
ಅರ್ಥ ಮಾಡಿಕೊಳ್ಳಲು ಸಾಧ್ಯವಿಲ್ಲ
ಸ್ಪೋನಿ ಸ್ಪೋರ್ಟ್ಸ್ ಜೊತೆಗೆ ಮಾತನಾಡಿದ ಮಾಜಿ ಕ್ರಿಕೆಟಿಗ ಸಬಾ ಕರೀಮ್ ಈ ನಿರ್ಧಾರದ ಬಗ್ಗೆ ಅಚ್ಚರಿ ವ್ಯಕ್ತಪಡಿಸಿದ್ದಾರೆ. "ಈ ನಿರ್ಧಾರವನ್ನು ಅರ್ಥ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಆಟಗಾರನ ಕಾರ್ಯದ ಒತ್ತಡವನ್ನು ಕಡಿಮೆ ಮಾಡುವ ಹಿನ್ನೆಲೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಂಡಿದ್ದು, ದೈಹಿಕವಾಗಿ ಹೆಚ್ಚು ಒತ್ತಡ ಬೀಳದಂತೆ ಮಾಡುವ ದೃಷ್ಟಿಯಿಮದ ಈ ನಿರ್ಧಾರವನ್ನು ಮಾಡಿದ್ದರೆ ಒಪ್ಪಿಕೊಳ್ಳಬಹುದು. ಯಾಕೆಂದರೆ ವೇಗದ ಬೌಲರ್ಗೆ ಗಾಯದಿಂದ ಚೇತರಿಸಿಕೊಂಡು ಪಂದ್ಯಕ್ಕೆ ಮರಳುವುದು ಸುಲಭವಿಲ್ಲ" ಎಂದಿದ್ದಾರೆ.

ಮಿಂಚಿದ ಶಾರ್ದೂಲ್ ಠಾಕೂರ್
ಇನ್ನು ದೀಪಕ್ ಚಾಹರ್ ಬದಲಿಗೆ ಇಂದಿನ ಪಮದ್ಯದಲ್ಲಿ ಶಾರ್ದೂಲ್ ಠಾಕೂರ್ ಆಡುವ ಬಳಗದಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದರು. ಈ ಪಂದ್ಯದಲ್ಲಿ ಶಾರ್ದೂಲ್ ಠಾಕೂರ್ ಕೂಡ ಬೌಲಿಂಗ್ನಲ್ಲಿ ಭರ್ಜರಿ ಪ್ರದರ್ಶನ ನೀಡಿ ಮಿಂಚಿದ್ದಾರೆ. 7 ಓವರ್ಗಳ ಬೌಲಿಂಗ್ ದಾಳಿ ನಡೆಸಿದ ಶಾರ್ದೂಲ್ ಠಾಕೂರ್ 38 ರನ್ ನೀಡಿ 3 ವಿಕೆಟ್ ಪಡೆದು ಮಿಂಚಿದ್ದಾರೆ.

ಸರಣಿ ವಶಕ್ಕೆ ಪಡೆದ ಭಾರತ
ಜಿಂಬಾಬ್ವೆ ವಿರುದ್ಧದ ಎರಡನೇ ಪಂದ್ಯದಲ್ಲಿಯೂ ಭಾರತ ತಂಡ ಉತ್ತಮ ಪ್ರದರ್ಶನ ನೀಡಿದ್ದು ಭರ್ಜರಿ ಗೆಲುವು ಸಾಧಿಸಿದೆ. ಜಿಂಬಾಬ್ವೆ ತಂಡ ನೀಡಿದ 162 ರನ್ಗಳ ಗುರಿಯನ್ನು ಬೆನ್ನಟ್ಟಿದ ಭಾರತ ತಂಡ ಐದು ವಿಕೆಟ್ ಕಳೆದುಕೊಂಡು ಈ ಸಾಧನೆ ಮಾಡುವಲ್ಲಿ ಯಶಸ್ವಿಯಾಗಿದೆ. ನಾಯಕ ಕೆಎಲ್ ರಾಹುಲ್ ಕೇವಲ ಒಂದು ರನ್ಗಳಿಗೆ ಔಟಾದರೂ ಶಿಖರ್ ಧವನ್, ಶುಬ್ಮನ್ ಗಿಲ್, ಸಂಜು ಸ್ಯಾಮ್ಸನ್ ಅದ್ಭುತ ಪ್ರದರ್ಶನದಿಂದಾಗಿ ಭಾರತ ವಿಕೆಟ್ಗಳ ಅಂತರದಿಂದ ಸುಲಭವಾಗಿ ಪಂದ್ಯವನ್ನು ಗೆದ್ದುಕೊಂಡಿದೆ. ಇದರ ಪರಿಣಾಮವಾಗಿ ಭಾರತ ಮೂರು ಪಂದ್ಯಗಳ ಏಕದಿನ ಸರಣಿಯನ್ನು ತನ್ನ ವಶಕ್ಕೆ ಪಡೆದುಕೊಂಡಿದೆ.

ಆಡುವ ಬಳಗ ಹೀಗಿದೆ
ಜಿಂಬಾಬ್ವೆ: ಇನೋಸೆಂಟ್ ಕೈಯಾ, ತಕುದ್ಜ್ವಾನಾಶೆ ಕೈಟಾನೊ, ವೆಸ್ಲಿ ಮಾಧೆವೆರೆ, ಸೀನ್ ವಿಲಿಯಮ್ಸ್, ಸಿಕಂದರ್ ರಜಾ, ರೆಗಿಸ್ ಚಕಬ್ವಾ (ನಾಯಕ & ವಿಕೆಟ್ ಕೀಪರ್), ರಿಯಾನ್ ಬರ್ಲ್, ಲ್ಯೂಕ್ ಜೊಂಗ್ವೆ, ಬ್ರಾಡ್ ಇವಾನ್ಸ್, ವಿಕ್ಟರ್ ನ್ಯಾಯುಚಿ, ತನಕಾ ಚಿವಂಗಾ
ಬೆಂಚ್: ಡೊನಾಲ್ಡ್ ತಿರಿಪಾನೊ, ಮಿಲ್ಟನ್ ಶುಂಬಾ, ಟೋನಿ ಮುನ್ಯೊಂಗಾ, ಕ್ಲೈವ್ ಮದಂಡೆ, ಜಾನ್ ಮಸಾರ, ತಡಿವಾನಾಶೆ ಮರುಮನಿ, ರಿಚರ್ಡ್ ನಾಗರವ
ಭಾರತ ತಂಡ: ಶಿಖರ್ ಧವನ್, ಶುಭಮನ್ ಗಿಲ್, ಇಶಾನ್ ಕಿಶನ್, ಕೆಎಲ್ ರಾಹುಲ್ (ನಾಯಕ), ದೀಪಕ್ ಹೂಡಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್
ಬೆಂಚ್: ಶಹಬಾಜ್ ಅಹಮದ್, ಆವೇಶ್ ಖಾನ್, ಋತುರಾಜ್ ಗಾಯಕ್ವಾಡ್, ರಾಹುಲ್ ತ್ರಿಪಾಠಿ, ದೀಪಕ್ ಚಹಾರ್


Click it and Unblock the Notifications












