1980ರ ನಂತರ ಇದೇ ಮೊದಲು!
ಭಾರತದ ಮೊದಲ ಏಕದಿನ ಪಂದ್ಯವನ್ನು ಹೊರತುಪಡಿಸಿದರೆ ಇದು ಕೇವಲ ಎರಡನೇ ಬಾರಿಗೆ ಐದು ಆಟಗಾರರು ಭಾರತೀಯ ಕ್ರಿಕೆಟ್ನ ಏಕದಿನ ತಂಡದಲ್ಲಿ ಪದಾರ್ಪಣೆ ಮಾಡಿದ್ದಾರೆ. ಇದಕ್ಕೂ ಮುನ್ನ 1980ರಲ್ಲಿ ದಿಲಿಪ್ ದೋಷಿ, ಕೀರ್ತಿ ಆಜಾದ್, ರೋಜರ್ ಬಿನ್ನಿ, ಸಂದೀಪ್ ಪಾಟೀಲ್ ಮತ್ತು ತಿರುಮಲೈ ಶ್ರೀನಿವಾಸನ್ ಒಂದೇ ಪಂದ್ಯದಲ್ಲಿ ಪದಾರ್ಪಣೆ ಮಾಡಿದ್ದರು.
ಪಡಿಕ್ಕಲ್ಗಿಲ್ಲ ಸ್ಥಾನ
ಇಷ್ಟು ಬದಲಾವಣೆ ಮಾಡಿದರೂ ಕರ್ನಾಟಕದ ಯುವ ಆಟಗಾರ ದೇವದತ್ ಪಡಿಕ್ಕಲ್ ತಂಡದಲ್ಲಿ ಅವಕಾಶವನ್ನು ಗಿಟ್ಟಿಸಿಕೊಳ್ಳುವಲ್ಲಿ ವಿಫರಾಗಿದ್ದಾರೆ. ಆರಂಭಿಕನಾಗಿ ಪೃಥ್ವಿ ಶಾ ಅವರನ್ನು ಮುಂದುವರಿಸಲು ತಂಡ ನಿರ್ಧರಿಸಿದ ಹಿನ್ನೆಲೆಯಲ್ಲಿ ದೇವತ್ ಪಡಿಕ್ಕಲ್ ಈ ಅವಕಾಶವನ್ನು ತಪ್ಪಸಿಕೊಂಡಿದ್ದಾರೆ.
ಲಂಕಾ ತಂಡದಲ್ಲೂ ಮೂರು ಬದಲಾವಣೆ
ಏಕದಿನ ಸರಣಿಯ ಮೊದಲ ಎರಡು ಪಂದ್ಯಗಳಲ್ಲ ಆಡಿದ್ದ ಆಡಿದ್ದ ಇಶಾನ್ ಕಿಶನ್, ಕೃನಾಲ್ ಪಾಂಡ್ಯ, ದೀಪಕ್ ಚಾಹರ್, ಭುವನೇಶ್ವರ್ ಕುಮಾರ್, ಯುಜುವೇಂದ್ರ ಚಾಹಲ್ ಹಾಗೂ ಕುಲ್ದೀಪ್ ಯಾದವ್ಗೆ ವಿಶ್ರಾಂತಿಯನ್ನು ನೀಡಲಾಗಿದೆ. ಮತ್ತೊಂದೆಡೆ ಶ್ರೀಲಂಕಾ ತಂಡ ಕೂಡ ಈ ಪಂದ್ಯಕ್ಕಾಗಿ ಮೂರು ಬದಲಾವಣೆ ಮಾಡಿಕೊಂಡಿದೆ. ಪ್ರವೀಣ್ ಜಯವಿಕ್ರಮ, ಅಖಿಲ ಧನಂಜಯ ಮತ್ತು ರಮೇಶ್ ಮೆಂಡಿಸ್ ಆಡುವ ಬಳಗದಲ್ಲಿ ಅವಕಾಶವನ್ನು ಸಂಪಾದಿಸಿದ್ದಾರೆ.
ಭಾರತ ಹಾಗೂ ಶ್ರೀಲಂಕಾ ಆಡುವ ಬಳಗ
ಭಾರತ ಆಡುವ ಬಳಗ:
ಪೃಥ್ವಿ ಶಾ, ಶಿಖರ್ ಧವನ್ (ನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಮನೀಶ್ ಪಾಂಡೆ, ಸೂರ್ಯಕುಮಾರ್ ಯಾದವ್, ನಿತೀಶ್ ರಾಣಾ, ಹಾರ್ದಿಕ್ ಪಾಂಡ್ಯ, ಕೃಷ್ಣಪ್ಪ ಗೌತಮ್, ರಾಹುಲ್ ಚಹರ್, ನವದೀಪ್ ಸೈನಿ, ಚೇತನ್ ಸಕರಿಯಾ.
ಶ್ರೀಲಂಕಾ ಆಡುವ ಬಳಗ:
ಅವಿಷ್ಕಾ ಫರ್ನಾಂಡೊ, ಮಿನೋಡ್ ಭನುಕಾ (ವಿಕೆಟ್ ಕೀಪರ್), ಭನುಕಾ ರಾಜಪಕ್ಸೆ, ಧನಂಜಯ ಡಿ ಸಿಲ್ವಾ, ಚರಿತ್ ಅಸಲಂಕಾ, ದಾಸುನ್ ಶನಕಾ (ನಾಯಕ), ರಮೇಶ್ ಮೆಂಡಿಸ್, ಚಮಿಕಾ ಕರುಣರತ್ನೆ, ಅಕಿಲಾ ದಾನಂಜಯ, ದುಷ್ಮಂತ ಚಮೀರಾ, ಪ್ರವೀಣ್ ಜಯವಿಕ್ರಮಾ