ಉಪ ನಾಯಕ ಕೆಎಲ್ ರಾಹುಲ್
ಟೀಮ್ ಇಂಡಿಯಾದ ಉಪ ನಾಯಕ ಕೆಎಲ್ ರಾಹುಲ್ ಗಾಯದಿಂದ ಸುದೀರ್ಘ ಕಾಲದ ವಿರಾಮದ ಬಳಿಕ ಕಳೆದ ಏಷ್ಯಾ ಕಪ್ನ ಮೂಲಕ ಕಮ್ಬ್ಯಾಕ್ ಮಾಡಿದರು. ಅಂತಿಮ ಪಂದ್ಯದಲ್ಲಿ ಅರ್ಧ ಶತಕ ಬಾರಿಸುವ ಮೂಲಕ ಲಯಕ್ಕೆ ಮರಳಿದ ಸೂಚನೆ ನೀಡಿದರಾದರೂ ಅದಕ್ಕೂ ಹಿಂದಿನ ಪಂದ್ಯಗಳಲ್ಲಿ ರನ್ಗಳಿಸಲು ಸಾಕಷ್ಟು ಪರದಾಡುವ ಮೂಲಕ ಟೀಕೆಯನ್ನು ಎದುರಿಸಿದ್ದರು. ಅಫ್ಘಾನಿಸ್ತಾನದ ವಿರುದ್ಧ ಅರ್ಧ ಶತಕವನ್ನು ಬಾರಿಸಿದರಾದರೂ ಆ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅಮೋಘ ಶತಕವನ್ನು ಬಾರಿಸಿದ ಕಾರಣ ಕೊಹ್ಲಿಯನ್ನು ಆರಂಭಿಕನಾಗಿಯೇ ಕಣಕ್ಕಿಳಿಸಬೇಕು ಎಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿದೆ. ಹೀಗಾಗಿ ಕೆಎಲ್ ರಾಹುಲ್ ಮೇಲೆ ಈಗ ಸಾಕಷ್ಟು ಒತ್ತಡಗಳು ಉಂಟಾಗುತ್ತಿದೆ. ಆರಂಭಿಕ ಆಟಗಾರನಾಗಿ ಕಣಕ್ಕಿಳಿಯಲು ಅರ್ಹ ಎಂಬುದನ್ನು ಕೆಎಲ್ ರಾಹುಲ್ ಸಾಬೀತುಪಡಿಸಬೇಕಿದ್ದು ಇಲ್ಲವಾದಲ್ಲಿ ಮತ್ತಷ್ಟು ಟೀಕೆಗಳಿಗೆ ಗುರಿಯಾಗುವ ಸಾಧ್ಯತೆಯಿದೆ.
ಅನುಭವಿ ಸ್ಪಿನ್ನರ್ ಯುಜುವೇಂದ್ರ ಚಾಹಲ್
ಭಾರತದ ಅನುಣವಿ ಸ್ಪಿನ್ನರ್ ಯುಜುವೇಂದ್ ಚಾಹಲ್ ವೈಟ್ಬಾಲ್ ಕ್ರಿಕೆಟ್ನಲ್ಲಿ ಮೊದಲ ಆಯ್ಕೆಯ ಸ್ಪಿನ್ನರ್ ಎನಿಸಿಕೊಂಡಿದ್ದಾರೆ. ಕಳೆದ ವರ್ಷದ ವಿಶ್ವಕಪ್ನಲ್ಲಿ ಸ್ಥಾನವನ್ನು ಕಳೆದುಕೊಂಡ ಬಳಿಕ ಅದ್ಭುತ ಪ್ರದರ್ಶನ ನೀಡಿ ಕಮ್ಬ್ಯಾಕ್ ಮಾಡಿದರಾದರೂ ಇತ್ತೀಚೆಗೆ ಮತ್ತೆ ಕಳೆಗುಂದಿದಂತೆ ಕಂಡುಬಂದಿದ್ದಾರೆ. ಅದರಲ್ಲೂ ಏಷ್ಯಾಕಪ್ನಲ್ಲಿ ಚಾಹಲ್ ಪರಿಣಾಮಕಾರಿ ಎನಿಸಲಿಲ್ಲ ಎಂಬುದು ಗಮನಾರ್ಹ. ಹಾಗಿದ್ದರೂ ಮ್ಯಾನೇಜ್ಮೆಂಟ್ ಹಾಗೂ ಆಯ್ಕೆಗಾರರು ಚಾಹಲ್ ಮೇಲೆ ಸಾಕಷ್ಟು ಭರವಸೆಯಿಟ್ಟುಕೊಂಡಿದ್ದಾರೆ. 