
ಸರ್ಕಾರಗಳ ನಿರ್ಲಕ್ಷ್ಯ
2018ರಲ್ಲಿ ಭಾರತದ ಬದ್ಧವೈರಿ ಪಾಕಿಸ್ತಾನದ ವಿರುದ್ಧ ಅಂಧರ ಕ್ರಿಕೆಟ್ ವಿಶ್ವಕಪ್ ಫೈನಲ್ ಪಂದ್ಯದಲ್ಲಿ 308 ರನ್ ಚೇಸ್ ಮಾಡುವುದರ ಮೂಲಕ ಭಾರತ ತಂಡ ವಿಶ್ವಕಪ್ ಗೆದ್ದಿತ್ತು. ಹೀಗೆ ಪಾಕಿಸ್ತಾನದ ವಿರುದ್ಧ ಫೈನಲ್ ಪಂದ್ಯದಲ್ಲಿ ಗೆಲ್ಲುವುದರ ಮೂಲಕ ಐತಿಹಾಸಿಕ ದಾಖಲೆ ಮಾಡಿದ ಅಂಧರ ತಂಡದ ಆಟಗಾರನೋರ್ವ ಈ ರೀತಿ ಕೂಲಿ ಕೆಲಸ ಮಾಡಿ ಬದುಕುತ್ತಿರುವುದು ಸದ್ಯ ಅಂಧ ಕ್ರಿಕೆಟಿಗರ ಕುರಿತು ಕ್ರೀಡಾ ಇಲಾಖೆ ಮತ್ತು ಸರಕಾರಗಳು ತೋರುತ್ತಿರುವ ಅಸಹಾಯಕತೆಯ ಸಂಕೇತವಾಗಿದೆ.

ಒಲಿಂಪಿಕ್ಸ್ ಕ್ರೀಡಾಪಟುಗಳಿಗೆ ಸಿಗುವ ಬೆಲೆ ಇವರಿಗೇಕಿಲ್ಲ?
ಸದ್ಯ ಭಾರತದ ಅಂಧರ ವಿಶ್ವಕಪ್ ವಿಜೇತ ತಂಡದ ಆಟಗಾರನಾಗಿದ್ದ ನರೇಶ್ ತುಮ್ದಾ ಕೂಲಿ ಕೆಲಸ ಮಾಡುತ್ತಿರುವುದರ ಕುರಿತು ನೆಟ್ಟಿಗರು ಅಸಮಾಧಾನ ವ್ಯಕ್ತಪಡಿಸಿದ್ದು ಒಲಿಂಪಿಕ್ಸ್ನಲ್ಲಿ ಪದಕ ಗೆದ್ದ ಕ್ರೀಡಾಪಟುಗಳಿಗೆ ಸಿಗುವ ಮನ್ನಣೆ, ಗೌರವ ಮತ್ತು ಉದ್ಯೋಗಾವಕಾಶಗಳು ಅಂಧರ ಕ್ರಿಕೆಟ್ ವಿಶ್ವಕಪ್ ತಂದುಕೊಟ್ಟ ಆಟಗಾರರಿಗೆ ಯಾಕಿಲ್ಲ? ಎಂದು ಕ್ರೀಡಾ ಇಲಾಖೆ ಮತ್ತು ಕೇಂದ್ರ ಸರ್ಕಾರವನ್ನು ಪ್ರಶ್ನಿಸುತ್ತಿದ್ದಾರೆ.

ಅಂಧರಿಗೆ ಬದುಕುವುದು ಕಷ್ಟವಾದರೂ ನಿರ್ಲಕ್ಷ್ಯ
ಮೊದಲೇ ಅಂಧರಾಗಿರುವ ಈ ಆಟಗಾರರು ಸಾಮಾನ್ಯ ಆಟಗಾರರ ರೀತಿ ಇತರ ಕೆಲಸಗಳನ್ನು ಮಾಡಿ ಬದುಕು ಕಟ್ಟಿಕೊಳ್ಳಲು ಕೂಡ ಅಸಾಧ್ಯ. ಕಣ್ಣೇ ಇಲ್ಲದೆ ಐತಿಹಾಸಿಕ ಸಾಧನೆ ಮಾಡಿರುವ ಇಂಥವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳನ್ನು ಕಲ್ಪಿಸಿ, ಸಮಾಜದಲ್ಲಿ ಬದುಕು ಕಟ್ಟಿಕೊಳ್ಳಲು ಅವಕಾಶ ಮಾಡಿಕೊಡದ ಕ್ರೀಡಾ ಇಲಾಖೆ ಮತ್ತು ಕೇಂದ್ರ ಸರ್ಕಾರ ಇರುವುದು ವ್ಯರ್ಥ ಎಂದು ಕ್ರೀಡಾಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. 2018ರಲ್ಲಿ ಅಂಧರ ವಿಶ್ವಕಪ್ ಗೆದ್ದಾಗ ಇದೇ ಆಟಗಾರರಿಗೆ ಸಾಲು ಸಾಲು ಶುಭಾಶಯಗಳ ಸುರಿಮಳೆಗಳೇ ಸುರಿದಿದ್ದವು, ನಗದು ಪುರಸ್ಕಾರಗಳ ಆಶ್ವಾಸನೆ ಘೋಷಣೆಯಾಗಿದ್ದವು ಮತ್ತು ಇಂತಹ ಆಟಗಾರರ ಬೆಂಬಲಕ್ಕೆ ಸದಾ ನಿಲ್ಲುತ್ತೇವೆ ಎಂದು ಹಲವಾರು ಮಂದಿ ಹೇಳಿಕೆಗಳನ್ನು ನೀಡಿದ್ದರು. ಆದರೆ ಅಂದು ನೀಡಿದ್ದ ಹೇಳಿಕೆಗಳು ಮತ್ತು ಆಶ್ವಾಸನೆಗಳು ಈಗ ಯಾವುದೂ ಸಹ ನಿಜವಾಗಿಲ್ಲ, ಹೀಗಾಗಿಯೇ ಇಂದು ನರೇಶ್ ತುಮ್ದಾ ಇಟ್ಟಿಗೆ ಹೊರುವಂತಹ ಪರಿಸ್ಥಿತಿಗೆ ಬಂದು ನಿಂತಿದ್ದಾರೆ.


Click it and Unblock the Notifications
