ವೆಂಕಟೇಶ್ ಅಯ್ಯರ್ ಮತ್ತು ಹರ್ಷಲ್ ಪಟೇಲ್?
ರವೀಂದ್ರ ಜಡೇಜಾ ಭಾರತ ಟಿ ಟ್ವೆಂಟಿ ತಂಡಕ್ಕೆ ಮರಳುತ್ತಿರುವುದರಿಂದ ವೆಂಕಟೇಶ್ ಅಯ್ಯರ್ ಅಥವಾ ಹರ್ಷಲ್ ಪಟೇಲ್ ಸ್ಥಾನ ಬಿಟ್ಟುಕೊಡಲಿದ್ದಾರಾ ಎಂಬ ಅನುಮಾನ ಮೂಡಿದೆ. ಆದರೆ ವೆಂಕಟೇಶ್ ಅಯ್ಯರ್ ಎಲ್ಲಿಯೂ ನೆಲಕಚ್ಚದೇ ಸತತವಾಗಿ ಜವಾಬ್ದಾರಿಯುತ ಪ್ರದರ್ಶನವನ್ನು ನೀಡುತ್ತಿರುವ ಕಾರಣ ಆತನ ಹಾದಿಗೆ ಅಡ್ಡಿಪಡಿಸುವ ಕಾರ್ಯಕ್ಕೆ ಯಾರೂ ಕೈ ಹಾಕುವುದಿಲ್ಲ ಎನ್ನಬಹುದು. ಅದರಲ್ಲಿಯೂ ಸೂರ್ಯಕುಮಾರ್ ಯಾದವ್ ತಂಡದಲ್ಲಿ ಇಲ್ಲದೇ ಇರುವುದರಿಂದ ವೆಂಕಟೇಶ್ ಅಯ್ಯರ್ ತಂಡದಲ್ಲಿ ಮುಂದುವರಿಯುವುದು ಖಚಿತ ಎನ್ನಬಹುದು.
ಇನ್ನು ರವೀಂದ್ರ ಜಡೇಜಾಗೆ ಸ್ಥಾನ ಬಿಟ್ಟುಕೊಡಬೇಕಾದ ಆಟಗಾರರಲ್ಲಿ ಎರಡನೇ ಆಯ್ಕೆಯಾಗಿರುವ ಹರ್ಷಲ್ ಪಟೇಲ್ ಕೂಡ ತಂಡದಲ್ಲೇ ಮುಂದುವರಿಯುವ ಸಾಧ್ಯತೆಗಳು ಹೆಚ್ಚಾಗಿವೆ. ವಿಕೆಟ್ ಕಬಳಿಸುತ್ತಾ ತಂಡಕ್ಕೆ ಅನಿವಾರ್ಯ ಸಂದರ್ಭಗಳಲ್ಲಿ ಆಸರೆಯಾಗುತ್ತಿರುವ ಹರ್ಷಲ್ ಪಟೇಲ್ ಅವರನ್ನು ರವೀಂದ್ರ ಜಡೇಜಾಗಾಗಿ ತಂಡದಿಂದ ಹೊರಗಿಡುವುದು ತೀರಾ ಅನುಮಾನ ಎನ್ನಲಾಗುತ್ತಿದೆ.
ರವಿ ಬಿಷ್ಣೋಯಿ
ಹೀಗೆ ಯುವ ಆಟಗಾರರಾದ ವೆಂಕಟೇಶ್ ಅಯ್ಯರ್ ಮತ್ತು ಹರ್ಷಲ್ ಪಟೇಲ್ ಅವರ ಅಗತ್ಯತೆ ತಂಡಕ್ಕೆ ಹೆಚ್ಚಿರುವ ಕಾರಣದಿಂದಾಗಿ ರವೀಂದ್ರ ಜಡೇಜಾಗಾಗಿ ತಂಡದ ಮತ್ತೋರ್ವ ಯುವ ಆಟಗಾರನಾದ ರವಿ ಬಿಷ್ಣೋಯಿ ಸ್ಥಾನ ಬಿಟ್ಟು ಕೊಡಬೇಕಾದ ಅನಿವಾರ್ಯತೆ ಇದೆ. ಮತ್ತೊಂದೆಡೆ ಯುಜುವೇಂದ್ರ ಚಾಹಲ್ ಕೂಡ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳಲಿದ್ದು ರವಿ ಬಿಷ್ಣೋಯಿ ತಂಡದಿಂದ ಹೊರಗುಳಿದು ರವೀಂದ್ರ ಜಡೇಜಾಗೆ ಸ್ಥಾನ ಬಿಟ್ಟುಕೊಡಲೇಬೇಕಾಗಿದೆ.
ಶ್ರೀಲಂಕಾ ವಿರುದ್ಧದ ಟಿ ಟ್ವೆಂಟಿ ಸರಣಿಗೆ ಪ್ರಕಟಿಸಲಾಗಿರುವ ಭಾರತ ತಂಡ
ಫೆಬ್ರವರಿ 24ರಿಂದ ಫೆಬ್ರವರಿ 27ರವರೆಗೆ ನಡೆಯಲಿರುವ ಭಾರತ ಮತ್ತು ಶ್ರೀಲಂಕಾ ತಂಡಗಳ ನಡುವಿನ 3ಪಂದ್ಯಗಳ ಟಿ ಟ್ವೆಂಟಿ ಸರಣಿಗೆ ಪ್ರಕಟವಾಗಿರುವ ಭಾರತ ತಂಡದಲ್ಲಿ ಸ್ಥಾನ ಪಡೆದುಕೊಂಡಿರುವ ಆಟಗಾರರ ಪಟ್ಟಿ ಇಲ್ಲಿದೆ: ರೋಹಿತ್ ಶರ್ಮಾ (ನಾಯಕ), ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ಸೂರ್ಯ ಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ವೆಂಕಟೇಶ್ ಅಯ್ಯರ್, ದೀಪಕ್ ಹೂಡಾ, ದೀಪಕ್ ಚಾಹರ್, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಸಂಜು ಸ್ಯಾಮ್ಸನ್, ರವಿ ಜಡೇಜಾ, ಯುಜುವೇಂದ್ರ ಚಾಹಲ್, ಆರ್ ಬಿಷ್ಣೋಯ್, ಕುಲದೀಪ್, ಅವೇಶ್ ಖಾನ್