
ನವದೆಹಲಿ, ಜನವರಿ 8: ಮುಂಬರಲಿರುವ ಆಸ್ಟ್ರೇಲಿಯಾ ಮತ್ತು ನ್ಯೂಜಿಲ್ಯಾಂಡ್ ವಿರುದ್ಧದ ಏಕದಿನ ಸರಣಿಯಿಂದ ಭಾರತದ ಮಧ್ಯಮ ವೇಗಿ ಜಸ್ಪ್ರೀತ್ ಬೂಮ್ರಾ ಹೊರಗುಳಿದಿದ್ದಾರೆ. ಬೂಮ್ರಾಗೆ ವಿಶ್ರಾಂತಿ ನೀಡಿರುವ ಬಿಸಿಸಿಐ, ಅವರ ಸ್ಥಾನಕ್ಕೆ ಬದಲಿ ಆಯ್ಕೆ ನಡೆಸಿದೆ. ಆಸೀಸ್ ವಿರುದ್ಧದ ಏಕದಿನ ಸರಣಿ ಜನವರಿ 12ರಿಂದ ಆರಂಭಗೊಳ್ಳಲಿದೆ.
'ಕೆಲಸದ ಹೊರೆಯ ಕಾರಣ ಬೌಲರ್ ಬೂಮ್ರಾಗೆ ವಿಶ್ರಾಂತಿ ನೀಡಲಾಗಿದೆ. ಮುಂಬರಲಿರುವ ಆಸ್ಟ್ರೇಲಿಯಾ ಮತ್ತು ಏಕದಿನ ಸರಣಿಗೆ ಭಾರತ ತಂಡದಲ್ಲಿ ಬೂಮ್ರಾ ಸ್ಥಾನವನ್ನು ಮೊಹಮ್ಮದ್ ಸಿರಾಜ್ ತುಂಬಲಿದ್ದಾರೆ' ಎಂದು ಬಿಸಿಸಿಐ ಮಂಗಳವಾರ (ಜನವರಿ 8) ನೀಡಿರುವ ಹೇಳಿಕೆಯಲ್ಲಿ ತಿಳಿಸಿದೆ.
'ನ್ಯೂಜಿಲ್ಯಾಂಡ್ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿಗೆ ಸಿದ್ಧಾರ್ಥ್ ಕೌಲ್ ಅವರನ್ನೂ ತಂಡದಲ್ಲಿ ಸೇರಿಸಿಕೊಳ್ಳಲಾಗಿದೆ' ಎಂದು ಬಿಸಿಸಿಐ ಹೇಳಿಕೊಂಡಿದೆ. 12 ತಿಂಗಳ ಹಿಂದಷ್ಟೇ ಟೆಸ್ಟ್ಗೆ ಪಾದಾರ್ಪಣೆ ಮಾಡಿರುವ ಬೂಮ್ರಾ ಮೂರೂ ಮಾದರಿಯ ಕ್ರಿಕೆಟ್ನಲ್ಲಿ ಭಾರತ ತಂಡದ ಶಕ್ತಿಯಾಗಿ ಗುರುತಿಸಿಕೊಂಡಿದ್ದಾರೆ.
ಇತ್ತೀಚೆಗಷ್ಟೇ ಮುಕ್ತಾಯಗೊಂಡ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲೂ ಜಸ್ಪ್ರೀತ್ ಬೌಲಿಂಗ್ಗಾಗಿ ಮಿಂಚಿದ್ದರು. ಬೌಲಿಂಗ್ ಮತ್ತು ಬ್ಯಾಟಿಂಗ್ ಎರಡೂ ವಿಭಾಗದ ಪ್ರದರ್ಶನದಿಂದಾಗಿ ಭಾರತ ಆಸೀಸ್ ನೆಲದಲ್ಲಿ 71 ವರ್ಷಗಳ ಬಳಿಕ ಚೊಚ್ಚಲ ಟೆಸ್ಟ್ ಸರಣಿ ಗೆದ್ದ ಖುಷಿಯನ್ನು ಸಂಭ್ರಮಿಸುವಂತಾಗಿತ್ತು.