ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

Ind vs Ban 3rd ODI: ಟೀಮ್ ಇಂಡಿಯಾಗೆ ಕುಲ್‌ದೀಪ್ ಯಾದವ್ ಸೇರ್ಪಡೆ

India vs Bangladesh: spinner Kuldeep Yadav added to Team Indias squad for 3rd match of ODI series

ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಅಂತಿಮ ಏಕದಿನ ಪಂದ್ಯದ ಶನಿವಾರ ನಡೆಯಲಿದ್ದು ಎರಡು ತಂಡಗಳು ಕೂಡ ಅಂತಿಮ ಹಂತದ ತಯಾರಿಯನ್ನು ನಡೆಸುತ್ತಿದೆ. ಆದರೆ ಈ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ಪಡೆ ಗಾಯದ ಆಘಾತಕ್ಕೆ ಒಳಗಾಗಿದೆ. ನಾಯಕ ರೋಹಿತ್ ಶರ್ಮಾ, ಬೌಲರ್‌ಗಳಾದ ದೀಪಕ್ ಚಹರ್ ಹಾಗೂ ಕುಲ್‌ದೀಪ್ ಸೇನ್ ಗಾಯದ ಕಾರಣದಿಮದಾಗಿ ಅಂತಿಮ ಪಂದ್ಯಕ್ಕೆ ಅಲಭ್ಯವಾಗಿದ್ದಾರೆ. ಹೀಗಾಗಿ ಅಂತಿಮ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ಬಳಗಕ್ಕೆ ಚೈನಾಮನ್ ಸ್ಪಿನ್ನರ್ ಖ್ಯಾತಿಯ ಕುಲ್‌ದೀಪ್ ಯಾದವ್ ಅವರನ್ನು ಸೇರ್ಪಡೆಗೊಳಿಸಲಾಗಿದೆ.

ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಎರಡನೇ ಏಕದಿನ ಪಂದ್ಯದ ಸಂದರ್ಭದಲ್ಲಿ ಬೆರಳಿನ ಗಾಯಕ್ಕೆ ತುತ್ತಾಗಿದ್ದರು. ಆ ಪಂದ್ಯದಲ್ಲಿ ಅವರು ಅಂತಿಮ ಹಂತದಲ್ಲಿ ಬ್ಯಾಟಿಂಗ್ ನಡೆಸಿ ಸ್[ಪೋಟಕ ಪ್ರದರ್ಶನ ನೀಡಿದ್ದರಾದರೂ ಅಂತಿಮ ಏಕದಿನ ಪಂದ್ಯಕ್ಕೆ ಅಲಭ್ಯವಾಗಿದ್ದಾರೆ. ಅಲ್ಲದೆ ಚಿಕಿತ್ಸೆಯ ಕಾರಣಕ್ಕಾಗಿ ರೋಹಿತ್ ಶರ್ಮಾ ಈಗಾಗಲೇ ತವರಿಗೆ ವಾಪಾಸಾಗಿದ್ದಾರೆ.

ಭಾರತ vs ಬಾಂಗ್ಲಾದೇಶ ಟೆಸ್ಟ್ ಸರಣಿ: ಕನ್ನಡಿಗ ಕೆಎಲ್ ರಾಹುಲ್‌ಗೆ ನಾಯಕತ್ವದ ಹೊಣೆಗಾರಿಕೆ ಸಾಧ್ಯತೆಭಾರತ vs ಬಾಂಗ್ಲಾದೇಶ ಟೆಸ್ಟ್ ಸರಣಿ: ಕನ್ನಡಿಗ ಕೆಎಲ್ ರಾಹುಲ್‌ಗೆ ನಾಯಕತ್ವದ ಹೊಣೆಗಾರಿಕೆ ಸಾಧ್ಯತೆ