2019ರ ಬಳಿಕ ಅಂಕಿಅಂಶವನ್ನು ನೋಡಿದರೆ ಟಿ20 ಕ್ರಿಕಕೆಟ್ನಲ್ಲಿ ಒಂದು ಪಂದ್ಯದಲ್ಲಿ ಒಂದಕ್ಕಿಂತ ಹೆಚ್ಚು ಮವಿಕೆಟ್ ಪಡೆದಿರುವ ದೃಷ್ಟಾಂತ ಅತ್ಯಂತ ಅಪರೂಪವಾಗಿದೆ. ವಿಕೆಟ್ ಟೇಕರ್ ಬೌಲರ್ ಎನಿಸಿಕೊಂಡಿದ್ದರೂ ಅವರಿಂದ ಅಂಥಾ ಪ್ರದರ್ಶನ ಇತ್ತೀಚಿನ ದಿನಗಳಲ್ಲಿ ಬಾರದಿರುವುದು ಚಿಂತೆ ಹೆಚ್ಚಿಸಿದೆ. ತಂಡದಲ್ಲಿ ಅನುಭವಿ ಆರ್ ಅಶ್ವಿನ್ ಇರುವ ಕಾರಣ ಆಡುವ ಬಳಗದಲ್ಲಿ ಸ್ಥಾನವನ್ನು ಚಾಹಲ್ ಪಡೆಯಬೇಕಾದರೆ ಆಸಿಸ್ ವಿರುದ್ಧದ ಸರಣಿಯಲ್ಲಿ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಬೇಕಿದೆ.
ಶಾಹಿದ್ ಅಫ್ರಿದಿ ನಂತರ, ವಿರಾಟ್ ಕೊಹ್ಲಿ ನಿವೃತ್ತಿ ಕುರಿತು ಮತ್ತೊಬ್ಬ ಪಾಕ್ ಕ್ರಿಕೆಟಿಗ ಭವಿಷ್ಯ!
ವಿಕೆಟ್ ಕೀಪರ್ ಬ್ಯಾಟರ್ ರಿಷಬ್ ಪಂತ್
ರಿಚಭ್ ಪಂತ್ ಎಂಥಾ ಅದ್ಭುತ ಪ್ರತಿಭೆ ಎಂಬುದು ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ತಿಳಿಸಿಹೇಳಬೇಕಿಲ್ಲ. ಆದರೆ ಅವರ ಸಾಮರ್ಥ್ಯಕ್ಕೆ ಪೂರಕವಾದ ಪ್ರದರ್ಶನ ವೈಟ್ಬಾಲ್ ಮಾದರಿಯಲ್ಲಿ ಇನ್ನೂ ಬಂದಿಲ್ಲ ಎಂಬುದು ಬೇಸರದ ಸಂಗತಿ. ಅದರಲ್ಲೂ ಟಿ20 ಮಾದರಿಯಲ್ಲಿ ಪಂತ್ ಅಕ್ಷರಶಃ ಪರದಾಡುತ್ತಿದ್ದಾರೆ. ಇದು ಏಷ್ಯಾ ಕಪ್ ಟೂರ್ನಿಯಲ್ಲಿಯೂ ಸಾಬೀತಾಯಿತು. ಹೀಗಾಗಿ ಪಂತ್ ಬದಲಿಗೆ ಸಂಜು ಸ್ಯಾಮ್ಸನ್ ಅಥವಾ ಇಶಾನ್ ಕಿಶನ್ಗೆ ಅವಕಾಶ ನೀಡಬೇಕು ಎಂಬ ಅಭಿಪ್ರಾಯಗಳು ಜೋರಾಗಿ ವ್ಯಕ್ತವಾಗಿದೆ. ಹೀಗಾಗಿ ಮುಂದಿನ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ರಿಷಭ್ ಪಂತ್ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸುವ ಒತ್ತಡದಲ್ಲಿದ್ದು ತಾನು ವಿಶ್ವಕಪ್ನ ತಂಡದಲ್ಲಿ ಸ್ಥಾನ ಪಡೆಯಲು ಅರ್ಹ ಎನಿಸಿಕೊಳ್ಳಬೇಕಿದೆ.
ಟಿ20 ವಿಶ್ವಕಪ್ಗೆ ಆಯ್ಕೆಯಾಗಿರುವ ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪ ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಆರ್. ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್
ಮೀಸಲು ಆಟಗಾರರು: ಮೊಹಮ್ಮದ್ ಶಮಿ, ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯ್, ದೀಪಕ್ ಚಹಾರ್