ಕಠಿಣ ಅಭ್ಯಾಸದಲ್ಲಿ ತೊಡಗಿರುವ ಮಯಾಂಕ್ ಅಗರ್ವಾಲ್ ಮತ್ತು ಇಶಾಂತ್ ಶರ್ಮಾ
ಭಾರತ ತಂಡದ ಪ್ರಮುಖ ಆಟಗಾರರಾದ ಮಯಾಂಕ್ ಅಗರ್ವಾಲ್ ಮತ್ತು ಇಶಾಂತ್ ಶರ್ಮಾ ಸದ್ಯ ನೆಟ್ ಅಭ್ಯಾಸದ ವೇಳೆ ಕಠಿಣ ತರಬೇತಿಯಲ್ಲಿ ತೊಡಗಿದ್ದು, ಈ ಕುರಿತು ಕ್ರೀಡಾಭಿಮಾನಿಗಳಲ್ಲಿ ಚರ್ಚೆಗಳು ಆರಂಭವಾಗಿವೆ. ಎರಡನೇ ಪಂದ್ಯಕ್ಕೂ ಮುನ್ನವೇ ಅಭ್ಯಾಸದಲ್ಲಿ ತೊಡಗಿಕೊಂಡಿರುವ ಈ ಇಬ್ಬರು ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾಗವಹಿಸುವುದು ಖಚಿತ ಎಂದು ಕ್ರೀಡಾಭಿಮಾನಿಗಳು ಮಾತನಾಡಿಕೊಳ್ಳುತ್ತಿದ್ದಾರೆ.
ಎರಡನೇ ಟೆಸ್ಟ್ ಪಂದ್ಯದಲ್ಲಿ ಇಶಾಂತ್ ಮತ್ತು ಮಯಾಂಕ್ ಕಣಕ್ಕಿಳಿದರೆ ತಂಡದಲ್ಲಿರುವ ಇಬ್ಬರಿಗೆ ಕೊಕ್ ನೀಡಬೇಕಾಗುತ್ತದೆ!
ಹೌದು ಎರಡನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಅಭ್ಯಾಸವನ್ನು ಆರಂಭಿಸಿರುವ ಇಶಾಂತ್ ಶರ್ಮಾ ಮತ್ತು ಮಯಾಂಕ್ ಅಗರ್ವಾಲ್ ಎರಡನೇ ಟೆಸ್ಟ್ ಪಂದ್ಯದಲ್ಲಿ ತಂಡದಲ್ಲಿ ಸ್ಥಾನ ಪಡೆದುಕೊಳ್ಳಬೇಕೆಂದರೆ ಮೊದಲನೇ ಟೆಸ್ಟ್ ಪಂದ್ಯದಲ್ಲಿ ಆಡಿದ್ದ ಇಬ್ಬರು ಆಟಗಾರರಿಗೆ ಕೊಕ್ ನೀಡಬೇಕಾಗುತ್ತದೆ. ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾದ ಬಹುತೇಕ ಎಲ್ಲಾ ಆಟಗಾರರೂ ಸಹ ಉತ್ತಮ ಆಟವನ್ನಾಡಿದ್ದು ಯಾವ ಆಟಗಾರರನ್ನು ತಂಡದಿಂದ ಕೈಬಿಟ್ಟು ಇಶಾಂತ್ ಶರ್ಮಾ ಮತ್ತು ಮಯಾಂಕ್ ಅಗರ್ವಾಲ್ಗೆ ತಂಡದಲ್ಲಿ ಸ್ಥಾನ ನೀಡುತ್ತಾರೋ ಎಂಬುದನ್ನು ಕಾದು ನೋಡಬೇಕು.
ಸಿರಾಜ್ ಮತ್ತು ಪೂಜಾರ ತಂಡದಿಂದ ಹೊರಬೀಳುವ ಸಾಧ್ಯತೆ!
