
ಐವರು ಬೌಲರ್ಗಳೊಂದಿಗೆ ಕಣಕ್ಕಿಳಿಯಲಿ
ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯ ಮೆಲ್ಬೋರ್ನ್ನಲ್ಲಿ ಬಾಕ್ಸಿಂಡ್ ಡೇಯಂದು ಆರಂಭವಾಗಲಿದೆ. ಅಜಿಂಕ್ಯ ರಹಾನೆ ಮುನ್ನಡೆಸಲಿರುವ ಈ ಪಂದ್ಯಕ್ಕೆ ಭಾರತ ಐವರು ಬೌಲರ್ಗಳೊಂದಿಗೆ ಕಣಕ್ಕಿಳಿಯಲಿ ಎಂಬ ಅಭಿಪ್ರಾಯವನ್ನು ಗೌತಮ್ ಗಂಭೀರ್ ವ್ಯಕ್ತಪಡಿಸಿದ್ದಾರೆ.

ಮಯಾಂಕ್ಗೆ ಗಿಲ್ ಜೊತೆಗಾರ
ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಪೃಥ್ವಿ ಶಾ ಪ್ರದರ್ಶನ ನೀಡಿ ಸರಣಿಯನ್ನು ಶಾ ಆರಂಭಿಸಲಿ ಎಂದು ಬಯಸಿದ್ದೆ. ಆದರೆ ಆತ ಫಾರ್ಮ್ನ ಕೊರತೆಯನ್ನು ಹೊಂದಿರುವುದಲ್ಲದೆ ಆತ್ಮವಿಶ್ವಾಸವನ್ನೂ ಕಳೆದುಕೊಂಡಿದ್ದಾನೆ. ಹೀಗಾಗಿ ಮಾಯಾಂಕ್ ಜೊತೆಗೆ ಶುಭ್ಮನ್ ಗಿಲ್ ಇನ್ನಿಂಗ್ಸ್ ಆರಂಭಿಸಲಿ. ಪೂಜಾರ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿಯಲಿ ಎಂದು ಗಂಭೀರ್ ಕ್ರಿಕೆಟ್ ಕನೆಕ್ಟೆಡ್ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.

ರಹಾನೆಗೆ ನಾಲ್ಕನೆ ಕ್ರಮಾಂಕ ನೀಡಿದ ಗಂಭೀರ್
ಇನ್ನು ಇದರ ಜೊತೆಗೆ ವಿರಾಟ್ ಕೊಹ್ಲಿ ಅಲಭ್ಯತೆಯಲ್ಲಿ ಅಜಿಂಕ್ಯ ರಹಾನೆ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿಯಬೇಕು. ರಿಷಭ್ ಪಂತ್ ಹಾಗೂ ರವೀಂದ್ರ ಜಡೇಜಾ ಆಡುವ ಬಳಗದಲ್ಲಿ ವೃದ್ಧಿಮಾನ್ ಸಾಹಾ ಹಾಗೂ ಹನುಮ ವಿಹಾರಿ ಬದಲಿಗೆ ಅವಕಾಶವನ್ನು ಪಡೆಯಲಿ ಎಂದು ಗಂಭೀರ್ ಹೇಳಿದ್ದಾರೆ.

5ನೇ ಕ್ರಮಾಂಕದಲ್ಲಿ ಕೆಎಲ್ ಇಳಿಯಲಿ
ನಾಯಕ ವಿರಾಟ್ ಕೊಹ್ಲಿ ಅಲಭ್ಯತೆಯ ಕಾರಣದಿಂದಾಗಿ ತಂಡದ ಜವಾಬ್ಧಾರಿ ಹೊತ್ತಿರುವ ಅಜಿಂಕ್ಯ ರಹಾನೆ ತಮ್ಮ ಎಂದಿನ ಕ್ರಮಾಂಕವಾಗಿರುವ ಐದನೇ ಕ್ರಮಾಂಕದಲ್ಲಿ ಇಳಿಯುವ ಬದಲು ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿಯಬೇಕು. ಯಾಕೆಂದರೆ ನಾಯಕನಾಗಿ ರಹಾನೆ ಮುಂದೆ ನಿಂತು ಮುನ್ನಡೆಸುವಂತಿರಬೇಕು. ಕೆಎಲ್ ರಾಹುಲ್ ಐದನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ನಡೆಸಲಿ ಎಂದು ಮಾಜಿ ಆರಂಬಿಕ ಆಟಗಾರ ಗೌತಮ್ ಗಂಭೀರ್ ಸಲಹೆಯನ್ನು ನೀಡಿದ್ದಾರೆ.


Click it and Unblock the Notifications
