
ಇಶಾಂತ್ ಶರ್ಮಾ ಮತ್ತು ವೃದ್ಧಿಮಾನ್ ಸಹಾ ಅವಧಿ ಮುಗಿಯಿತು
ಬಿಸಿಸಿಐನ ಅಧಿಕಾರಿಯೊಬ್ಬರು ತಿಳಿಸಿರುವ ಪ್ರಕಾರ ಭಾರತ ಟೆಸ್ಟ್ ತಂಡದ ಆಟಗಾರರಾಗಿದ್ದ ಇಶಾಂತ್ ಶರ್ಮಾ ಮತ್ತು ವೃದ್ಧಿಮಾನ್ ಸಹಾ ತಮ್ಮ ಪ್ರಮುಖ ಅವಧಿಯನ್ನು ದಾಟಿದ್ದು ಸದ್ಯ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳುವಷ್ಟು ಅರ್ಹರಾಗಿಲ್ಲ ಎಂದಿದ್ದಾರೆ. ಹಾಗೂ ವಯಸ್ಸು ಕೂಡ ಈ ಇಬ್ಬರ ಪರವಾಗಿ ಇಲ್ಲದೇ ಇರುವುದು ಸದ್ಯ ಈ ಇಬ್ಬರಿಗೂ ಮತ್ತೊಂದು ಅವಕಾಶ ತಂದುಕೊಡುವಲ್ಲಿ ಹಿನ್ನಡೆಯನ್ನುಂಟುಮಾಡಿದೆ. ಅಷ್ಟೇ ಅಲ್ಲದೆ ಮಂಗಳವಾರವೇ ಬಿಸಿಸಿಐನ ಆಯ್ಕೆಗಾರರು ಈ ಇಬ್ಬರೂ ಆಟಗಾರರಿಗೂ ಈ ಕುರಿತಾಗಿ ಮಾಹಿತಿ ತಿಳಿಸಿದ್ದಾರೆ ಎನ್ನಲಾಗುತ್ತಿದೆ.

ಚೇತೇಶ್ವರ್ ಪೂಜಾರ ಮತ್ತು ಅಜಿಂಕ್ಯ ರಹಾನೆ ಕತೆಯೇನು?
ಸದ್ಯ ಆಯ್ಕೆಗಾರರು ಚೇತೇಶ್ವರ್ ಪೂಜಾರ ಹಾಗೂ ಅಜಿಂಕ್ಯ ರಹಾನೆ ಈ ಇಬ್ಬರನ್ನು ಸಹ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಿಂದ ಹೊರಗಿಡಲಿದ್ದಾರೆ. ಇಶಾಂತ್ ಶರ್ಮ ಹಾಗೂ ವೃದ್ದಿಮಾನ್ ಸಹಾ ಇಬ್ಬರಿಗೂ ಕೂಡ ಈಗಾಗಲೇ ತಂಡದ ಆಯ್ಕೆಯಲ್ಲಿ ನಿಮ್ಮನ್ನು ಪರಿಗಣಿಸುವುದಿಲ್ಲ ಎಂದು ಹೇಳಿರುವ ಆಯ್ಕೆಗಾರರು ಚೇತೇಶ್ವರ್ ಪೂಜಾರ ಮತ್ತು ಅಜಿಂಕ್ಯ ರಹಾನೆ ಮತ್ತೆ ತಂಡ ಸೇರಬೇಕೆಂದರೆ ದೇಶೀಯ ಕ್ರಿಕೆಟ್ ಟೂರ್ನಿಗಳಲ್ಲಿ ಆಡಿ ತಮ್ಮ ಸಾಮರ್ಥ್ಯವನ್ನು ತೋರಿಸಬೇಕು ಎಂಬ ಷರತ್ತನ್ನು ಹಾಕಿದ್ದಾರೆ. ಹೀಗಾಗಿ ಚೇತೇಶ್ವರ್ ಪೂಜಾರ ಮತ್ತು ಅಜಿಂಕ್ಯ ರಹಾನೆ ದೇಶೀಯ ಕ್ರಿಕೆಟ್ ಟೂರ್ನಿಗಳಲ್ಲಿ ಉತ್ತಮ ಪ್ರದರ್ಶನ ನೀಡಲೇಬೇಕಾದ ಅನಿವಾರ್ಯತೆ ಇದೆ.

ರಣಜಿ ಆಡಲು ಹಿಂದೇಟು ಹಾಕುತ್ತಿರುವ ವೃದ್ದಿಮಾನ್ ಸಹಾ
ಫೆಬ್ರವರಿ 17ರಿಂದ ಆರಂಭವಾಗಲಿರುವ ರಣಜಿ ಟ್ರೋಫಿಯಲ್ಲಿ ಪಶ್ಚಿಮ ಬಂಗಾಳದ ಪರ ಕಣಕ್ಕಿಳಿಯಬೇಕಾಗಿರುವ ವೃದ್ಧಿಮಾನ್ ಸಹಾ ಹಿಂದೇಟು ಹಾಕಿದ್ದಾರೆ. ಬಿಸಿಸಿಐ ಆಯ್ಕೆಗಾರರು ವೃದ್ದಿಮಾನ್ ಸಹಾಗೆ ಮತ್ತೆ ಅವಕಾಶಗಳು ಲಭಿಸುವುದಿಲ್ಲ ಎಂಬ ಸುದ್ದಿಯನ್ನು ತಿಳಿಸಿದ್ದೇ ವೃದ್ಧಿಮಾನ್ ಸಹಾ ಹಿಂದೆ ಸರಿಯಲು ಕಾರಣ ಎನ್ನಲಾಗುತ್ತಿದೆ. ಇನ್ನು ಈ 4 ಆಟಗಾರರಿಗೆ ಗೇಟ್ ಪಾಸ್ ನೀಡಲು ಮುಂದಾಗಿರುವ ಬಿಸಿಸಿಐನ ಆಯ್ಕೆಗಾರರು ಭಾರತ ಟೆಸ್ಟ್ ತಂಡಕ್ಕೆ ಯುವ ಆಟಗಾರರನ್ನು ಕರೆತರುವ ಯತ್ನ ಮಾಡಲಿದೆ.


Click it and Unblock the Notifications












