ಅಭಿಮಾನಿಗೆ ಬಿತ್ತು ದಂಡದ ಬರೆ?
ಹೀಗೆ ಮೈದಾನಕ್ಕೆ ನುಗ್ಗಿದ ಅಭಿಮಾನಿಗೆ ಈಗ ಭಾರೀ ದಂಡದ ಬರೆ ಬಿದ್ದಿದೆ ಎಂದು ವರದಿಯಾಗಿದೆ. ರೋಹಿತ್ ಶರ್ಮಾ ಅವರನ್ನು ಭೇಟಿಯಾಗುವ ದೃಷ್ಟಿಯಿಂದ ಮೈದಾನಕ್ಕೆ ನುಗ್ಗಿದ ಅಭಿಮಾನಿಗೆ ಮೈದಾನಕ್ಕೆ ನುಗ್ಗಿದ ಹಿನ್ನೆಲೆಯಲ್ಲಿ 6.5 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ ಎಂದು ವರದಿಯಾಗಿದೆ.
ಮೆಚ್ಚುಗೆಗೆ ಪಾತ್ರವಾದ ರೋಹಿತ್ ನಡೆ
ತನ್ನ ನೆಚ್ಚಿನ ಕ್ರಿಕೆಟ್ ಹೀರೋನನ್ನು ಹತ್ತಿರದಿಂದ ನೋಡಬೇಕು ಎಂದು ಕ್ರಿಕೆಟ್ ಅಭಿಮಾನಿ ಅಂಗಳಕ್ಕೆ ನುಗ್ಗಿದ್ದು ಪಂದ್ಯದ ಸಂದರ್ಭದಲ್ಲಿ ಗೊಂದಲಕ್ಕೂ ಕಾರಣವಾಗಿತ್ತು. ಆದರೆ ಯುವಕ ರೋಹಿತ್ ಶರ್ಮಾ ಅವರ ಸನಿಹಕ್ಕೆ ಬರುತ್ತಿದ್ದಂತೆಯೇ ಭಾವುಕನಾಗಿ ಕಣ್ಣುಗಳು ತುಂಬಿಕೊಂಡಿದ್ದು ಕಂಡುಬಂದಿದೆ. ಈ ಸಂದರ್ಭದಲ್ಲಿ ಭದ್ರತಾ ಸಿಬ್ಬಂದಿಗಳು ಯುವನನ್ನು ಹಿಡಿದುಕೊಂಡು ಮೈದಾದಾಚೆಗೆ ಕರೆದುಕೊಂಡು ಹೋಗುವ ಪ್ರಯತ್ನ ನಡೆಸಿದರೂ ನಾಯಕ ರೋಹಿತ್ ಶರ್ಮಾ ಆ ಅಭಿಮಾನಿಯನ್ನು ಸಂತೈಸಿ ಬೆನ್ನು ತಟ್ಟಿ ಕೆಲ ಮಾತುಗಳನ್ನು ಮಾಡಿದ್ದಾರೆ. ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅಭಿಮಾನಿಯೊಂದಿಗೆ ಈ ರೀತಿ ವರ್ತಿಸಿದ್ದು ಕ್ರಿಕೆಟ್ ಅಭಿಮಾನಿಗಳ ಹೃದಯ ಗೆದ್ದಿದೆ.

ಸೆಮಿಫೈನಲ್ಗೆ ಲಗ್ಗೆಯಿಟ್ಟ ಭಾರತ
ಟಿ20 ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ನೀಡುತ್ತಿರುವ ಪ್ರದರ್ಶನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಹರ್ಷವನ್ನುಂಟು ಮಾಡಿದೆ. ಈ ಬಾರಿಯ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನಿಡುತ್ತಿರುವ ರೋಹಿತ್ ಶರ್ಮಾ ಪಡೆ ಈಗಾಗಲೇ ಸೆಮಿಫೈನಲ್ಗೆ ಪ್ರವೇಶ ಪಡೆಯುವಲ್ಲಿ ಯಶಸ್ವಿಯಾಗಿದೆ. ಸೂಪರ್ 12 ಹಂತದಲ್ಲಿ ಆಡಿದ 5 ಪಂದ್ಯಗಳ ಪೈಕಿ 4 ಗೆಲುವು ಸಾಧಿಸಿರುವ ಭಾರತ 8 ಅಂಕಗಳೊಂದಿಗೆ ಅಗ್ರಸ್ಥಾಇಯಾಗಿ ಸೆಮಿಫೈನಲ್ಗೆ ಪ್ರವೇಶಿಸಿದ್ದು ಗುರುವಾರ ಇಂಗ್ಲೆಂಡ್ ವಿರುದ್ಧ ಸೆಮಿಫೈನಲ್ನಲ್ಲಿ ಸೆಣೆಸಾಡಲಿದೆ.
ಟೀಮ್ ಇಂಡಿಯಾ ಸ್ಕ್ವಾಡ್ ಹೀಗಿದೆ: ಕೆಎಲ್ ರಾಹುಲ್, ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರಿಷಬ್ ಪಂತ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ಯುಜುವೇಂದ್ರ ಚಹಾಲ್, ಹರ್ಷಲ್ ಪಟೇಲ್, ದೀಪಕ್ ಹೂಡಾ, ದಿನೇಶ್ ಕಾರ್ತಿಕ್


Click it and Unblock the Notifications












