ಶಿಖರ್ ಧವನ್ ನಾಯಕತ್ವ ವಹಿಸಿಕೊಳ್ಳುವ ಸಾಧ್ಯತೆ
ವಿರಾಟ್ ಕೊಹ್ಲಿ, ರೋಹಿತ್ ಶರ್ಮ ಹಾಗೂ ಅಜಿಂಕ್ಯ ರಹಾನೆ ಇಂಗ್ಲೆಂಡ್ ಪ್ರವಾಸ ಕೈಗೊಂಡಿರುವ ಕಾರಣ ಶ್ರೀಲಂಕಾ ವಿರುದ್ಧದ ಸರಣಿಗಳಿಗೆ ಭಾರತದ ನಾಯಕತ್ವವನ್ನು ಶಿಖರ್ ಧವನ್ ವಹಿಸಿಕೊಳ್ಳಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.
ಯುವ ಆಟಗಾರರಿಗೆ ಉತ್ತಮ ಅವಕಾಶ
ಭಾರತ ತಂಡದ ಅನೇಕ ಖಾಯಂ ಆಟಗಾರರು ಇಂಗ್ಲೆಂಡ್ ಪ್ರವಾಸ ಕೈಗೊಂಡಿರುವ ಕಾರಣ ಶ್ರೀಲಂಕಾ ವಿರುದ್ಧದ ಸರಣಿಗಳಿಗೆ ಯುವ ಆಟಗಾರರನ್ನು ಆಯ್ಕೆ ಮಾಡಲಿದ್ದು, ಈ ಸರಣಿಗಳ ಮೂಲಕ ಆ ಯುವ ಆಟಗಾರರು ತಮ್ಮ ಪ್ರತಿಭೆಯನ್ನು ತೋರಿಸಿಕೊಳ್ಳಲು ಇದೊಂದು ಉತ್ತಮ ಅವಕಾಶವಾಗಲಿದೆ.
ರಾಹುಲ್ ದ್ರಾವಿಡ್ ನೇತೃತ್ವದಲ್ಲಿ ಆಡಲಿರುವ ಟೀಮ್ ಇಂಡಿಯಾ
ಶ್ರೀಲಂಕಾ ಪ್ರವಾಸದ ಮತ್ತೊಂದು ವಿಶೇಷತೆ ಏನೆಂದರೆ ರಾಹುಲ್ ದ್ರಾವಿಡ್. ಹೌದು ಶ್ರೀಲಂಕಾ ಪ್ರವಾಸ ಕೈಗೊಳ್ಳಲಿರುವ ಟೀಮ್ ಇಂಡಿಯಾ ತಂಡಕ್ಕೆ ರಾಹುಲ್ ದ್ರಾವಿಡ್ ಕೋಚ್ ಆಗಿ ಆಯ್ಕೆಯಾಗಿದ್ದಾರೆ. ಅಂಡರ್ 19 ಹಾಗೂ ಟೀಮ್ ಇಂಡಿಯಾ ಎ ತಂಡಗಳನ್ನು ಯಶಸ್ವಿಯಾಗಿ ಮುನ್ನಡೆಸಿರುವ ಅನುಭವವನ್ನು ಹೊಂದಿರುವ ರಾಹುಲ್ ದ್ರಾವಿಡ್ ನೇತೃತ್ವದಲ್ಲಿ ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾ ಜಯ ಸಾಧಿಸುವುದು ಪಕ್ಕಾ ಎನ್ನಲಾಗುತ್ತಿದೆ.