
ದಿನೇಶ್ ಕಾರ್ತಿಕ್
ಟೀಮ್ ಇಂಡಿಯಾ ವೈಟ್ಬಾಲ್ ತಂಡದಲ್ಲಿ ಬಹುತೇಕ ಮೂರು ವರ್ಷಗಳ ಬಳಿಕ ದಿನೇಶ್ ಕಾರ್ತಿಕ್ ಮರಳಿ ಸ್ಥಾನವನ್ನು ಗಳಿಸಿಕೊಂಡಿದ್ದಾರೆ. 2019ರ ಏಕದಿನ ವಿಶ್ವಕಪ್ನ ಬಳಿಕ ಡಿಕೆ ಭಾರತೀಯ ಕ್ರಿಕೆಟ್ ತಂಡದಿಂದ ಹೊರಗುಳಿದಿದ್ದರು. ಹೀಗಾಗಿ ದಿನೇಶ್ ಕಾರ್ತಿಕ್ ಅವರ ಅಂತಾರಾಷ್ಟ್ರೀಯ ಕ್ರಿಕೆಟ್ ಜೀವನ ಬಹುತೇಕ ಅಂತ್ಯವಾಯಿತು ಎಂದೇ ಎಲ್ಲರೂ ಭಾವಿಸಿದ್ದರು. ಆದರೆ ಈ ಬಾರಿಯ ಐಪಿಎಲ್ನಲ್ಲಿ ಆರ್ಸಿಬಿ ತಂಡದ ಪರವಾಗಿ ಅಮೋಘ ಪ್ರದರ್ಶನ ನೀಡಿದ ದಿನೇಶ್ ಕಾರ್ತಿಕ್ ಎಲ್ಲರ ಗಮನ ಸೆಳೆದರು. ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ನಲ್ಲಿ ಆಡುವುದು ನನ್ನ ಗುರಿ ಎಂದು ಟೂರ್ನಿಯ ಸಂದರ್ಭದಲ್ಲಿ ತಿಳಿಸಿದ್ದ ಡಿಕೆ ಈಗ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗೆ ಆಯ್ಕೆಯಾಗಿದ್ದಾರೆ. ಈ ಸರಣಿಯಲ್ಲಿ ಆಡುವ ಬಳಗದಲ್ಲಿ ಅವಕಾಶ ಗಳಿಸಿಕೊಂಡರೆ ದಿನೇಶ್ ಕಾರ್ತಿಕ್ ಪ್ರದರ್ಶನ ಹೇಗಿರಲಿದೆ ಎಂಬುದು ಎಲ್ಲರ ಕುತೂಹಲವಾಗಿದೆ. ಆರ್ಸಿಬಿ ಪರವಾಗಿ ಡೆತ್ ಓವರ್ಗಳಲ್ಲಿ ಅದ್ಭುತ ಪ್ರದರ್ಶನ ನೀಡಿ ಮಿಂಚಿರುವ ದಿನೇಶ್ ಕಾರ್ತಿಕ್ ಭಾರತೀಯ ತಂಡದಲ್ಲಿಯೂ ಅಂಥಾದ್ದೇ ಪ್ರದರ್ಶನ ನೀಡಲಿದ್ದಾರಾ ಎಂಬುದು ಕುತೂಹಲ ಮೂಡಿಸಿದೆ.

ಹಾರ್ದಿಕ್ ಪಾಂಡ್ಯ
ಭಾರತೀಯ ತಂಡದ ಪ್ರಮುಖ ಭಾಗವಾಗಿದ್ದ ಹಾರ್ದಿಕ್ ಪಾಂಡ್ಯ ಕಳೆದ ಟಿ20 ವಿಶ್ವಕಪ್ನ ಬಳಿಕ ಫಿಟ್ನೆಸ್ ಸಮಸ್ಯೆಯ ಕಾರಣದಿಂದಾಗಿ ತಂಡದಿಂದ ಹೊರಬಿದ್ದಿದ್ದರು. ಈ ಬಾರಿಯ ಐಪಿಎಲ್ಗೆ ಸಂಪೂರ್ಣ ಫಿಟ್ ಆಗಿ ಮರಳಿದ ಪಾಂಡ್ಯ ಗುಜರಾತ್ ಟೈಟನ್ಸ್ ತಂಡದ ನಾಯಕತ್ವ ವಹಿಸಿಕೊಂಡು ಮಿಂಚಿದ್ದಾರೆ. ನಾಲ್ಕನೇ ಕ್ರಮಾಂಕದಲಲ್ಇ ಬ್ಯಾಟಿಂಗ್ಗೆ ಇಳಿದು ಅದ್ಭುತ ಪ್ರದರ್ಶನ ನೀಡಿರುವ ಹಾರ್ದಿಕ್ ಪಾಂಡ್ಯ ಬೌಲಿಂಗ್ನಲ್ಲಿ ಫೈನಲ್ ಪಂದ್ಯದಲ್ಲಿ 17 ರನ್ಗಳನ್ನು ನೀಡಿ ಮೂರು ವಿಕೆಟ್ ಪಡೆಯುವ ಮೂಲಕ ಮಿಂಚಿದ್ದಾರೆ. ಹೀಗಾಗಿ ದಕ್ಷಿಣ ಆಫ್ರಿಕಾ ವಿರುದ್ಧಧ ಸರಣಿಯಲ್ಲಿ ಹಾರ್ದಿಕ್ ಪಾಂಡ್ಯ ಯಾವ ರೀತಿಯ ಪ್ರದರ್ಶನ ನೀಡಲಿದ್ದಾರೆ ಎಂಬುದು ಈಗ ಎಲ್ಲರಲ್ಲಿಯೂ ಕುತೂಹಲ ಮೂಡಿಸಿದೆ.

