
ಕೆಎಲ್ ರಾಹುಲ್ಗೆ ನಾಯಕನ ಪಟ್ಟ
ದಕ್ಷಿಣ ಆಪ್ರಿಕಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಗೆ ಖಾಯಂ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಹಾಗೂ ಜಸ್ಪ್ರೀತ್ ಬೂಮ್ರಾಗೆ ವಿಶ್ರಾಂತಿ ನೀಡಲಾಗಿದೆ. ಹೀಗಾಗಿ ಯುವ ಆಟಗಾರರಿಗೆ ಹೆಚ್ಚಿನ ಅವಕಾಶ ದೊರೆತಿದೆ. ಈ ತಂಡವನ್ನು ಕನ್ನಡಿಗ ಕೆಎಲ್ ರಾಹುಲ್ ಮುನ್ನಡೆಸಲಿದ್ದಾರೆ. ಐಪಿಎಲ್ನಲ್ಲಿನಾಯಕನಾಗಿ ಮಿಂಚಿರುವ ಹಾರ್ದಿಕ್ ಪಾಂಡ್ಯಗೆ ಈ ಸರಣಿಯಲ್ಲಿ ನಾಯಕತ್ವ ನೀಡಬಹುದು ಎಂಬ ನಿರೀಕ್ಷೆಯಿತ್ತು. ಆದರೆ ಕೆಎಲ್ ರಾಹುಲ್ಗೆ ಮಣೆ ಹಾಕಲಾಗಿದ್ದು ಉಪ ನಾಯಕತ್ವದ ಹೊಣೆಗಾರಿಕೆ ರಿಷಬ್ ಪಂತ್ ಹೆಗಲಿಗೆ ಬಿದ್ದಿದೆ. ಇನ್ನು ಅನುಭವಿ ಆಟಗಾರ ದಿನೇಶ್ ಕಾರ್ತಿಕ್ ಸುದೀರ್ಘ ಕಾಲದ ಬಳಿಕ ಭಾರತ ಟಿ20 ಸ್ಕ್ವಾಡ್ಗೆ ಮರಳಿದ್ದಾರೆ. ಆವೇಶ್ ಖಾನ್ ಹಾಗೂ ಉಮ್ರಾನ್ ಮಲಿಕ್ ಕೂಡ ಈ ಸರಣಿಯಲ್ಲಿ ಅವಕಾಶವನ್ನು ಪಡೆದುಕೊಂಡಿದ್ದಾರೆ.

ಟೆಸ್ಟ್ ಸರಣಿಗೆ ಬಲಿಷ್ಠ ತಂಡ ಪ್ರಕಟ
ಇನ್ನು ಕಳೆದ ವರ್ಷ ಕೊರೊನಾವೈರಸ್ ಕಾರಣದಿಂದಾಗಿ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಅಂತಿಮ ಪಂದ್ಯ ಮುಂದೂಡಿಕೆಯಾಗಿತ್ತು. ಈ ಪಂದ್ಯಕ್ಕೆ ಕೂಡ ಭಾರತ ತಂಡವನ್ನು ಘೋಷಣೆ ಮಾಡಲಾಗಿದೆ. ಪೂರ್ಣ ಸಾಮರ್ಥ್ಯದ ಭಾರತ ತಂಡಕ್ಕೆ ಅನುಭವಿ ಆಟಗಾರ ಚೇತೇಶ್ವರ್ ಪೂಜಾರ ಮರಳಿದ್ದಾರೆ. ಆದರೆ ಕನ್ನಡಿಗ ಮಯಾಂಕ್ ಅಗರ್ವಾಲ್ಗೆ ನಿರಾಸೆಯಾಗಿದ್ದು ಈ ತಂಡದಲ್ಲಿ ಸ್ಥಾನವನ್ನು ಕಳೆದುಕೊಂಡಿದ್ದಾರೆ.

ಟಿ20 ಸರಣಿಗೆ ಭಾರತ ಸ್ಕ್ವಾಡ್
ಕೆಎಲ್ ರಾಹುಲ್ (ನಾಯಕ), ಋತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ಉಪ ನಾಯಕ) (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ವೆಂಕಟೇಶ್ ಅಯ್ಯರ್, ಯುಜುವೇಂದ್ರ ಚಾಹಲ್, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್ , ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಆವೇಶ್ ಖಾನ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್

ಟೆಸ್ಟ್ ಸ್ಕ್ವಾಡ್ ಹೀಗಿದೆ
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ವಿಕೆಟ್ ಕೀಪರ್), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ಚೇತೇಶ್ವರ್ ಪೂಜಾರ, ರಿಷಬ್ ಪಂತ್ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ಆರ್ ಜಡೇಜಾ, ಆರ್ ಅಶ್ವಿನ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಪ್ರಸಿದ್ಧ್ ಕೃಷ್ಣ


Click it and Unblock the Notifications












