ನವದೆಹಲಿ: ಭಾರತ ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್, ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಶ್ರೇಯಸ್ ಐಯ್ಯರ್ ಅವರು 14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಆರಂಭಕ್ಕೂ ಮುನ್ನವೇ ಅಂದರೆ ಏಪ್ರಿಲ್ 8ರಂದು ಶಸ್ತ್ರ ಚಿಕಿತ್ಸೆಗೆ ಒಳಗಾಗಲಿದ್ದಾರೆ.
ಸಚಿನ್ ತೆಂಡೂಲ್ಕರ್ ಯುಗದ ಬ್ರಹ್ಮಾಂಡ ಸತ್ಯ ಬಾಯ್ಬಿಟ್ಟ ವೀರೇಂದ್ರ ಸೆಹ್ವಾಗ್!
ಭಾರತ-ಇಂಗ್ಲೆಂಡ್ ನಡುವಿನ ಏಕದಿನ ಸರಣಿಯ ವೇಳೆ ಶ್ರೇಯಸ್ ಐಯ್ಯರ್ ಭುಜದ ಗಾಯಕ್ಕೀಡಾಗಿ ತಂಡದಿಂದ ಹೊರ ಬಿದ್ದಿದ್ದರು. ಗಾಯ ತೀವ್ರ ಸ್ವರೂಪದ್ದಾದ್ದರಿಂದ ಈ ಬಾರಿಯ ಐಪಿಎಲ್ ಸೀಸನ್ನಲ್ಲಿ ಅಯ್ಯರ್ ಡೆಲ್ಲಿ ಕ್ಯಾಪಿಟಲ್ಸ್ ಪರ ಕಣಕ್ಕಿಳಿಯುತ್ತಿಲ್ಲ.
ಅಯ್ಯರ್ ಅನುಪಸ್ಥಿತಿಯಲ್ಲಿ ಯುವ ಬ್ಯಾಟ್ಸ್ಮನ್ ಕಮ್ ವಿಕೆಟ್ ಕೀಪರ್ ರಿಷಭ್ ಪಂತ್ 14ನೇ ಆವೃತ್ತಿಯ ಐಪಿಎಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮುನ್ನಡೆಸಲಿದ್ದಾರೆ. 26ರ ಹರೆಯದ ಶ್ರೇಯಸ್ ಮಾರ್ಚ್ 23ರಂದು ಪುಣೆಯಲ್ಲಿ ನಡೆದಿದ್ದ ಮೊದಲನೇ ಏಕದಿನ ಪಂದ್ಯದ ವೇಳೆ ಗಾಯ ಮಾಡಿಕೊಂಡಿದ್ದರು.
ಆರ್ಸಿಬಿಗೆ ಕಪ್ ಗೆಲ್ಲಿಸಿಕೊಡಬಲ್ಲ 3 ಅನ್ಕ್ಯಾಪ್ಡ್ ಭಾರತೀಯರ ಹೆಸರಿಸಿದ ಹೆಸನ್!
ಇಂಗ್ಲೆಂಡ್ ಇನ್ನಿಂಗ್ಸ್ನಲ್ಲಿ ವೇಗಿ ಶಾರ್ದೂಲ್ ಠಾಕೂರ್ ಓವರ್ನಲ್ಲಿ ಜಾನಿ ಬೇರ್ಸ್ಟೋವ್ ಅವರ ಬೌಂಡರಿ ತಡೆಯಲು ಯತ್ನಿಸಿದ ಐಯ್ಯರ್ ಭುಜಕ್ಕೆ ಗಾಯ ಮಾಡಿಕೊಂಡಿದ್ದರು. ಏಪ್ರಿಲ್ 9ರಿಂದ ಐಪಿಎಲ್ ಟೂರ್ನಿ ಆರಂಭಗೊಳ್ಳಲಿದೆ. ಏಪ್ರಿಲ್ 10ರಂದು ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಡಲ್ಸ್ ಮಧ್ಯೆ ಪಂದ್ಯ ನಡೆಯಲಿದೆ.