೆ ನೇಮಿಸಲಾಗಿದೆ.
ಬಿಸಿಸಿಐ ವೈದ್ಯಕೀಯ ತಂಡವು ಕೆಎಲ್ ರಾಹುಲ್ ಅವರನ್ನು ಮೌಲ್ಯಮಾಪನ ಮಾಡಿದೆ ಮತ್ತು ಜಿಂಬಾಬ್ವೆಯಲ್ಲಿ ಮುಂಬರುವ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಆಡಲು ಅವರನ್ನು ತೆರವುಗೊಳಿಸಿದೆ.
ಅಖಿಲ ಭಾರತ ಹಿರಿಯ ಆಯ್ಕೆ ಸಮಿತಿಯು ಅವರನ್ನು ತಂಡದ ನಾಯಕರನ್ನಾಗಿ ನೇಮಿಸಿದೆ ಮತ್ತು ಶಿಖರ್ ಧವನ್ ಅವರನ್ನು ಉಪನಾಯಕನನ್ನಾಗಿ ನೇಮಿಸಿದೆ ಎಂದು ಬಿಸಿಸಿಐ ಹೇಳಿಕೆಯಲ್ಲಿ ತಿಳಿಸಿದೆ.

ಇದಕ್ಕೂ ಮುನ್ನ ಜುಲೈ 30ರಂದು ಬಿಸಿಸಿಐ ಪ್ರಕಟಿಸಿದ ಆರಂಭಿಕ 15 ಸದಸ್ಯರ ತಂಡದಲ್ಲಿ ಕೆಎಲ್ ರಾಹುಲ್ ಹೆಸರು ಇರಲಿಲ್ಲ ಮತ್ತು ಶಿಖರ್ ಧವನ್ ತಂಡವನ್ನು ಮುನ್ನಡೆಸಬೇಕಿತ್ತು. ಆದರೆ, ಗುರುವಾರ ಬಿಸಿಸಿಐ ಹೇಳಿಕೆಯಲ್ಲಿ ಕೆಎಲ್ ರಾಹುಲ್ಗೆ ಆಡಲು ಅನುಮತಿ ನೀಡಲಾಗಿದೆ ಎಂದು ತಿಳಿಸಿದೆ. ಮೂರು ಏಕದಿನ ಪಂದ್ಯಗಳು ಆಗಸ್ಟ್ 18, 20 ಮತ್ತು 22ರಂದು ಹರಾರೆ ಸ್ಪೋರ್ಟ್ಸ್ ಕ್ಲಬ್ನಲ್ಲಿ ನಡೆಯಲಿವೆ.
ಈ ಹಿಂದೆ ಏಷ್ಯಾಕಪ್ನ ಭಾರತ ತಂಡದಲ್ಲಿ ಕೆಎಲ್ ರಾಹುಲ್ ಸ್ಥಾನ ಪಡೆದಿದ್ದಾರೆ. ಅವರು ಗಾಯದಿಂದ ಚೇತರಿಸಿಕೊಂಡ ಸ್ವಲ್ಪ ಸಮಯದ ನಂತರ ಭಾರತ ತಂಡಕ್ಕೆ ಮರಳಿದ್ದಾರೆ. ಕೆಲವು ತಿಂಗಳ ಹಿಂದೆ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯ ಮೊದಲು ಕೆಎಲ್ ರಾಹುಲ್ ಗಾಯಗೊಂಡಿದ್ದರು ಮತ್ತು ಅವರು ಐದು ಪಂದ್ಯಗಳ ಸ್ಪರ್ಧೆಯಲ್ಲಿ ಕಾಣಿಸಿಕೊಂಡಿರಲಿಲ್ಲ.

ಕೆಎಲ್ ರಾಹುಲ್ ಜರ್ಮನಿಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು ಮತ್ತು ಇಂಗ್ಲೆಂಡ್, ವೆಸ್ಟ್ ಇಂಡೀಸ್ ಸರಣಿಗಳನ್ನು ತಪ್ಪಿಸಿಕೊಂಡರು. ಅವರು ವೆಸ್ಟ್ ಇಂಡೀಸ್ ಪ್ರವಾಸದ ಮೊದಲು ಕೋವಿಡ್-19 ಪಾಸಿಟಿವ್ ಕಾಣಿಸಿಕೊಂಡಿತ್ತು. ಇದರಿಂದಾಗಿ ತಂಡದೊಂದಿಗೆ ಪ್ರಯಾಣಿಸಲು ಸಾಧ್ಯವಾಗಲಿಲ್ಲ. ಇದೀಗ, ಸೆಪ್ಟೆಂಬರ್ 27ರಿಂದ ಯುಎಇಯಲ್ಲಿ ನಡೆಯಲಿರುವ ಏಷ್ಯಾ ಕಪ್ ಟಿ20 ಸ್ಪರ್ಧೆಯ ಮುನ್ನ ಕೆಎಲ್ ರಾಹುಲ್ ಈಗ ನಿರ್ಣಾಯಕ ಆಟದ ಸಮಯವನ್ನು ಪಡೆಯಲಿದ್ದಾರೆ.
ಜಿಂಬಾಬ್ವೆ ಪ್ರವಾಸಕ್ಕೆ ಕೆಎಲ್ ರಾಹುಲ್ ಸೇರ್ಪಡೆಯೊಂದಿಗೆ ಬಿಸಿಸಿಐ ಆಯ್ಕೆ ಸಮಿತಿ 16 ಸದಸ್ಯರ ಭಾರತ ತಂಡವನ್ನು ಹೆಸರಿಸಿದೆ.
3 ಏಕದಿನ ಪಂದ್ಯಗಳಿಗೆ ಭಾರತ ತಂಡ:
ಕೆಎಲ್ ರಾಹುಲ್ (ನಾಯಕ) ಶಿಖರ್ ಧವನ್ (ಉಪನಾಯಕ), ರುತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ಅವೇಶ್ ಖಾನ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್, ದೀಪಕ್ ಚಾಹರ್.