For Quick Alerts
ALLOW NOTIFICATIONS  
For Daily Alerts
 

Sydney Test: ಸಿಡ್ನಿ ಟೆಸ್ಟ್‌ನಲ್ಲಿ ಬೀಸಲಿದೆ ಬದಲಾವಣೆ ಗಾಳಿ: ಕನ್ನಡಿಗನಿಗೆ ಸಿಗುತ್ತಾ ಅವಕಾಶ

ಬಾರ್ಡರ್‌ ಗವಾಸ್ಕರ್‌ ಸರಣಿ ಆಸ್ಟ್ರೇಲಿಯಾದಲ್ಲಿ ನಡೆಯುತ್ತಿದೆ. ಈ ಟೆಸ್ಟ್‌ ಸರಣಿಯಲ್ಲಿ ಆಸೀಸ್‌ ಸದ್ಯ 2-1ರಿಂದ ಮುನ್ನಡೆ ಸಾಧಿಸಿದೆ. ಮೆಲ್ಬೋರ್ನ್‌ನಲ್ಲಿ ನಡೆದ ನಾಲ್ಕನೇ ಟೆಸ್ಟ್‌ ಪಂದ್ಯದಲ್ಲಿ ಹೀನಾಯ ಪ್ರದರ್ಶನ ನೀಡಿದ ಟೀಮ್ ಇಂಡಿಯಾ ಸೋಲು ಕಂಡಿತು. ಈ ಬಳಿಕ ತಂಡದ ಪ್ರದರ್ಶನದ ಬಗ್ಗೆ ಹಲವು ಪ್ರಶ್ನೆಗಳು ಎದ್ದವು. ಸದ್ಯ ಟೀಮ್ ಇಂಡಿಯಾ ಸರಣಿಯಲ್ಲಿ ಹಿನ್ನಡೆ ಅನುಭವಿಸುತ್ತಿದೆ. ಈ ಪ್ರದರ್ಶನ ನಿಶ್ಚಿತವಾಗಿ ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್‌ ಚಿಂತೆಯನ್ನು ಹೆಚ್ಚಿಸಿದೆ.

ಟೀಮ್ ಇಂಡಿಯಾಗೆ ಸಿಡ್ನಿ ಟೆಸ್ಟ್‌ ಬಹಳ ಮಹತ್ವದಾಗಿದೆ. ಈ ಟೆಸ್ಟ್ ಪಂದ್ಯದಲ್ಲಿ ಭಾರತ ಗೆಲುವು ಸಾಧಿಸಿ ವಿಶ್ವ ಟೆಸ್ಟ್‌ ಚಾಂಪಿಯನ್‌ ಶಿಪ್‌ ಫೈನಲ್‌ಗೆ ತಲುಪುವ ಆಸೆಯನ್ನು ಹಸಿರಾಗಿ ಇರಿಸಿಕೊಳ್ಳಬಹುದು. ಈ ನಿಟ್ಟಿನಲ್ಲಿ ಟೀಮ್ ಇಂಡಿಯಾ ಭಿನ್ನ ವಿಭಿನ್ನ ತಂತ್ರಗಾರಿಕೆ ಮಾಡಿಕೊಂಡಿದ್ದು, ಕೆಲವು ಬದಲಾವಣೆಗಳೊಂದಿಗೆ ಅಂಗಳಕ್ಕೆ ಇಳಿಯಲಿದೆ. ಹಾಗದರೆ ಟೀಮ್ ಇಂಡಿಯಾದ ಆಡುವ ಹನ್ನೊಂದರ ಬಳಗದಲ್ಲಿ ಆಗುವ ಸಾಧ್ಯತೆ ದಟ್ಟವಾಗಿದೆ.

India vs Australia 5th Test Will Rohit Sharma Make Changes to Save the Border-Gavaskar Trophy

