ಮಳೆಯಿಂದಾಗಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಏಕದಿನ ಸರಣಿಯ ಮೊದಲ ಪಂದ್ಯ ರದ್ದಾಗಿದೆ. ಒಂದೂ ಎಸೆತವನ್ನು ಕಾಣದೆ ಈ ಪಂದ್ಯ ರದ್ದಾಗಿದ್ದು ಅಭಿಮಾನಿಗಳು ನಿರಾಸೆ ಅನುಭವಿಸಿದ್ದಾರೆ.
ಟೀಮ್ ಇಂಡಿಯಾ ಈ ಹಿಂದಿನ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯನ್ನು ಹೀನಾಯವಾಗಿ ಸೋತು ಕೀವಿಸ್ ಕೈಗೆ ಸರಣಿಯನ್ನು ಒಪ್ಪಿಸಿತ್ತು. ಆದರೆ ತವರಿನಲ್ಲಿ ಟೀಮ್ ಇಂಡಿಯಾ ಸಾಕಷ್ಟು ಬಲಿಷ್ಠ ಎನ್ನುವುದನ್ನು ಯಾರೂ ಮರೆಯುವಂತಿಲ್ಲ. ಹೀಗಾಗಿ ಟೀಮ್ ಇಂಡಿಯಾ ಪ್ರದರ್ಶನ ಸಾಕಷ್ಟು ಕುತೂಹಲಕಾರಿಯಾಗಿತ್ತು.
ಮತ್ತೊಂದೆಡೆ ದಕ್ಷಿಣ ಆಫ್ರಿಕಾ ತಂಡ ತನ್ನ ತವರು ನೆಲದಲ್ಲಿ ಆಸ್ಟ್ರೇಲಿಯಾವನ್ನು ಮಣಿಸಿದ ಸಾಧನೆ ಮಾಡಿದೆ. ಆಸ್ಟ್ರೇಲಿಯಾ ತಂಡವನ್ನು ಕ್ಲೀನ್ ಸ್ವೀಪ್ ಮಾಡಿದ ದಕ್ಷಿಣ ಆಫ್ರಿಕಾ ಅದೇ ಪ್ರದರ್ಶನವನ್ನು ಭಾರತದ ನೆಲದಲ್ಲೂ ಮುಂದುವರೆಸುವ ಹುಮ್ಮಸ್ಸಿನಲ್ಲಿದೆ.
ಧರ್ಮಶಾಲಾ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯುತ್ತಿದೆ. ಪಂದ್ಯದ ಆರಂಭದಲ್ಲಿ ಪಿಚ್ ಬೌಲರ್ಗಳಿಗೆ ಸಹಕಾರಿಯಾಗುವ ನಿರೀಕ್ಷೆಯಿದ್ದು ಮುಂದೆ ಬ್ಯಾಟ್ಸ್ಮನ್ಗಳಿಗೆ ಅನುಕೂಲವಾಗುವ ಸಾಧ್ಯತೆಯಿದೆ.