
ದಕ್ಷಿಣ ಆಫ್ರಿಕಾ ತಂಡದಲ್ಲಿ ಈ ಮೂವರನ್ನು ಬಿಟ್ಟರೆ ಬೇರೆ ಯಾರೂ ಉತ್ತಮ ಆಟಗಾರರಿಲ್ಲ
ಭಾರತ ಮತ್ತು ದಕ್ಷಿಣ ಆಫ್ರಿಕಾ ಸರಣಿಯ ಫಲಿತಾಂಶದ ಕುರಿತು ಮಾತನಾಡಿರುವ ಶರಣ್ ದೀಪ್ ಸಿಂಗ್ ಟೀಮ್ ಇಂಡಿಯಾ 3-0 ಅಂತರದಲ್ಲಿ ಸರಣಿಯನ್ನು ಗೆಲ್ಲುವುದರ ಮೂಲಕ ಸೌತ್ ಆಫ್ರಿಕಾಗೆ ವೈಟ್ ವಾಷ್ ಬಳಿಯಲಿದೆ ಎಂದು ಊಹಿಸಿದ್ದಾರೆ. ದಕ್ಷಿಣ ಆಫ್ರಿಕಾದಲ್ಲಿ ಕೇವಲ ಡೀನ್ ಎಲ್ಗರ್, ಏಡೆನ್ ಮಾರ್ಕ್ರಮ್ ಮತ್ತು ಕ್ವಿಂಟನ್ ಡಿ ಕಾಕ್ ಮಾತ್ರ ಉತ್ತಮ ಪ್ರದರ್ಶನವನ್ನು ನೀಡಬಲ್ಲ ಆಟಗಾರರಾಗಿದ್ದಾರೆ, ಇವರ ಮೇಲೆ ಹೆಚ್ಚಿನ ಒತ್ತಡ ಬೀಳುತ್ತಿದ್ದು ಉಳಿದ ಆಟಗಾರರು ಹೇಳಿಕೊಳ್ಳುವಂತಹ ಪ್ರದರ್ಶನ ನೀಡುವಲ್ಲಿ ವಿಫಲರಾಗುತ್ತಿದ್ದಾರೆ ಹೀಗಾಗಿ ಭಾರತದ ಕಠಿಣ ಬೌಲಿಂಗ್ ವಿರುದ್ಧ ದಕ್ಷಿಣ ಆಫ್ರಿಕಾ ಗೆಲ್ಲುವುದು ಅಸಾಧ್ಯ ಎಂದು ಶರಣ್ ದೀಪ್ ಸಿಂಗ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಮಳೆ ಇಲ್ಲದಿದ್ದರೆ ಮೂರ್ನಾಲ್ಕು ದಿನಗಳಲ್ಲಿಯೇ ಪಂದ್ಯ ಮುಗಿಯುತ್ತಿತ್ತು
ಇನ್ನು ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಪ್ರಥಮ ಟೆಸ್ಟ್ ಪಂದ್ಯದ ಎರಡನೇ ದಿನದಾಟಕ್ಕೆ ಮಳೆ ಅಡ್ಡಿಯುಂಟು ಮಾಡಿ ಸಂಪೂರ್ಣ ದಿನದಾಟ ಆಹುತಿಯಾದ ಕುರಿತು ಮಾತನಾಡಿರುವ ಶರಣ್ ದೀಪ್ ಸಿಂಗ್ ಆ ದಿನ ಮಳೆ ಬಾರದೇ ಇದ್ದಿದ್ದರೆ ಮೂರ್ನಾಲ್ಕು ದಿನಗಳಲ್ಲಿಯೇ ಈ ಪಂದ್ಯ ಮುಗಿಯುತ್ತಿತ್ತು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸೆಂಚುರಿಯನ್ ಅಂಗಳದಲ್ಲಿ ಗೆದ್ದಿರುವುದು ದೊಡ್ಡ ಸುದ್ದಿ
ಇನ್ನು ಸೆಂಚುರಿಯನ್ ಅಂಗಳದಲ್ಲಿ ಟೀಮ್ ಇಂಡಿಯಾ ಗೆಲುವು ಸಾಧಿಸಿರುವುದನ್ನು ಕೊಂಡಾಡಿರುವ ಶರಣ್ ದೀಪ್ ಸಿಂಗ್ ಸೆಂಚುರಿಯನ್ ಕ್ರೀಡಾಂಗಣದಲ್ಲಿ ಟೆಸ್ಟ್ ಪಂದ್ಯವನ್ನು ಗೆದ್ದಿರುವ ಏಷ್ಯಾದ ಮೊದಲ ತಂಡ ಎಂಬ ಸಾಧನೆಯನ್ನು ವಿರಾಟ್ ಕೊಹ್ಲಿ ನಾಯಕತ್ವದ ಟೀಮ್ ಇಂಡಿಯಾ ಮಾಡಿದೆ, ಪಂದ್ಯದಲ್ಲಿ ವಿರಾಟ್ ಕೊಹ್ಲಿ ನಾಯಕತ್ವವನ್ನು ಅದ್ಬುತವಾಗಿ ನಿರ್ವಹಿಸಿದರು ಮತ್ತು ರಾಹುಲ್ ದ್ರಾವಿಡ್ ತಾವು ಕೋಚ್ ಆಗಿ ತಂಡವನ್ನು ಸೆಂಚುರಿಯನ್ ಅಂಗಳದಲ್ಲಿ ಮುನ್ನಡೆಸಿದ ಮೊದಲ ಪಂದ್ಯದಲ್ಲಿಯೇ ಜಯವನ್ನು ಪಡೆದು ಸಾಧನೆ ಮಾಡಿದ್ದಾರೆ ಎಂದು ಶ್ಲಾಘಿಸಿದ್ದಾರೆ.


Click it and Unblock the Notifications












