For Quick Alerts
ALLOW NOTIFICATIONS  
For Daily Alerts
 

ಅಂತಿಮ ಪಂದ್ಯವನ್ನು ಗೆದ್ದು ಭಾರತ ಕ್ಲೀನ್‌ಸ್ವೀಪ್ ತಪ್ಪಿಸಲಿದೆ: ಶ್ರೇಯಸ್ ಐಯ್ಯರ್

India very much determined to avoid clean sweep vs Australia: Shreyas Iyer

ಆಸ್ಟ್ರೇಲಿಯಾ ವಿರುದ್ಧದ ಮೊದಲ ಎರಡು ಏಕದಿನ ಪಂದ್ಯಗಳನ್ನು ಸೋತಿರುವ ಭಾರತ ಅಂತಿಮ ಪಂದ್ಯವನ್ನಾದರೂ ಗೆದ್ದು ಕ್ಲೀನ್ ಸ್ವೀಪ್ ಮುಖಭಂಗವನ್ನು ತಪ್ಪಿಸಿಕೊಳ್ಳಲಿ ಎಂಬುದು ಅಭಿಮಾನಿಗಳ ಆಶಯ.ಇದಕ್ಕೆ ಪೂರಕವಾಗಿ ಟೀಮ್ ಇಂಡಿಯಾದ ಯುವ ಆಟಗಾರ ಶ್ರೇಯಸ್ ಐಯ್ಯರ್ ಹೇಳಿಕೆಯನ್ನು ನೀಡಿದ್ದಾರೆ.

ಟೀಮ್ ಇಂಡಿಯಾ ಅಂತಿಮ ಪಂದ್ಯವನ್ನು ಗೆದ್ದೇ ಗೆಲ್ಲುವ ನಿರ್ಧಾರವನ್ನು ಮಾಡಿದೆ. ಈ ಮೂಲಕ ಕ್ಲೀನ್‌ಸ್ವೀಪ್ ಮುಖಬಂಗದಿಂದ ತಪ್ಪಿಸಿಕೊಳ್ಳಲಿದೆ ಎಂದು ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. ಭಾರತ ತಂಡ ಅನುಸರಿಸಿದ ಕೆಲ ಕ್ರಮಗಳು ಫಲನೀಡುತ್ತಿಲ್ಲ ಎಂಬುದನ್ನು ತಂಡ ಅರಿತುಕೊಂಡಿದೆ ಎಂದು ಈ ಸಂದರ್ಭದಲ್ಲಿ ಅವರು ಹೇಳಿದ್ದಾರೆ.

ಕಳೆದ ಎರಡು ಪಂದ್ಯಗಳಲ್ಲಿ ಅನುಭವಿಸಿದ ಸೋಲನ್ನು ನಾವು ಸಕಾರಾತ್ಮಕವಾಗಿಯೇ ನೋಡುತ್ತೇವೆ. ನಾವು ಬ್ಯಾಟಿಂಗ್ ವಿಚಾರದಲ್ಲಿ ಅತ್ಯುತ್ತಮವಾಗಿಯೇ ಆಡಿದ್ದೇವೆ. ಖಂಡಿತಾ ಬೌಲರ್‌ಗಳು ನಿರೀಕ್ಷಿತ ಮಟ್ಟದ ಪ್ರದರ್ಶನ ನೀಡಿಲ್ಲ. ಆದರೆ ಖಂಡಿತಾವಾಗಿಯೂ ಬೌಲರ್‌ಗಳು ತಮ್ಮ ಕರ್ತವ್ಯ ಪ್ರಜ್ಞೆಯನ್ನು ಮರೆತಿಲ್ಲ. ಅವರು ಕೂಡ ಸಕಾರಾತ್ಮಕವಾಗಿಯೇ ಇದ್ದಾರೆ ಎಂದು ಐಯ್ಯರ್ ಹೇಳಿದ್ದಾರೆ.

"ಐಪಿಎಲ್‌ನಲ್ಲಿ 14 ಪಂದ್ಯಗಳನ್ನಾಡಿದ ಒತ್ತಡ ಬಳಿಕ ಕ್ವಾರಂಟೈನ್‌ನಲ್ಲಿ ಉಳಿದುಕೊಂಡ ವಿಚಾರ ಇದು ಖಂಡಿತವಾಗಿಯೂ ನಿಮ್ಮ ಮೇಲೆ ಪರಿಣಾಮವನ್ನು ಬೀರುತ್ತದೆ. ಇದು ತಂಡದ ಪ್ರತಿಯೊಬ್ಬ ಆಟಗಾರನ ಮೇಲೆಯೂ ಪರಿಣಾಮ ಬೀರುತ್ತದೆ. ಇದು ಕೇವಲ ಬೌಲರ್‌ಗಳಿಗೆ ಮಾತ್ರವೇ ಅನ್ವಯಿಸುವುದಿಲ್ಲ ಎಂದು ಶ್ರೇಯಸ್ ಐಯ್ಯರ್ ಹೇಳಿದ್ದಾರೆ.

Story first published: Tuesday, December 1, 2020, 17:24 [IST]
Other articles published on Dec 1, 2020
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+