ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 2 ಪಂದ್ಯಗಳ ಟೆಸ್ಟ್ ಸರಣಿಯ ಅಂತಿಮ ಪಂದ್ಯ ಇಂದು ( ಡಿಸೆಂಬರ್ 3 ) ಮುಂಬೈನ ವಾಂಖೆಡೆ ಕ್ರಿಕೆಟ್ ಕ್ರೀಡಾಂಗಣದಲ್ಲಿ ಆರಂಭವಾಯಿತು. ಈ ಪಂದ್ಯದ ಮೊದಲನೇ ದಿನ ಪಿಚ್ ಒದ್ದೆಯಾಗಿದ್ದ ಕಾರಣ ಮಧ್ಯಾಹ್ನ 12 ಗಂಟೆಯ ನಂತರ ಪಂದ್ಯ ಆರಂಭವಾಯಿತು. ಹೌದು, ಮುಂಬೈ ನಗರದಲ್ಲಿ ಕಳೆದೆರಡು ದಿನಗಳಲ್ಲಿ ಸುರಿದ ನಿರಂತರ ಮಳೆಯಿಂದ ವಾಂಖೆಡೆ ಕ್ರಿಕೆಟ್ ಕ್ರೀಡಾಂಗಣದ ಪಿಚ್ ಒದ್ದೆಯಾದ ಪರಿಣಾಮ ಪಂದ್ಯ ತಡವಾಗಿ ಆರಂಭವಾಯಿತು. ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಮೊದಲು ಬ್ಯಾಟಿಂಗ್ ಮಾಡುವ ಆಯ್ಕೆ ಮಾಡಿಕೊಂಡರು.
ರೈನಾ ಅಲ್ಲ ತಾವು ಕೈಬಿಟ್ಟ ಈ ಆಟಗಾರನ ಮೇಲೆ ಮೆಗಾ ಆಕ್ಷನ್ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಕಣ್ಣು!
ಹೀಗೆ ಮೊದಲು ಬ್ಯಾಟಿಂಗ್ ಆರಂಭಿಸಿದ ಟೀಂ ಇಂಡಿಯಾ ಪರ ಆರಂಭಿಕ ಆಟಗಾರರಾಗಿ ಕಣಕ್ಕಿಳಿದ ಮಯಾಂಕ್ ಅಗರ್ವಾಲ್ ಮತ್ತು ಶುಬ್ ಮನ್ ಗಿಲ್ ಉತ್ತಮ ಆರಂಭವನ್ನೇ ಕಟ್ಟಿಕೊಟ್ಟರು. ಶುಬ್ ಮನ್ ಗಿಲ್ 44 ರನ್ ಗಳಿಸಿ ಪೆವಿಲಿಯನ್ ಸೇರಿಕೊಂಡರೆ, ನಂತರ ಕಣಕ್ಕಿಳಿದ ಚೇತೇಶ್ವರ್ ಪೂಜಾರ ಮತ್ತು ನಾಯಕ ವಿರಾಟ್ ಕೊಹ್ಲಿ ಶೂನ್ಯ ಸುತ್ತಿ ನಿರ್ಗಮಿಸಿದರು. ನಂತರ ಕಣಕ್ಕಿಳಿದ ನ್ಯೂಜಿಲೆಂಡ್ ವಿರುದ್ಧದ ಪ್ರಥಮ ಟೆಸ್ಟ್ ಪಂದ್ಯದ ಹೀರೋ ಶ್ರೇಯಸ್ ಅಯ್ಯರ್ 18 ರನ್ ಗಳಿಸಿ ಅಜಾಜ್ ಪಟೇಲ್ ಅವರಿಗೆ ವಿಕೆಟ್ ಒಪ್ಪಿಸಿದರು. ನಂತರ ವೃದ್ಧಿಮಾನ್ ಸಹಾ ಮೊದಲ ದಿನದಾಟದಂತ್ಯಕ್ಕೆ ಅಜೇಯರಾಗಿ ವಿಕೆಟ್ ಕಾಯ್ದುಕೊಂಡಿದ್ದರು. ಆದರೆ ಎರಡನೇ ದಿನದ ಆಟ ಆರಂಭವಾಗುತ್ತಿದ್ದಂತೆ ಅಜಾಜ್ ಪಟೇಲ್ ಅವರ ಎಸೆತದಲ್ಲಿ ಎಲ್ ಬಿ ಡಬ್ಲ್ಯುಗೆ ವೃದ್ಧಿಮಾನ್ ಸಹಾ ಬಲಿಯಾದರು.
