ಜುಲೈ 3 ಬುಧವಾರ, ಭಾರತ ಮತ್ತು ಜಿಂಬಾಬ್ವೆ ನಡುವಿನ 5 ಟಿ20 ಪಂದ್ಯಗಳ ಸರಣಿಯು ಜುಲೈ 6 ರಂದು ಪ್ರಾರಂಭವಾಗಲಿದೆ. 8 ವರ್ಷಗಳ ಬಳಿಕ ಜಿಂಬಾಬ್ವೆ ನೆಲದಲ್ಲಿ ಟೀಮ್ ಇಂಡಿಯಾ ಟಿ20 ಪಂದ್ಯ ಆಡಲಿದೆ.
ಈಗಾಗಲೇ ಶುಭಮನ್ ಗಿಲ್ ನಾಯಕತ್ವದ ಭಾರತ ತಂಡ ಹರಾರೆ ತಲುಪಿದೆ. ಹಿರಿಯ ಆಟಗಾರರ ಅನುಪಸ್ಥಿತಿಯಲ್ಲಿ ತಂಡದ ನಾಯಕತ್ವವನ್ನು ಶುಭ್ಮನ್ ಗಿಲ್ ಅವರಿಗೆ ವಹಿಸಲಾಗಿದೆ. ಈ ಸರಣಿಯೂ ಶುಭಮನ್ ಗಿಲ್ ಅವರಿಗೆ ಅಗ್ನಿ ಪರೀಕ್ಷೆಯಾಗಿದೆ. ಇದರಲ್ಲಿ ಗಿಲ್ ಪಾಸ್ ಆದರೆ ಮುಂದೆ ಚುಟುಕು ಕ್ರಿಕೆಟ್ನಲ್ಲಿ ಟೀಮ್ ಇಂಡಿಯಾ ಮುನ್ನೆಡೆಸುವ ಅದೃಷ್ಟ ಸಿಗಲಿದೆ.

ಟಿ20 ವಿಶ್ವಕಪ್ನ ಭಾರತದ ತಂಡದಲ್ಲಿದ್ದ ಯಶಸ್ವಿ ಜೈಸ್ವಾಲ್, ಶಿವಂ ದುಬೆ ಮತ್ತು ಸಂಜು ಸ್ಯಾಮ್ಸನ್ ಅವರನ್ನು ಮಾತ್ರ ಜಿಂಬಾಬ್ವೆ ಪ್ರವಾಸಕ್ಕೆ ಆಯ್ಕೆ ಮಾಡಲಾಗಿದೆ. ಆದರೆ, ಈ ಮೂವರೂ ಮೊದಲ ಎರಡು ಪಂದ್ಯಗಳಲ್ಲಿ ಅಲಭ್ಯರಾಗಿದ್ದಾರೆ.
ಇಂತಹ ಪರಿಸ್ಥಿತಿಯಲ್ಲಿ ಸಾಯಿ ಸುದರ್ಶನ್, ಜಿತೇಶ್ ಶರ್ಮಾ ಮತ್ತು ಹರ್ಷಿತ್ ರಾಣಾ ಕೂಡ ಆಯ್ಕೆಯಾಗಿದ್ದಾರೆ. ಮೂವರೂ ಆಟಗಾರರನ್ನು ಮೊದಲ ಎರಡು ಪಂದ್ಯಗಳಿಗೆ ಮಾತ್ರ ಆಯ್ಕೆ ಮಾಡಲಾಗಿದೆ. ಹೆಚ್ಚಿನ ಹಿರಿಯ ಆಟಗಾರರ ಅನುಪಸ್ಥಿತಿಯಲ್ಲಿ ಅಭಿಷೇಕ್ ಶರ್ಮಾ, ಧ್ರುವ್ ಜುರೆಲ್, ರಿಯಾನ್ ಪರಾಗ್ ಮತ್ತು ತುಷಾರ್ ದೇಶಪಾಂಡೆ ಟೀಮ್ ಇಂಡಿಯಾ ಪರ ಚೊಚ್ಚಲ ಪಾದರ್ಪಣೆ ಪಂದ್ಯವಾಡಲು ಸಿದ್ದರಾಗಿದ್ದಾರೆ.
ಭಾರತ ಮತ್ತು ಜಿಂಬಾಬ್ವೆಯ ಹೆಡ್ ಟು ಹೆಡ್ ರೆಕಾರ್ಡ್ ಕುರಿತು ನೋಡುವುದಾದರೇ, ಉಭಯ ತಂಡಗಳ ನಡುವೆ ಇದುವರೆಗೆ 8 ಪಂದ್ಯಗಳು ನಡೆದಿವೆ. ಭಾರತ 6 ಪಂದ್ಯಗಳನ್ನು ಗೆದ್ದಿದೆ. ಜಿಂಬಾಬ್ವೆ ಎರಡು ಪಂದ್ಯಗಳಲ್ಲಿ ಯಶಸ್ಸು ಕಂಡಿದೆ.
2015 ಮತ್ತು 2016ರಲ್ಲಿ ಭಾರತವನ್ನು ಜಿಂಬಾಬ್ವೆ ಸೋಲಿಸಿತ್ತು. ಹೀಗಾಗಿ 8 ವರ್ಷಗಳಿಂದ ಜಿಂಬಾಬ್ವೆ ವಿರುದ್ಧ ಭಾರತ ಸೋಲು ಕಾಣದೆ ಮೇಲುಗೈ ಸಾಧಿಸಿದೆ. ಭಾರತ ತಂಡವು ಜಿಂಬಾಬ್ವೆ ಎದುರು 80.95%ರ ಗೆಲುವಿನ ಸರಾಸರಿ ಹೊಂದಿದೆ.
ಭಾರತ: ಶುಭಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ಋತುರಾಜ್ ಗಾಯಕ್ವಾಡ್, ಅಭಿಷೇಕ್ ಶರ್ಮಾ, ರಿಂಕು ಸಿಂಗ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ಶಿವಂ ದುಬೆ, ರಿಯಾನ್ ಪರಾಗ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಅವೇಶ್ ಖಾನ್, ಖಲೀಲ್ ಅಹ್ಮದ್ ಮುಖೇಶ್ ಕುಮಾರ್, ತುಷಾರ್ ದೇಶಪಾಂಡೆ.
ಜಿಂಬಾಬ್ವೆ: ಸಿಕಂದರ್ ರಝಾ (ನಾಯಕ), ಫರಾಜ್ ಅಕ್ರಂ, ಬ್ರಿಯಾನ್ ಬೆನೆಟ್, ಜೊನಾಥನ್ ಕ್ಯಾಂಪ್ಬೆಲ್, ಟೆಂಡೈ ಚಟಾರಾ, ಲ್ಯೂಕ್ ಜೊಂಗ್ವೆ, ಇನ್ನೋಸೆಂಟ್ ಕೈಯಾ, ಕ್ಲೈವ್ ಮದಂಡೆ, ವೆಸ್ಲಿ ಮಾಧೆವೆರೆ, ತಡಿವಾನಾಶೆ ಮರುಮಣಿ, ವೆಲ್ಲಿಂಗ್ಟನ್ ಮಸಕಡ್ಜಾ, ಬ್ರ್ಯಾಂಡನ್ ಮಾವುಟಾ, ಆಶೀರ್ವಾದ ನಜರಾಬ್ವಾನಿ, ಆಶೀರ್ವಾದ ನಜರಾಬ್ವಾನಿ ರಿಚರ್ಡ್ ನ್ಗರ್ವಾ, ಮಿಲ್ಟನ್ ಶುಂಬಾ.