ಇನ್ನು ಮಯಾಂಕ್ ಅಗರ್ವಾಲ್ ಮತ್ತು ಇಶಾಂತ್ ಶರ್ಮಾಗೆ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯವನ್ನಾಡಲು ತಂಡದಲ್ಲಿ ಸ್ಥಾನ ನೀಡಬೇಕೆಂದರೆ ಮೊದಲನೇ ಟೆಸ್ಟ್ ಪಂದ್ಯದಲ್ಲಿ ಭಾಗವಹಿಸಿದ್ದ ಓರ್ವ ಬೌಲರ್ ಮತ್ತು ಓರ್ವ ಬ್ಯಾಟ್ಸ್ಮನ್ನ್ನು ತಂಡದಿಂದ ಕೈಬಿಡಲೇಬೇಕಾದ ಅನಿವಾರ್ಯತೆಯಿದೆ. ಇನ್ನು ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾದ ಬಹುತೇಕ ಎಲ್ಲರೂ ಉತ್ತಮ ಪ್ರದರ್ಶನವನ್ನು ನೀಡಿದ್ದಾರೆ, ಹೀಗಾಗಿ ಎರಡನೇ ಟೆಸ್ಟ್ ಪಂದ್ಯದಲ್ಲಿ ತಂಡದಿಂದ ಮೊಹಮ್ಮದ್ ಸಿರಾಜ್ ಮತ್ತು ಚೇತೇಶ್ವರ್ ಪೂಜಾರಾರನ್ನು ಕೈ ಬಿಡುವ ಸಾಧ್ಯತೆಗಳು ಹೆಚ್ಚಿವೆ. ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಅತೀ ಕಡಿಮೆ ವಿಕೆಟ್ ಪಡೆದುಕೊಂಡ ಬೌಲರ್ ಎಂದರೆ ಅದು ಮೊಹಮ್ಮದ್ ಸಿರಾಜ್ ಮತ್ತು ಬ್ಯಾಟಿಂಗ್ ವಿಭಾಗದಲ್ಲಿ ಮಂಕಾದದ್ದು ಚೇತೇಶ್ವರ್ ಪೂಜಾರ. ಹೀಗಾಗಿ ಈ ಇಬ್ಬರು ಆಟಗಾರರನ್ನು ತಂಡದಿಂದ ಕೈಬಿಟ್ಟು ಮಯಾಂಕ್ ಅಗರ್ವಾಲ್ ಮತ್ತು ಇಶಾಂತ್ ಶರ್ಮಾಗೆ ಅವಕಾಶ ನೀಡುವ ಸಾಧ್ಯತೆಗಳು ಹೆಚ್ಚಿವೆ. ಇನ್ನುಳಿದಂತೆ ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಜಸ್ ಪ್ರೀತ್ ಬುಮ್ರಾ ಉತ್ತಮ ಪ್ರದರ್ಶನಗಳನ್ನು ನೀಡಿದ್ದು ಎರಡನೇ ಪಂದ್ಯದಲ್ಲಿ ತಮ್ಮ ಸ್ಥಾನವನ್ನು ಗಟ್ಟಿಗೊಳಿಸಿಕೊಂಡಿದ್ದಾರೆ ಹಾಗೂ ಬ್ಯಾಟಿಂಗ್ ವಿಭಾಗದಲ್ಲಿ ಚೇತೇಶ್ವರ್ ಪೂಜಾರ ಬಿಟ್ಟರೆ ಬೇರೆ ಯಾವ ಆಟಗಾರನನ್ನೂ ಕೈ ಬಿಡುವ ಸಾಧ್ಯತೆಗಳು ಕಡಿಮೆ. ಇನ್ನು ಗಾಯದ ಸಮಸ್ಯೆಯಿಂದ ಮೊದಲನೇ ಪಂದ್ಯದಿಂದ ಹೊರಗುಳಿದಿದ್ದ ಮಯಾಂಕ್ ಅಗರ್ವಾಲ್ ಜಾಗದಲ್ಲಿ ಕೆಎಲ್ ರಾಹುಲ್ ಕಣಕ್ಕಿಳಿದಿದ್ದರು, ಹೀಗೆ ಅಗರ್ವಾಲ್ ಬದಲು ಮೊದಲನೇ ಪಂದ್ಯದಲ್ಲಿ ಕಣಕ್ಕಿಳಿದ ರಾಹುಲ್ ಉತ್ತಮ ಪ್ರದರ್ಶನವನ್ನು ನೀಡಿದ್ದು ಎರಡನೇ ಪಂದ್ಯದಿಂದ ರಾಹುಲ್ ಅವರನ್ನು ಕೈಬಿಡುವಂತಹ ಕೆಟ್ಟ ನಿರ್ಧಾರವನ್ನು ಟೀಮ್ ಇಂಡಿಯಾ ತೆಗೆದುಕೊಳ್ಳುವ ಸಾಧ್ಯತೆ ತೀರಾ ಕಡಿಮೆ. ಹೀಗಾಗಿ ಎರಡನೇ ಟೆಸ್ಟ್ ಪಂದ್ಯದಿಂದ ಮೊಹಮ್ಮದ್ ಸಿರಾಜ್ ಮತ್ತು ಚೇತೇಶ್ವರ್ ಪೂಜಾರ ಹೊರಗುಳಿಯುವ ಸಾಧ್ಯತೆಗಳು ಸಾಕಷ್ಟು ಹೆಚ್ಚಿವೆ..