ಕುಲ್ದೀಪ್ ಯಾದವ್
ಸ್ಪಿನ್ನರ್ ಕುಲ್ದೀಪ್ ಯಾದವ್ ಈ ಬಾರಿಯ ಐಪಿಎಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರವಾಗಿ ಅದ್ಭುತ ಪ್ರದರ್ಶನ ನೀಡಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ತಂಡ ಲೀಗ್ ಹಂತದಿಂದಲೂ ಟೂರ್ನಿಯಿಂದ ನಿರ್ಗಮಿಸಿದ್ದರೂ ಕುಲ್ದೀಪ್ ಯಾದವ್ ನೀಡಿದ ಪ್ರದರ್ಶನ ಎಲ್ಲರ ಗಮನಸೆಳೆದಿದೆ. ಆಡಿದ 14 ಪಂದ್ಯಗಳಲ್ಲಿ 21 ವಿಕೆಟ್ ಪಡೆದುಕೊಂಡಿದ್ದು ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ಗಳ ಪಟ್ಟಿಯಲ್ಲಿ 5ನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಈಗ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗೆ ಆಯ್ಕೆಯಾಗಿರುವ ಕುಲ್ದೀಪ್ ಯಾದವ್ ಯಾವ ರೀತಿಯ ಪ್ರದರ್ಶನ ನೀಡಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ.

ಅರ್ಷದೀಪ್ ಸಿಂಗ್
ಐಪಿಎಲ್ನಲ್ಲಿ ಪಂಜಾಬ್ ಕಿಂಗ್ಸ್ ತಂಡದ ಪರವಾಗಿ ಆಡುತ್ತಿರುವ ಅರ್ಷದೀಪ್ ಸಿಂಗ್ ಕಳೆದ ಎರಡು ಐಪಿಎಲ್ ಆವೃತ್ತಿಗಳಲ್ಲಿ ಮಿಂಚುತ್ತಿದ್ದಾರೆ. ಈ ಬಾರಿಯ ಆವೃತ್ತಿಯಲ್ಲಿ ಅರ್ಷ್ದೀಪ್ ಸಿಂಗ್ ವಿಕೆಟ್ ಕೀಳುವಲ್ಲಿ ಹೆಚ್ಚು ಯಶಸ್ವಿಯಾಗದಿದ್ದರೂ ರನ್ ನಿಯಂತ್ರಣದಲ್ಲಿ ಗಮನಸೆಳೆದಿದ್ದಾರೆ. ಅದರಲ್ಲೂ ಡೆತ್ ಓವರ್ಗಳಲ್ಲಿ ಅರ್ಷ್ದೀಪ್ ಅದ್ಭುತ ಯಾರ್ಕರ್ಗಳ ಮೂಲಕ ಎದುರಾಳಿ ತಂಡದ ದಾಂಡಿಗರ ಮೇಲೆ ಭಾರೀ ನಿಯಂತ್ರಣ ಸಾಧಿಸುವಲ್ಲಿ ಯಶಸ್ವಿಯಾಗಿದ್ದರು. ಇದೀಗ ದಕ್ಷಿಣ ಆಫ್ರಿಕಾ ವಿರುಯದ್ಧಧ ಸರಣಿಯ ಮೂಲಕ ಇದೇ ಮೊದಲ ಬಾರಿಗೆ ಭಾರತೀಯ ತಂಡದಲ್ಲಿ ಅವಕಾಶಗಿಟ್ಟಿಕೊಂಡಿದ್ದಾರೆ. ಹೀಗಾಗಿ ಈ ಆಟಗಾರನ ಮೇಲೆಯೂ ದೊಡ್ಡ ನಿರೀಕ್ಷೆಯಿದೆ.


Click it and Unblock the Notifications