ತಂಡದಲ್ಲಿ ಬದಲಾವಣೆಯ ಗಾಳಿ

ಮೆಲ್ಬೋರ್ನ್‌ನಲ್ಲಿ ನಡೆದ ನಾಲ್ಕನೇ ಟೆಸ್ಟ್‌ ಪಂದ್ಯದಲ್ಲಿ ಟೀಮ್ ಇಂಡಿಯಾ ಶುಭಮನ್‌ ಗಿಲ್‌ ಅವರಿಗೆ ವಿಶ್ರಾಂತಿಯನ್ನು ನೀಡಿತ್ತು. ಇವರ ಸ್ಥಾನದಲ್ಲಿ ವಾಷಿಂಗ್ಟನ್‌ ಸುಂದರ್ ಅವರಿಗೆ ಸ್ಥಾನವನ್ನು ನೀಡಲಾಗಿತ್ತು. ಟೀಮ್ ಇಂಡಿಯಾ ಪ್ರಸಕ್ತ ಸರಣಿಯಲ್ಲಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿದೆ ಎಂದು ತಿಳಿದರೂ ಸಹ ರೋಹಿತ್‌ ಪಡೆ ಶುಭಮನ್‌ ಗಿಲ್ ಅವರನ್ನು ಕೂರಿಸಿದ್ದು ಏಕೆ ಎಂಬ ಪ್ರಶ್ನೆಗಳು ಏಳಲಾರಂಭಿಸಿದವು. ಆದರೆ ವಾಷಿಂಗ್ಟನ್‌ ಸುಂದರ್‌ ಒಬ್ಬ ಸ್ಪಿನ್ ಆಲ್‌ರೌಂಡರ್‌. ಇವರು ಗಿಲ್ ಸ್ಥಾನವನ್ನು ಎಷ್ಟರ ಮಟ್ಟಿಗೆ ತುಂಬ ಬಲ್ಲರು ಎಂಬ ಪ್ರಶ್ನೆಗಳನ್ನು ಕೇಳಲಾಯಿತು. ಹೀಗಾಗಿ ಐದನೇ ಟೆಸ್ಟ್‌ ಪಂದ್ಯದಲ್ಲಿ ಗಿಲ್‌ ಮತ್ತೆ ತಂಡಕ್ಕೆ ಎಂಟ್ರಿ ಪಡೆಯಬಹುದು.

ಯಾರು ಇನ್.. ಯಾರು ಔಟ್‌?

ಇನ್ನು ಟೀಮ್ ಇಂಡಿಯಾದ ಪರ ಸ್ಥಿರ ಪ್ರದರ್ಶನ ನೀಡುವಲ್ಲಿ ವಿಫಲರಾಗಿರುವ ಮೊಹಮ್ಮದ್ ಸಿರಾಜ್ ಅವರನ್ನು ತಂಡದಿಂದ ಕೈ ಬಿಡುವ ಸಾಧ್ಯತೆ ಹೆಚ್ಚಿದೆ. ನಾಲ್ಕನೇ ಟೆಸ್ಟ್‌ನಲ್ಲಿ ಸಿರಾಜ್‌ ಶತಕ ಬಾರಿಸಿ ಅಬ್ಬರಿಸಿದ್ದರು. ಆದರೆ ಎರಡನೇ ಇನಿಂಗ್ಸ್‌ನಲ್ಲಿ ಮೂರು ವಿಕೆಟ್‌ ಪಡೆದು ಬೀಗಿದ್ದರು. ಆದರೆ ಇವರನ್ನು ಸಿಡ್ನಿ ಟೆಸ್ಟ್‌ನಲ್ಲಿ ಉಳಿಸಿಕೊಳ್ಳುವ ಬಗ್ಗೆ ಪ್ರಶ್ನೆಗಳು ಎಳುತ್ತಿವೆ. ಇವರನ್ನು ಹೊರಗಿಡುವುದು ಸೂಕ್ತ ಎಂಬ ಪ್ರಶ್ನೆಗಳು ಉದ್ಭವಿಸಿವೆ.

ಕನ್ನಡಿಗನಿಗೆ ಸಿಗುತ್ತಾ ಅವಕಾಶ?

ಐದನೇ ಟೆಸ್ಟ್‌ ಸಿಡ್ನಿಯಲ್ಲಿ ನಡೆಯಲಿದ್ದು, ಈ ವೇಳೆ ಮೊಹಮ್ಮದ್ ಸಿರಾಜ್ ಅವರಿಗೆ ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ಸಿಗುವ ಸಾಧ್ಯತೆ ಇದೆ. ಇವರು ಸದ್ಯ ಬೆಂಚ್ ಕಾಯುತ್ತಿದ್ದಾರೆ. ಕೊನೆಯ ಟೆಸ್ಟ್‌ನಲ್ಲಿ ಇವರು ಅವಕಾಶ ಪಡೆದು ಸಿಡ್ನಿ ಮೈದಾನದಲ್ಲಿ ಅದ್ಭುತ ಪ್ರದರ್ಶನ ನೀಡುವ ಹಂಬಲ ಹೊಂದಿದ್ದದಾರೆ. ಹೀಗಾಗಿ ಟೀಮ್ ಮ್ಯಾನೇಜ್ಮೆಂಟ್‌ ಇವರನ್ನು ಮೊಹಮ್ಮದ್ ಸಿರಾಜ್‌ ಬದಲಿಗೆ ತಂಡದಲ್ಲಿ ಸ್ಥಾನ ನೀಡಬಹುದು. ಇನ್ನು ಇವರಿಗೆ ಅವಕಾಶ ಸಿಗದೇ ಇದ್ದಲ್ಲಿ ಮುಂಬೈ ತಂಡದ ಯುವ ಬೌಲರ್‌ ತನುಷ್ ಕೋಟ್ಯಾನ್‌ಗೆ ಅವಕಾಶ ಸಿಗುವ ಸಾಧ್ಯತೆಯೂ ಹೆಚ್ಚಾಗಿದೆ.

Story first published: Tuesday, December 31, 2024, 20:50 [IST]
Other articles published on Dec 31, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+