ಸಂಜು ಸ್ಯಾಮ್ಸನ್
ಭಾರತ ತಂಡಲ್ಲಿ ಈಗಾಗಲೇ ವಿಕೆಟ್ ಕೀಪರ್ ಬ್ಯಾಟರ್ಗಳ ಮಧ್ಯೆ ಪೈಪೋಟಿ ಜೋತಾಗಿ ನಡೆಯುತ್ತಿದೆ. ಈ ಸ್ಪರ್ಧೆಯಲ್ಲಿ ಪ್ರತಿಭಾನ್ವುತ ಯುವ ಆಟಗಾರ ಸಂಜು ಸ್ಯಾಮ್ಸನ್ ಕೂಡ ಇದ್ದಾರೆ. ಈ ಬಾರಿಯ ಐಪಿಎಲ್ನಲ್ಲಿಯೂ ಸಂಜು ಸ್ಯಾಮ್ಸನ್ ಅದ್ಭುತ ಪ್ರದರ್ಶನ ನಿಡಿ ಮಿಂಚಿದ್ದಾರೆ. ಆದರೆ ಸಂಜು ಅಸ್ಥಿರ ಪ್ರದರ್ಶನ ಅವರಿಗೆ ಹಿನ್ನಡೆಯುಂಟು ಮಾಡಿದೆ. ರಾಷ್ಟ್ರೀಯ ತಂಡದಲ್ಲಿ ಸಿಕ್ಕ ಅವಕಾಶವನ್ನು ಸಮರ್ಥವಾಗಿ ಬಳಸಿಕೊಳ್ಳಲು ಸಂಜು ಹೆಚ್ಚಿನ ಸಂದರ್ಭದಲ್ಲಿ ವಿಫಲವಾಗಿದ್ದಾರೆ. ಹೀಗಾಗಿ ಐರ್ಲೆಂಡ್ ವಿರುದ್ಧದ ಸರಣಿಯಲ್ಲಿ ದೊರೆಯುವ ಅವಕಾಶವನ್ನು ಸಂಜು ಸಮರ್ಥವಾಗಿ ಬಳಸಿಕೊಂಡರೆ ಈ ಪೈಪೋಟಿಯನ್ನು ಮುಂದುವರಿಸುವ ಅವಕಾಶ ದೊರೆಯಲಿದೆ. ಇಲ್ಲವಾದಲ್ಲಿ ಸಂಜು ವಿಶ್ವಕಪ್ ಕನಸನ್ನು ಭಗ್ನಗೊಳಿಸಲಿದ್ದಾರೆ.
ಋತುರಾಜ್ ಗಾಯಕ್ವಾಡ್
ಯುವ ಆಟಗಾರ ಋತುರಾಜ್ ಗಾಯಕ್ವಾಡ್ ಪ್ರತಿಭೆ ಎಂಥಾದ್ದು ಎಂಬುದು ಭಾರತೀಯ ಕ್ರಿಕೆಟ್ ಪ್ರೇಮಿಗಳಿಗೆ ಬಿಡಿಸಿ ಹೇಳಬೇಕಿಲ್ಲ. ಕ್ರೀಸ್ನಲ್ಲಿ ನೆಲೆಯೂರಿದರೆ ಎದುರಾಳಿ ಎಂಥಾದ್ದೇ ಬೌಲರ್ ಆಗಿದ್ದರೂ ದಂಡಿಸಲು ಋತು ಹಿಂದೇಟು ಹಾಕುವುದಿಲ್ಲ. ಆದರೆ ಭಾರತೀಯ ತಂಡದಲ್ಲಿ ಋತುರಾಜ್ ಗಾಯಕ್ವಾಡ್ ಸಿಕ್ಕ ಅವಕಾಶವನ್ನು ಸಮರ್ಥವಾಗಿ ಬಳಸಿಕೊಂಡಿದ್ದು ಬಹಳ ಕಡಿಮೆ. ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯ ಎಲ್ಲಾ ಪಂದ್ಯದಲ್ಲಿಯೂ ಆಡಿರುವ ಋತು ಒಂದು ಅರ್ಧ ಶತಕವನ್ನು ಮಾತ್ರವೇ ಗಳಿಸಿದರು. ಹೀಗಾಗಿ ಈ ಯುವ ಆಟಗಾರ ಕೂಡ ಐರ್ಲೆಂಡ್ ವಿರುದ್ಧದ ಸರಣಿಯನ್ನು ಎಷ್ಟು ಸಮರ್ಥವಾಗಿ ಬಳಸಿಕೊಳ್ಳಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ.
