
ಬದಲಾವಣೆಯಿಲ್ಲದೆ ಕಣಕ್ಕಿಳಿದ ಭಾರತ
ಇನ್ನು ಈ ನಿರ್ಣಾಯಕ ಪಂದ್ಯದಲ್ಲಿ ಟೀಮ್ ಇಂಡಿಯಾ ಯಾವುದೇ ಬದಲಾವಣೆ ಮಾಡಿಕೊಳ್ಳದೆ ಕಣಕ್ಕಿಳಿದಿದೆ. ಕಳೆದ ಪಂದ್ಯದಲ್ಲಿ ಐದು ನೋಬಾಲ್ ಎಸೆದು ಭಾರೀ ಟೀಕೆಗೆ ಗುರಿಯಾಗಿದ್ದ ಅರ್ಶ್ದೀಪ್ ಸಿಂಗ್ ಈ ಪಂದ್ಯದಲ್ಲಿ ಮತ್ತೆ ಅವಕಾಶ ಗಿಟ್ಟಿಸಿಕೊಂಡಿದ್ದಾರೆ. ಮತ್ತೊಂದೆಡೆ ಆರಂಭಿಕ ಮೆರಡು ಪಂದ್ಯದಲ್ಲಿ ಇನ್ನಿಂಗ್ಸ್ ಆರಂಭಿಸಿದ್ದ ಶುಬ್ಮನ್ ಗಿಲ್ ಕೂಡ ಪರಿಣಾಮಕಾರಿ ಇನ್ನಿಂಗ್ಸ್ ಆಡುವಲ್ಲಿ ವಿಫಲವಾಗಿದ್ದಾರೆ. ಆದರೆ ಈ ಪಂದ್ಯದಲ್ಲಿ ನಾಯಕ ಗಿಲ್ ಮೇಲೆ ನಂಬಿಕೆಯಿರಿಸಿದ್ದು ಮತ್ತೊಂದು ಅವಕಾಶ ನೀಡಲಾಗಿದೆ. ಋತುರಾಜ್ ಗಾಯಕ್ವಾಡ್ ಮತ್ತೆ ಬೆಂಚ್ ಕಾಯಬೇಕಾಗಿದೆ. ಇನ್ನು ಶ್ರೀಲಂಕಾ ತಂಡದಲ್ಲಿ ಒಂದು ಬದಲಾವಣೆ ಮಾಡಿಕೊಂಡಿದ್ದು ಭಾನುಕಾ ರಾಜಪಕ್ಸೆ ಬದಲಿಗೆ ಅವಿಷ್ಕಾ ಫರ್ನಾಂಡೋ ಆಡುವ ಬಳಗದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.

ಭಾರತ ಆಡುವ ಬಳಗ
ಇಶಾನ್ ಕಿಶನ್(ವಿಕೆಟ್ ಕೀಪರ್), ಶುಬ್ಮನ್ ಗಿಲ್, ಸೂರ್ಯಕುಮಾರ್ ಯಾದವ್, ರಾಹುಲ್ ತ್ರಿಪಾಠಿ, ಹಾರ್ದಿಕ್ ಪಾಂಡ್ಯ(ನಾಯಕ), ದೀಪಕ್ ಹೂಡಾ, ಅಕ್ಸರ್ ಪಟೇಲ್, ಅರ್ಷ್ದೀಪ್ ಸಿಂಗ್, ಶಿವಂ ಮಾವಿ, ಉಮ್ರಾನ್ ಮಲಿಕ್, ಯುಜ್ವೇಂದ್ರ ಚಾಹಲ್
ಬೆಂಚ್: ಋತುರಾಜ್ ಗಾಯಕ್ವಾಡ್, ವಾಷಿಂಗ್ಟನ್ ಸುಂದರ್, ಹರ್ಷಲ್ ಪಟೇಲ್, ಮುಖೇಶ್ ಕುಮಾರ್

ಶ್ರೀಲಂಕಾ ಆಡುವ ಬಳಗ
ಶ್ರೀಲಂಕಾ: ಪಾತುಮ್ ನಿಸ್ಸಾಂಕ, ಕುಸಲ್ ಮೆಂಡಿಸ್(ವಿಕೆಟ್ ಕೀಪರ್), ಅವಿಷ್ಕಾ ಫರ್ನಾಂಡೋ, ಧನಂಜಯ ಡಿ ಸಿಲ್ವಾ, ಚರಿತ್ ಅಸಲಂಕಾ, ದಸುನ್ ಶನಕ(ನಾಯಕ), ವನಿಂದು ಹಸರಂಗ, ಚಮಿಕಾ ಕರುಣಾರತ್ನೆ, ಮಹೀಶ್ ತೀಕ್ಷಣ, ಕಸುನ್ ರಜಿತ, ದಿಲ್ಶನ್ ಮಧುಶಂಕ
ಬೆಂಚ್: ಲಹಿರು ಕುಮಾರ, ಭಾನುಕಾ ರಾಜಪಕ್ಸೆ,, ಅಶೇನ್ ಬಂಡಾರ, ಪ್ರಮೋದ್ ಮದುಶನ್, ದುನಿತ್ ವೆಳ್ಳಾಲಗೆ, ನುವಾನ್ ತುಷಾರ, ಸದೀರ ಸಮರವಿಕ್ರಮ


Click it and Unblock the Notifications