ಸಾಲು ಸಾಲು ಕಳಪೆ ಪ್ರದರ್ಶನ; ರಹಾನೆ ಬದಲು ಭಾರತ ಟೆಸ್ಟ್ ತಂಡಕ್ಕೆ ನೂತನ ಉಪನಾಯಕನ ಆಯ್ಕೆ!
ಅಷ್ಟೇ ಅಲ್ಲದೆ ನಂತರ ಕಣಕ್ಕಿಳಿದ ರವಿಚಂದ್ರನ್ ಅಶ್ವಿನ್ ಕೂಡ ಅಜಾಜ್ ಪಟೇಲ್ ಎಸೆತದಲ್ಲಿ ಔಟ್ ಆಗುವ ಮೂಲಕ ಗೋಲ್ಡನ್ ಡಕ್ ಔಟ್ ಆಗಿ ಪೆವಿಲಿಯನ್ ಸೇರಿಕೊಂಡರು. ಹೀಗೆ ಮೊದಲನೇ ದಿನ ತಂಡದ ಮೇಲಿನ ಕ್ರಮಾಂಕದ ಆಟಗಾರರು ಸಾಲುಸಾಲಾಗಿ ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರಿಕೊಂಡರೆ ಆರಂಭಿಕ ಆಟಗಾರನಾಗಿ ಕಣಕ್ಕಿಳಿದಿದ್ದ ಮಯಾಂಕ್ ಅಗರ್ವಾಲ್ ಮಾತ್ರ ಏಕಾಂಗಿ ಹೋರಾಟ ನಡೆಸಿದರು. ಮೊದಲನೇ ದಿನದಾಟದಂತ್ಯಕ್ಕೆ ವಿಕೆಟ್ ಕಳೆದುಕೊಳ್ಳದೆ ಶತಕ ಬಾರಿಸಿದ್ದ ಮಯಾಂಕ್ ಅಗರ್ವಾಲ್ ದ್ವಿತೀಯ ದಿನದಾಟದಂದು 150 ರನ್ಗಳ ಗುರಿಯನ್ನು ದಾಟಿದರು. ಹೀಗೆ 150 ರನ್ ಬಾರಿಸಿದ ಬೆನ್ನಲ್ಲೇ ಬೌಲರ್ ಅಜಾಜ್ ಪಟೇಲ್ ಅವರ ಎಸೆತದಲ್ಲಿ ಟಾಮ್ ಬ್ಲಂಡೆಲ್ ಅವರಿಗೆ ಕ್ಯಾಚ್ ನೀಡುವ ಮೂಲಕ ಮಯಾಂಕ್ ಅಗರ್ವಾಲ್ ಪೆವಿಲಿಯನ್ ಕಡೆ ಹೆಜ್ಜೆ ಹಾಕಿದರು.
SRH ಇಲ್ಲದಿದ್ದರೆ ವಾರ್ನರ್ ಕ್ರಿಕೆಟ್ನಲ್ಲಿಯೇ ಇರುತ್ತಿರಲಿಲ್ಲ; SRH ಮಾಡಿದ್ದ ಸಹಾಯ ಬಿಚ್ಚಿಟ್ಟ ಪಠಾಣ್
ಒಟ್ಟಾರೆ 311 ಎಸೆತಗಳನ್ನು ಎದುರಿಸಿದ ಮಯಾಂಕ್ ಅಗರ್ವಾಲ್ 150 ರನ್ ಗಳಿಸುವುದರ ಮೂಲಕ ಟೀಮ್ ಇಂಡಿಯಾಗೆ ಆಪದ್ಬಾಂಧವನಾಗಿ ನಿಂತರು. ಮಯಾಂಕ್ ಅಗರ್ವಾಲ್ ಅವರ ಈ ಇನ್ನಿಂಗ್ಸ್ನಲ್ಲಿ 17 ಬೌಂಡರಿ ಮತ್ತು 4 ಸಿಕ್ಸರ್ ಕೂಡ ಸೇರಿವೆ.
ಇನ್ನು ಮಯಾಂಕ್ ಅಗರ್ವಾಲ್ ನಿರ್ಗಮನದ ವೇಳೆಗೆ ಟೀಮ್ ಇಂಡಿಯಾ ತನ್ನ 7 ವಿಕೆಟ್ಗಳನ್ನು ಕಳೆದುಕೊಂಡಿದ್ದು, ಈ ಎಲ್ಲಾ 7 ವಿಕೆಟ್ಗಳನ್ನೂ ನ್ಯೂಜಿಲೆಂಡ್ ತಂಡದ ಬೌಲರ್ ಅಜಾಜ್ ಪಟೇಲ್ ಅವರೇ ಪಡೆದುಕೊಂಡಿರುವುದು ವಿಶೇಷವಾಗಿದೆ.