ಬೆಂಗಳೂರು, ಜೂನ್ 16 : ವಿಶ್ವಕಪ್ ಕ್ರಿಕೆಟ್ನಲ್ಲಿ ಭಾರತ-ಪಾಕಿಸ್ತಾನ ನಡುವಿನ ಹೈ ವೋಲ್ಟೇಟ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಭಾರತ ತಂಡಕ್ಕೆ ಶುಭಾಶಯ ಸಲ್ಲಿಸಿದ್ದಾರೆ.
ಭಾನುವಾರ ಎಚ್.ಡಿ.ಕುಮಾರಸ್ವಾಮಿ ಅವರು ಈ ಕುರಿತು ಟ್ವೀಟ್ ಮಾಡಿದ್ದಾರೆ. 'ಆಲ್ ದಿ ಬೆಸ್ಟ್ ಟೀಮ್ ಇಂಡಿಯಾ. ಜಯಿಸಿ ಬನ್ನಿ' ಎಂದು ಭಾರತ ತಂಡಕ್ಕೆ ಟ್ವೀಟ್ ಮೂಲಕ ಶುಭಾಶಯ ಕೋರಿದ್ದಾರೆ.
ಭಾರತ-ಪಾಕಿಸ್ತಾನ ಕದನಕ್ಕೂ ಮುನ್ನ ಟ್ವಿಟ್ಟರಲ್ಲಿ ಮಳೆ, ಗುಡುಗಿನ ಸದ್ದು
ಮ್ಯಾಂಚೆಸ್ಟರ್ನಲ್ಲಿ ಭಾರತ-ಪಾಕಿಸ್ತಾನದ ನಡುವೆ ಏಕದಿನ ಪಂದ್ಯ ಇಂದು ನಡೆಯಲಿದೆ. ಭಾನುವಾರ ಮಧ್ಯಾಹ್ನ 3ಗಂಟೆಗೆ ಪಂದ್ಯ ಆರಂಭವಾಗಲಿದೆ. ಇಡೀ ವಿಶ್ವವೇ ಈ ಪಂದ್ಯವನ್ನು ಎದುರು ನೋಡುತ್ತಿದೆ.
ಭಾರತ-ಪಾಕಿಸ್ತಾನ ಪಂದ್ಯಕ್ಕೆ ಮಳೆ ಅಡ್ಡಿ ಪಡಿಸದಿರಲಿ ಎಂದು ಕೋಟ್ಯಾಂತರ ಅಭಿಮಾನಿಗಳು ದೇವರನ್ನು ಪ್ರಾರ್ಥಿಸುತ್ತಿದ್ದಾರೆ. ಭಾನುವಾರ ಪಂದ್ಯ ನಡೆಯುತ್ತಿದೆ, ಅಭಿಮಾನಿಗಳು ಮಧ್ಯಾಹ್ನದ ಬಳಿಕ ಟಿವಿ ಮುಂದೆ ಠಿಕಾಣಿ ಹೂಡುವುದು ಖಚಿತವಾಗಿದೆ.