ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಮತ್ತು ಬಿಸಿಸಿಐ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಅವರು ಶ್ರೀಲಂಕಾದ ಕ್ಯಾಂಡಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ 2023ರ ಐಸಿಸಿ ಏಕದಿನ ವಿಶ್ವಕಪ್ ಪಂದ್ಯಾವಳಿಗೆ 15 ಸದಸ್ಯರ ಭಾರತ ತಂಡವನ್ನು ಪ್ರಕಟಿಸಿದರು.
ಭಾರತದ 17 ಸದಸ್ಯರ ಏಷ್ಯಾಕಪ್ ತಂಡದ ಇಬ್ಬರು ಸದಸ್ಯರಾದ ಪ್ರಸಿದ್ಧ್ ಕೃಷ್ಣ ಮತ್ತು ತಿಲಕ್ ವರ್ಮಾ ಹಾಗೂ ಮೀಸಲು ಆಟಗಾರ ಸಂಜು ಸ್ಯಾಮ್ಸನ್ ಅವರನ್ನು ಭಾರತದ ಏಕದಿನ ವಿಶ್ವಕಪ್ ತಂಡದಿಂದ ಕೈಬಿಡಲಾಗಿದೆ.
2011ರಲ್ಲಿ ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ಭಾರತ ತಂಡ ಕೊನೆಯ ಬಾರಿಗೆ ವಿಶ್ವಕಪ್ ಟ್ರೋಫಿ ಗೆದ್ದಿತ್ತು. ಇದೀಗ ಮತ್ತೆ 2011ರ ಇತಿಹಾಸವನ್ನು ಪುನರಾವರ್ತಿಸಲು ಉಳಿದ 15 ಏಷ್ಯಾ ಕಪ್ ತಂಡದ ಸದಸ್ಯರನ್ನು ಆಯ್ಕೆ ಮಾಡಲಾಗಿದೆ.

ರೋಹಿತ್ ಶರ್ಮಾ ಅವರು ವಿಶ್ವಕಪ್ನಲ್ಲಿ ಭಾರತ ತಂಡವನ್ನು ಮುನ್ನಡೆಸಲಿದ್ದು, ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ನೊಂದಿಗೆ ಉತ್ತಮ ಪ್ರದರ್ಶನ ನೀಡುತ್ತಿರುವ ಇಶಾನ್ ಕಿಶನ್ ತಂಡದಲ್ಲಿ ಸ್ಥಾನ ಪಡೆಯಲು ಯಶಸ್ವಿಯಾಗಿದ್ದಾರೆ.
ನಾಯಕ ರೋಹಿತ್ ಶರ್ಮಾ ಜೊತೆಗೆ ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ ಮತ್ತು ಸೂರ್ಯಕುಮಾರ್ ಯಾದವ್ ಐಸಿಸಿ ಪಂದ್ಯಾವಳಿಯಲ್ಲಿ ಭಾರತದ ಬ್ಯಾಟಿಂಗ್ ವಿಭಾಗವನ್ನು ಮುನ್ನಡೆಸಲಿದ್ದಾರೆ. ಕೆಎಲ್ ರಾಹುಲ್ ಮತ್ತು ಇಶಾನ್ ಕಿಶನ್ ವಿಕೆಟ್ ಕೀಪರ್ ಜವಾಬ್ದಾರಿ ತೆಗೆದುಕೊಳ್ಳಲಿದ್ದಾರೆ.
ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್ ಮತ್ತು ಶಾರ್ದೂಲ್ ಠಾಕೂರ್ ಅವರನ್ನು ಆಯ್ಕೆ ಸಮಿತಿ ಮತ್ತು ತಂಡದ ಮ್ಯಾನೇಜ್ಮೆಂಟ್ ಬ್ಯಾಟಿಂಗ್ ಡೆಪ್ತ್ಗೆ ಆದ್ಯತೆ ನೀಡಿದ್ದರಿಂದ ಆಲ್ರೌಂಡರ್ಗಳಾಗಿ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.
ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್ ವೇಗದ ಬೌಲಿಂಗ್ ದಾಳಿಯನ್ನು ಮುನ್ನಡೆಸಲಿದ್ದು, ಸ್ಪಿನ್ನರ್ ಕುಲದೀಪ್ ಯಾದವ್ ಕೂಡ ಏಕೈಕ ಸ್ಪೆಷಲಿಸ್ಟ್ ಸ್ಪಿನ್ನರ್ ಆಗಿದ್ದಾರೆ.

ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ (ಉಪನಾಯಕ), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್.
1) ರೋಹಿತ್ ಶರ್ಮಾ - ಮುಂಬೈ (ಮಹಾರಾಷ್ಟ್ರ)
2) ಹಾರ್ದಿಕ್ ಪಾಂಡ್ಯ - ಬರೋಡಾ (ಗುಜರಾತ್)
3) ಶುಭ್ಮನ್ ಗಿಲ್ - ಪಂಜಾಬ್
4) ವಿರಾಟ್ ಕೊಹ್ಲಿ - ದೆಹಲಿ
5) ಶ್ರೇಯಸ್ ಅಯ್ಯರ್- ಮುಂಬೈ (ಮಹಾರಾಷ್ಟ್ರ)
6) ಸೂರ್ಯಕುಮಾರ್ ಯಾದವ್ - ಮುಂಬೈ (ಮಹಾರಾಷ್ಟ್ರ)
7) ಕೆಎಲ್ ರಾಹುಲ್ (ವಿಕೆಟ್ ಕೀಪರ್) - ಮಂಗಳೂರು (ಕರ್ನಾಟಕ)
8) ಇಶಾನ್ ಕಿಶನ್ (ವಿಕೆಟ್ ಕೀಪರ್) - ಜಾರ್ಖಂಡ್
9) ರವೀಂದ್ರ ಜಡೇಜಾ - ರಾಜ್ಕೋಟ್ (ಗುಜರಾತ್)
10) ಶಾರ್ದೂಲ್ ಠಾಕೂರ್ - ಮುಂಬೈ (ಮಹಾರಾಷ್ಟ್ರ)
11) ಅಕ್ಷರ್ ಪಟೇಲ್ - ರಾಜ್ಕೋಟ್ (ಗುಜರಾತ್)
12) ಕುಲದೀಪ್ ಯಾದವ್ - ಉತ್ತರಪ್ರದೇಶ
13) ಜಸ್ಪ್ರೀತ್ ಬುಮ್ರಾ - ಅಹಮದಾಬಾದ್ (ಗುಜರಾತ್)
14) ಮೊಹಮ್ಮದ್ ಶಮಿ - ಉತ್ತರಪ್ರದೇಶ
15) ಮೊಹಮ್ಮದ್ ಸಿರಾಜ್ - ಹೈದರಾಬಾದ್ - (ತೆಲಂಗಾಣ)