ಈ ಮೂವರಿಗೆ ವಿಶ್ರಾಂತಿ ಕೊಡಿ ಎಂದ ಗೌತಮ್ ಗಂಭೀರ್
ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಮೂರನೇ ಏಕದಿನ ಪಂದ್ಯದಲ್ಲಿ ಯಾವ ಆಟಗಾರರಿಗೆ ಅವಕಾಶವನ್ನು ನೀಡಬೇಕು ಎಂಬುದರ ಕುರಿತು ಮಾತನಾಡಿರುವ ಗೌತಮ್ ಗಂಭೀರ್ ಹಿರಿಯ ಆಟಗಾರರಾದ ಜಸ್ಪ್ರೀತ್ ಬುಮ್ರಾ, ರವಿಚಂದ್ರನ್ ಅಶ್ವಿನ್ ಹಾಗೂ ಭುವನೇಶ್ವರ್ ಕುಮಾರ್ ಅವರನ್ನು ತಂಡದಿಂದ ಹೊರಗಿಡಬೇಕು ಎಂದಿದ್ದಾರೆ. ಈ ಮೂವರಿಗೂ ವಿಶ್ರಾಂತಿ ನೀಡುವ ಮೂಲಕ ಇತರೆ ಆಟಗಾರರಿಗೆ ಆಡುವ ಅವಕಾಶವನ್ನು ಕಲ್ಪಿಸಿಕೊಡಬೇಕು ಎಂದು ಗಂಭೀರ್ ಅಭಿಪ್ರಾಯಪಟ್ಟಿದ್ದಾರೆ.
ಈ ಬೌಲರ್ಗಳಿಗೆ ಅವಕಾಶ ನೀಡಬೇಕು ಎಂದ ಗಂಭೀರ್
ಇನ್ನೂ ಮುಂದುವರಿದು ಮಾತನಾಡಿರುವ ಗೌತಮ್ ಗಂಭೀರ್ ಹೀಗೆ ಟೀಮ್ ಇಂಡಿಯಾದ ಈ ಮೂವರು ಹಿರಿಯ ಬೌಲರ್ಗಳಿಗೆ ವಿಶ್ರಾಂತಿಯನ್ನು ನೀಡಿ ಸರಣಿಯಲ್ಲಿ ಬೆಂಚ್ ಕಾಯುತ್ತಿರುವ ಜಯಂತ್ ಯಾದವ್, ಪ್ರಸಿದ್ಧ್ ಕೃಷ್ಣ ಹಾಗೂ ಮೊಹಮ್ಮದ್ ಸಿರಾಜ್ ಅವರಿಗೆ ಆಡುವ ಬಳಗದಲ್ಲಿ ಅವಕಾಶವನ್ನು ನೀಡಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹೀಗೆ ಈ ಪಂದ್ಯದ ಮೂಲಕ ಬೆಂಚ್ ಕಾಯುತ್ತಿರುವ ಬೌಲರ್ಗಳಿಗೆ ಅವಕಾಶ ನೀಡಿ ಅವರನ್ನು ಪರೀಕ್ಷಿಸಬಹುದು ಎಂದು ಗಂಭೀರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಬ್ಯಾಟಿಂಗ್ ವಿಭಾಗದಲ್ಲಿ ಯಾವುದೇ ಬದಲಾವಣೆ ಬೇಡ
ಬೌಲಿಂಗ್ ವಿಭಾಗದಲ್ಲಿ ಹಿರಿಯ ಆಟಗಾರರಿಗೆ ವಿಶ್ರಾಂತಿಯನ್ನು ನೀಡಿ ಬೆಂಚ್ ಕಾಯುತ್ತಿದ್ದ ಬೌಲರ್ಗಳಿಗೆ ಅವಕಾಶಗಳನ್ನು ನೀಡಬೇಕು ಎಂದಿರುವ ಗೌತಮ್ ಗಂಭೀರ್ ಬ್ಯಾಟಿಂಗ್ ವಿಭಾಗದಲ್ಲಿ ಯಾವುದೇ ಬದಲಾವಣೆಯ ಅಗತ್ಯವಿಲ್ಲ ಎಂದಿದ್ದಾರೆ.
ಭಾರತ ಸಂಭಾವ್ಯ ಆಡುವ ಬಳಗ: ಶಿಖರ್ ಧವನ್, ರುತುರಾಜ್ ಗಾಯಕವಾಡ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ (ನಾಯಕ), ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ ( ವಿಕೆಟ್ ಕೀಪರ್), ಶಾರ್ದೂಲ್ ಠಾಕೂರ್, ರವಿಚಂದ್ರನ್ ಅಶ್ವಿನ್/ ಜಯಂತ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್/ ದೀಪಕ್ ಚಹಾರ್, ಯುಜುವೇಂದ್ರ ಚಾಹಲ್