ಇಂದೋರ್, ಡಿಸೆಂಬರ್ 22 : ಇಲ್ಲಿನ ಹೋಳ್ಕರ್ ಕ್ರೀಡಾಂಗಣದಲ್ಲಿ ನಡೆದಿರುವ ಶ್ರೀಲಂಕಾ ತಂಡದ ವಿರುದ್ಧದ ಎರಡನೇ ಟಿ20ಐ ಪಂದ್ಯವನ್ನು ಗೆಲ್ಲಲು ರೋಹಿತ್ ಪಡೆ ಸಜ್ಜಾಗಿದೆ. ಟೆಸ್ಟ್ ಹಾಗೂ ಏಕದಿನ ಕ್ರಿಕೆಟ್ನಲ್ಲಿ ಸರಣಿ ಗೆದ್ದುಕೊಂಡಿರುವ ಭಾರತ ತಂಡ ಈಗ ಟಿ20ಐ ಸರಣಿ ಮೇಲೆ ಕಣ್ಣಿಟ್ಟಿದೆ. ಶ್ರೀಲಂಕಾಕ್ಕೆ ಗೆಲ್ಲಲು 261ರನ್ ಗಳ ಗುರಿ ನೀಡಲಾಗಿದೆ.
ಭಾರತ ತಂಡದಲ್ಲಿ ಕರ್ನಾಟಕದ ಕೆ.ಎಲ್ ರಾಹುಲ್ ಹಾಗೂ ಮನೀಷ್ ಪಾಂಡೆ ಸ್ಥಾನ ಪಡೆದುಕೊಂಡಿದ್ದು, ಆರಂಭಿಕ ಬ್ಯಾಟ್ಸ್ಮನ್ ಆಗಿ ನಾಯಕ ರೋಹಿತ್ ಶರ್ಮಾ ಕಣಕ್ಕಿಳಿದ್ದಾರೆ.

2ನೇ ಟಿ20ಯಲ್ಲಿ ಟಾಸ್ ಗೆದ್ದ ಶ್ರೀಲಂಕಾದ ನಾಯಕ ಥಿಸೆರಾ ಪೆರೆರಾ ಅವರು ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಕಟಕ್ ನಲ್ಲಿ ನಡೆದ ಮೊದಲ ಪಂದ್ಯವನ್ನು ಭಾರತ ಸುಲಭವಾಗಿ ಜಯ ದಾಖಲಿಸಿದ್ದನ್ನು ಇಲ್ಲಿ ಸ್ಮರಿಸಬಹುದು.