ಕೊಲಂಬೋ, ಜುಲೈ 29: ಭಾರತ ಹಾಗೂ ಶ್ರೀಲಂಕಾ ನಡುವಿನ ಟಿ20 ಸರಣಿಯ ಅಂತಿಮ ಹಾಗೂ ಮೂರನೇ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ಶಿಖರ್ ಧವನ್ ಟಾಸ್ ಗೆದ್ದಿದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಈ ಪಂದ್ಯಕ್ಕಾಗಿ ಭಾರತ ತಂಡದಲ್ಲಿ ಒಂದು ಬದಲಾವಣೆಯನ್ನು ಮಾಡಲಾಗಿದೆ. ಕಳೆದ ಪಂದ್ಯದಲ್ಲಿ ಕಣಕ್ಕಿಳಿದಿದ್ದ ನವ್ದೀಪ್ ಸೈನಿ ಫೀಲ್ಡಿಂಗ್ ವೇಳೆ ಗಾಯಗೊಂಡಿದ್ದರು. ಹೀಗಾಗಿ ಅವರ ಸ್ಥಾನದಲ್ಲಿ ಸಂದೀಪ್ ವಾರಿಯರ್ ಅವಕಾಶವನ್ನು ಪಡೆದುಕೊಂಡಿದ್ದಾರೆ. ಶ್ರೀಲಂಕಾ ತಂಡದಲ್ಲಿಯೂ ಒಂದು ಬದಲಾವನೆ ಮಾಡಿಕೊಳ್ಳಲಾಗಿದ್ದು ಇಸುರು ಉದಾನ ಆಡುವ ಬಳಗದಿಂದ ಹೊರಗುಳಿದಿದ್ದು ಪತುಂ ಸಿನ್ನಂಕಾ ಆಡುವ ಬಳಗದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.
ಸರಣಿಭಾರತ ಹಾಗೂ ಶ್ರೀಲಂಕಾ ತಂಡಗಳು ಮೊದಲ ಎರಡು ಪಂದ್ಯಗಳಲ್ಲಿ ತಲಾ ಒಂದು ಗೆಲುವು ಸಾಧಿಸಿದೆ. ಹೀಗಾಗಿ ಈ ಪಂದ್ಯ ಸರಣಿ ಗೆಲ್ಲುವ ತಂಡವನ್ನು ನಿರ್ಧರಿಸಲಿದ್ದು ನಿರ್ಣಾಯಕವಾಗಿದೆ. ಹೀಗಾಗಿ ಹೆಚ್ಚಿನ ಕುತೂಹಲವನ್ನು ಮೂಡಿಸಿದೆ.
Live ಸ್ಕೋರ್ಪಟ್ಟಿ ಹೀಗಿದೆ:
ಟೀಮ್ ಇಂಡಿಯಾ ಆಡುವ ಬಳಗ:
ಶಿಖರ್ ಧವನ್ (ನಾಯಕ), ಋತುರಾಜ್ ಗಾಯಕ್ವಾಡ್, ದೇವದತ್ ಪಡಿಕ್ಕಲ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ನಿತೀಶ್ ರಾಣಾ, ಭುವನೇಶ್ವರ್ ಕುಮಾರ್, ಕುಲದೀಪ್ ಯಾದವ್, ರಾಹುಲ್ ಚಹರ್, ಸಂದೀಪ್ ವಾರಿಯರ್, ಚೇತನ್ ಸಕರಿಯಾ, ವರುಣ್ ಚಕ್ರವರ್ತಿ
ಶ್ರೀಲಂಕಾ ಆಡುವ ಬಳಗ:
ಅವಿಷ್ಕಾ ಫರ್ನಾಂಡೊ, ಮಿನೋಡ್ ಭನುಕಾ (ವಿಕೆಟ್ ಕೀಪರ್), ಸದೀರಾ ಸಮರವಿಕ್ರಮ, ಪಾತುಮ್ ನಿಸ್ಸಂಕಾ, ದಸುನ್ ಶನಕ (ನಾಯಕ), ಧನಂಜಯ ಡಿ ಸಿಲ್ವಾ, ವನಿಂದು ಹಸರಂಗ, ರಮೇಶ್ ಮೆಂಡಿಸ್, ಚಮಿಕಾ ಕರುಣರತ್ನ, ಅಕಿಲಾ ದನಂಜಯ, ದುಷ್ಮಂತ ಚಮೀರಾ