ಭಾರತ ತಂಡಕ್ಕೆ ಶುಭ ಸುದ್ದಿ
ಮೂರನೇ ಪಂದ್ಯದಲ್ಲಿ ಬ್ಯಾಟಿಂಗ್ನ ವೇಳೆ ಬೆನ್ನುನೋವಿಗೆ ತುತ್ತಾಗಿ ಬ್ಯಾಟಿಂಗ್ ಮುಂದುವರಿಸದೆ ಹೊರಹೋಗಿದ್ದರು ನಾಯಕ ರೋಹಿತ್ ಶರ್ಮಾ. ಹೀಗಾಗಿ ರೋಹಿತ್ ಶರ್ಮಾ ಫಿಟ್ನೆಸ್ ಬಗ್ಗೆ ಭಾರತೀಯ ಅಭಿಮಾನಿಗಳು ಸಾಕಷ್ಟು ಆತಂಕಕ್ಕೆ ಒಳಗಾಗಿದ್ದರು. ಆದರೆ ಇದೀಗ ಸಂತಸದ ಸುದ್ದಿ ಹೊರಬಿದ್ದಿದ್ದು ರೋಹಿತ್ ಶರ್ಮಾ ಸಂಪೂರ್ಣ ಫಿಟ್ಆಗಿದ್ದಾರೆ. ಹೀಗಾಘಿ ನಾಲ್ಕನೇ ಪಂದ್ಯದಲ್ಲಿ ರೋಹಿತ್ ಕಣಕ್ಕಿಳಿಯುವ ಸಾಧ್ಯತೆಯಿದೆ. ಎರಡು ಪಂದ್ಯ ಮಾತ್ರವೇ ಬಾಕಿಯಿರುವ ಕಾರಣ ಕುಲ್ದೀಪ್ ಯಾದವ್ಗೆ ಅವಕಾಶ ದೊರೆಯುವ ಸಾಧ್ಯತೆಯಿದೆ. ಆದರೆ ಹರ್ಷಲ್ ಪಟೇಲ್ ಚೇತರಿಕೆ ಕಾಣದಿರುವ ಕಾರಣ ಕಣಕ್ಕಿಳಿಯುವುದು ಅನುಮಾನವಾಗಿದೆ.
ಮೂರು ಪಂದ್ಯದಲ್ಲಿ ಬದಲಾವಣೆ ಮಾಡಿದ್ದು ಕೇವಲ ಎರಡು
ಕಳೆದ ಮೂರು ಪಂದ್ಯಗಳಲ್ಲಿ ಭಾರತ ತಂಡದಲ್ಲಿ ಕೇವಲ ಎರಡು ಬದಲಾವನೆ ಮಾತ್ರವೇ ಮಾಡಲಾಗಿದೆ. ರಣತಂತ್ರದಲ್ಲಿ ಬದಲಾವಣೆ ಮಾಡಿದ ಪರಿಣಾಮವಾಗಿ ರವಿ ಬಿಷ್ಣೋಯ್ ಆಡುವ ಬಳಗದಿಂದ ಹೊರಗುಳಿದರೆ ಗಾಯದ ಕಾರಣಕ್ಕೆ ರವೀಂದ್ರ ಜಡೇಜಾ ಸ್ಥಾನದಲ್ಲಿ ದೀಪಕ್ ಹೂಡಾ ಕಣಕ್ಕಿಳಿದಿದ್ದರು. ಆದರೆ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಲು ವಿಫಲವಾಗಿರುವ ಆವೇಶ್ ಖಾನ್ ಆಡುವ ಬಳಗದಿಂದ ಹೊರಗುಳಿಯುವ ಸಾಧ್ಯತೆಯಿದೆ.
ಸಂಭಾವ್ಯ ಆಡುವ ಬಳಗ
ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್, ರಿಷಭ್ ಪಂತ್, ದೀಪಕ್ ಹೂಡಾ, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ರವಿಚಂದ್ರನ್ ಅಶ್ವಿನ್/ಅಕ್ಸರ್ ಪಟೇಲ್, ಅರ್ಷದೀಪ್ ಸಿಂಗ್, ಹರ್ಷಲ್ ಪಟೇಲ್/ಅವೇಶ್ ಖಾನ್, ಕುಲದೀಪ್ ಯಾದವ್