ವೆಂಕಟೇಶ್ ಐಯ್ಯರ್
2021ರ ಐಪಿಎಲ್ನಲ್ಲಿ ಅಮೋಘ ಪ್ರದರ್ಶನ ನಿಡಿ ಮಿಂಚಿದ್ದ ವೆಂಕಟೇಶ್ ಐಯ್ಯರ್ ನಂತರ ಹಾರ್ದಿಕ್ ಪಾಂಡ್ಯ ಅಲಭ್ಯತೆಯಲ್ಲಿ ಭಾರತೀಯ ತಂಡದಲ್ಲಿಯೂ ಅವಕಾಶವನ್ನು ಗಿಟ್ಟಿಸಿಕೊಂಡಿದ್ದರು. ಆದರೆ ಈ ಬಾರಿಯ ಐಪಿಎಲ್ನಲ್ಲಿ ವೆಂಕಟೇಶ್ ಐಯ್ಯರ್ ಅತ್ಯಂತ ಕಳಪೆ ಪ್ರದರ್ಶನ ನೀಡಿದ್ದಾರೆ. ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗದಲ್ಲಿಯೂ ಐಯ್ಯರ್ ಗಮನ ಸೆಳೆಯುವಲ್ಲಿ ವಿಫಲವಾದರು. ಮತ್ತೊಂದೆಡೆ ಹಾರ್ದಿಕ್ ಪಾಂಡ್ಯ ಅಮೋಘ ಪ್ರದರ್ಶನದೊಂದಿಗೆ ಕಮ್ಬ್ಯಾಕ್ ಮಾಡಿದ್ದು ಐರ್ಲೆಂಡ್ ವಿರುದ್ಧದ ಸರಣಿಗೆ ನಾಯಕತ್ವ ಕೂಡ ವಹಿಸಿಕೊಂಡಿದ್ದಾರೆ. ಹೀಗಾಗಿ ವೆಂಕಟೇಶ್ ಐಯ್ಯರ್ ಟಿ20 ವಿಶ್ವಕಪ್ನಲ್ಲಿ ಅವಕಾಶ ಗಿಟ್ಟಿಸಿಕೊಳ್ಳಬೇಕಾದರೆ ತನ್ನ ಸಾಮರ್ಥ್ಯವನ್ನು ಸಾಬೀತುಪಡಿಸುವ ಜೊತೆಗೆ ಸ್ಥಿರ ಪ್ರದರ್ಶನ ಕೂಡ ನೀಡಬೇಕಿದೆ.
ಐರ್ಲೆಂಡ್ ಪ್ರವಾಸ ಕೈಗೊಳ್ಳುವ ಭಾರತ ತಂಡ ಹೀಗಿದೆ
ಹಾರ್ದಿಕ್ ಪಾಂಡ್ಯ (ನಾಯಕ), ಭುವನೇಶ್ವರ್ ಕುಮಾರ್ (ಉಪ ನಾಯಕ), ಋತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್, ರಾಹುಲ್ ತ್ರಿಪಾಠಿ, ದೀಪಕ್ ಹೂಡಾ, ವೆಂಕಟೇಶ್ ಅಯ್ಯರ್, ಅಕ್ಷರ್ ಪಟೇಲ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಅವೇಶ್ ಖಾನ್, ಹರ್ಷಲ್ ಪಟೇಲ್, ಉಮ್ರಾನ್ ಮಲಿಕ್ , ಅರ್ಷದೀಪ್ ಸಿಂಗ್, ಯುಜ್ವೇಂದ್ರ ಚಹಾಲ್, ರವಿ ಬಿಷ್ಣೋಯ್