ಏಷ್ಯಾಕಪ್ ಟೂರ್ನಿಯಲ್ಲಿ ಭಾರತ ಸತತ ಮೂರನೇ ದಿನ ಪಂದ್ಯವನ್ನಾಡಲು ಮೈದಾನಕ್ಕೆ ಇಳಿದಂತಾಗಿದೆ. ಭಾನುವಾರ ನಡೆದಿದ್ದ ಭಾರತ ಪಾಕಿಸ್ತಾನ ಪಂದ್ಯಕ್ಕೆ ಮಳೆ ಅಡ್ಡಿಯುಂಟು ಮಾಡಿದ ಕಾರಣ ಸೋಮವಾರ ಮೀಸಲು ದಿನವಾಗಿದ್ದ ಕಾರಣ ಕಣಕ್ಕಿಳಿದಿತ್ತು. ಆ ಪಂದ್ಯವನ್ನು ಭರ್ಜರಿಯಾಗಿ ಗೆದ್ದುಕೊಂಡ ಬಳಿಕ ಮಂಗಳವಾರ ಮತ್ತೊಂದು ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು ಎದುರಿಸಲು ಕಣಕ್ಕಿಳಿದಿದೆ.
ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಒಂದು ಬದಲಾವಣೆಯೊಂದಿಗೆ ಕಣಕ್ಕಿಳಿದಿದೆ. ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಆಡುವ ಬಳಗದಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದ ಶಾರ್ದೂಲ್ ಠಾಕೂರ್ ಈ ಪಂದ್ಯದಲ್ಲಿ ಹೊರಬಿದ್ದಿದ್ದು ಮತ್ತೋರ್ವ ಸ್ಪಿನ್ ಆಲ್ರೌಂಡರ್ಗೆ ಅವಕಾಶ ನೀಡಲಾಗಿದೆ. ಹೀಗಾಗಿ ಅಕ್ಷರ್ ಪಟೇಲ್ ಈ ಪಂದ್ಯದಲ್ಲಿ ಭಾತ ತಂಡದಲ್ಲಿ ಸ್ಥಾನವನ್ನು ಗಿಟ್ಟಿಸಿಕೊಂಡಿದ್ದಾರೆ.

ಇನ್ನು ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ ಟಾಸ್ ಗೆದ್ದುಕೊಂಡಿದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿದೆ. ಹೀಗಾಗಿ ಆತಿಥೇಯ ಶ್ರೀಲಂಕಾ ಈ ಪಂದ್ಯದಲ್ಲಿ ಮೊದಲಿಗೆ ಬೌಲಿಂಗ್ ದಾಳಿ ನಡೆಸುವ ಸವಾಲು ಪಡೆದುಕೊಂಡಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲುವು ಸಾಧಿಸಿದರೆ ಫೈನಲ್ಗೇರುವ ಸಾಧ್ಯತೆ ಬಹುತೇಕ ನಿಚ್ಚಳವಾಗಲಿದೆ.
ಟೀಮ್ ಇಂಡಿಯಾ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್
ಬೆಂಚ್: ಮೊಹಮ್ಮದ್ ಶಮಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಪ್ರಸಿದ್ಧ್ ಕೃಷ್ಣ, ತಿಲಕ್ ವರ್ಮಾ, ಶಾರ್ದೂಲ್ ಠಾಕೂರ್
ಶ್ರೀಲಂಕಾ ಆಡುವ ಬಳಗ: ಪಾತುಮ್ ನಿಸ್ಸಾಂಕ, ದಿಮುತ್ ಕರುಣಾರತ್ನ, ಕುಸಲ್ ಮೆಂಡಿಸ್ (ವಿಕೆಟ್ ಕೀಪರ್), ಸದೀರ ಸಮರವಿಕ್ರಮ, ಚರಿತ್ ಅಸಲಂಕ, ಧನಂಜಯ ಡಿ ಸಿಲ್ವ, ದಸುನ್ ಶಾನಕ (ನಾಯಕ), ದುನಿತ್ ವೆಲ್ಲಲಾಗೆ, ಮಹೇಶ್ ತೀಕ್ಷಣ, ಕಸುನ್ ರಜಿತ, ಮತೀಶ ಪತಿರಣ
ಬೆಂಚ್: ಕುಸಲ್ ಪೆರೇರಾ, ಬಿನೂರ ಫೆರ್ನಾಂಡೋ, ಪ್ರಮೋದ್ ಮದುಶನ್, ದುಶನ್ ಹೇಮಂತ