ಗಾಯದ ಸಮಸ್ಯೆಗೆ ಒಳಗಾದ ಬೌಲರ್‌ಗಳು

ಗಾಯದ ಸಮಸ್ಯೆಗೆ ಒಳಗಾದ ಬೌಲರ್‌ಗಳು

ಇನ್ನು ಟೀಮ್ ಇಂಡಿಯಾದ ಯುವ ಬೌಲರ್ ಕುಲ್‌ದೀಪ್ ಸೇನ್ ಈ ಸರಣಿಯ ಮೊದಲ ಪಂದ್ಯದಲ್ಲಿ ಚೊಚ್ಚಲ ಬಾರಿಗೆ ಭಾರತ ತಂಡವನ್ನು ಪ್ರತಿನಿಧಿಸುವ ಅವಕಾಶ ಪಡೆದುಕೊಂಡಿದ್ದರು. ಆದರೆ ಈ ಪಂದ್ಯದ ಸಂದರ್ಭದಲ್ಲಿಯೇ ಸೇನ್ ಬೆನ್ನು ನೋವಿಗೆ ಒಳಗಾಗಿದ್ದಾರೆ. ಹೀಗಾಗಿ ಎರಡನೇ ಪಂದ್ಯಕ್ಕೂ ಸೇನ್ ಅಲಭ್ಯವಾಗಿದ್ದರು. ಇದೀಗ ಅಂತಿಮ ಪಂದ್ಯದಿಂದಲೂ ಅವರು ಹೊರಗುಳಿಯಲಿದ್ದಾರೆ ಎಂಬುದನ್ನು ಟೀಮ್ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಖಚಿತಪಡಿಸಿದ್ದಾರೆ. ಮತ್ತೊಂದೆಡೆ ಆಲ್‌ರೌಂಡರ್ ದೀಪಕ್ ಚಹರ್ ಕೂಡ ಗಾಯದ ಸಮಸ್ಯೆಗೆ ಒಳಗಾಗಿದ್ದು ಅವರು ಕೂಡ ಅಂತಿಮ ಪಂದ್ಯಕ್ಕೆ ಅಲಭ್ಯವಾಗಿದ್ದಾರೆ.

ಕುಲ್‌ದೀಪ್ ಯಾದವ್ ಸೇರ್ಪಡೆ

ಕುಲ್‌ದೀಪ್ ಯಾದವ್ ಸೇರ್ಪಡೆ

ಮೂವರು ಆಟಗಾರರು ಅಲಭ್ಯವಾಗಿರುವ ಹಿನ್ನೆಲೆಯಲ್ಲಿ ಅಂತಿಮ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ಸ್ಕ್ವಾಡ್‌ಗೆ ಸ್ಪಿನ್ನರ್ ಕುಲ್‌ದೀಪ್ ಯಾದವ್ ಅವರನ್ನು ಸೇರ್ಪಡೆಗೊಳಿಸಲಾಗಿದೆ. ಆಲ್‌ ಇಂಡಿಯಾ ಸೀನಿಯರ್ ಸೆಲೆಕ್ಷನ್ ಕಮಿಟಿ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಅಂತಿಮ ಪಂದ್ಯದಲ್ಲಿ ಕುಲ್‌ದೀಪ್ ಯಾದವ್ ಆಡುವ ಬಳಗದಲ್ಲಿ ಸ್ಥಾನವನ್ನು ಪಡೆಯಲಿದ್ದಾರೆಯೇ ಎಂಬುದು ಮಾತ್ರ ಕುತೂಹಲವಾಗಿದೆ.

ಇನ್ನು ಟೀಮ್ ಇಂಡಿಯಾ ಈಗಾಗಲೇ ಮೂರು ಪಂದ್ಯಗಳ ಸರಣಿಯಲ್ಲಿ ಎರಡು ಸೋಲು ಅನುಭವಿಸಿದ್ದು ಅಂತಿಮ ಪಂದ್ಯದಲ್ಲಿ ಗೆದ್ದು ವೈಟ್‌ವಾಶ್ ಅವಮಾನದಿಂದ ಪಾರಾಗಲು ಸರ್ವಪ್ರಯತ್ನ ನಡೆಸಲಿದೆ.

3ನೇ ಏಕದಿನ ಪಂದ್ಯಕ್ಕೆ ಭಾರತ ತಂಡ

3ನೇ ಏಕದಿನ ಪಂದ್ಯಕ್ಕೆ ಭಾರತ ತಂಡ

ಕೆಎಲ್ ರಾಹುಲ್ (ನಾಯಕ) (ವಿಕೆಟ್ ಕೀಪರ್), ಶಿಖರ್ ಧವನ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಶ್ರೇಯಸ್ ಅಯ್ಯರ್, ರಾಹುಲ್ ತ್ರಿಪಾಠಿ, ಇಶಾನ್ ಕಿಶನ್ (ವಿಕೆಟ್ ಕೀಪರ್), ಶಹಬಾಜ್ ಅಹ್ಮದ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಕುಲದೀಪ್ ಯಾದವ್

Story first published: Friday, December 9, 2022, 13:40 [IST]
Other articles published on Dec 9, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X