ಬುಧವಾರ, ಆಗಸ್ಟ್ 23ರಂದು ಚಂದ್ರನ ಮೇಲೆ ಭಾರತದ ಐತಿಹಾಸಿಕ ಚಂದ್ರಯಾನ 3ರ ಯಶಸ್ವಿ ಸಾಫ್ಟ್ ಲ್ಯಾಂಡಿಂಗ್ ಅನ್ನು ವೀಕ್ಷಿಸಲು ಭಾರತ ಕ್ರಿಕೆಟ್ ತಂಡವು ಐರ್ಲೆಂಡ್ನ ಡಬ್ಲಿನ್ನ ಕ್ರಿಕೆಟ್ ಮೈದಾನದಲ್ಲಿ ಟಿವಿಗೆ ಅಂಟಿಕೊಂಡಿತ್ತು.
ಭಾರತ ತಂಡದ ನಾಯಕ ಜಸ್ಪ್ರೀತ್ ಬುಮ್ರಾ, ಸಹ ಆಟಗಾರರು ಮತ್ತು ಭಾರತೀಯ ಕ್ರಿಕೆಟ್ ತಂಡದ ಸಹಾಯಕ ಸಿಬ್ಬಂದಿಗಳು ಐರ್ಲೆಂಡ್ ವಿರುದ್ಧದ 3ನೇ ಮತ್ತು ಅಂತಿಮ ಟಿ20 ಪಂದ್ಯಕ್ಕೂ ಮುನ್ನ ಯಶಸ್ವಿ ಚಂದ್ರಯಾನ 3 ಲ್ಯಾಂಡಿಂಗ್ ವೀಕ್ಷಿಸಿ ಸಂಭ್ರಮಿಸಿದರು.

ಬುಧವಾರದಂದು ಐತಿಹಾಸಿಕ ಚಂದ್ರಯಾನ 3 ಲ್ಯಾಂಡಿಂಗ್ನ ನಂತರ 140 ಕೋಟಿಗೂ ಹೆಚ್ಚು ಭಾರತೀಯರೊಂದಿಗೆ ಭಾರತೀಯ ಕ್ರಿಕೆಟ್ ತಂಡವು ಉತ್ಸಾಹಭರಿತವಾಗಿ ಆಚರಣೆ ಮಾಡಿತು. ಭಾರತದ ನಿಯಮಿತ ನಾಯಕ ರೋಹಿತ್ ಶರ್ಮಾ ಮತ್ತು ಇಶಾನ್ ಕಿಶನ್ ಕೂಡ ಭಾರತದಲ್ಲೇ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡರು.
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ಯು ಹಂಚಿಕೊಂಡ ವಿಡಿಯೋದಲ್ಲಿ, ಚಂದ್ರಯಾನ 3 ರೋವರ್ ಚಂದ್ರನ ದಕ್ಷಿಣ ಧ್ರುವದಲ್ಲಿ ಯಶಸ್ವಿ ಸಾಫ್ಟ್ ಲ್ಯಾಂಡಿಂಗ್ ಮಾಡಿದ್ದರಿಂದ, ಭಾರತೀಯ ಆಟಗಾರರು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಪ್ರಯತ್ನಗಳನ್ನು ಶ್ಲಾಘಿಸುವುದನ್ನು ನೋಡಬಹುದು.
ಭಾರತವು ಚಂದ್ರನ ನಿಗೂಢವಾದ ದಕ್ಷಿಣ ಧ್ರುವದಲ್ಲಿ ಚಂದ್ರಯಾನ 3 ಅನ್ನು ಸಾಫ್ಟ್ ಲ್ಯಾಂಡಿಂಗ್ ಮಾಡುವ ಮೂಲಕ, ಈ ಸಾಧನೆ ಮಾಡಿದ ವಿಶ್ವದ ಮೊದಲ ರಾಷ್ಟ್ರವಾಯಿತು. ಇದು ಭಾರತವನ್ನು ಚಂದ್ರನ ಪರಿಶೋಧನೆಯ ಮುಂಚೂಣಿಗೆ ತರುವ ಪ್ರವರ್ತಕ ಸಾಧನೆಯಾಗಿದೆ.
ಯುನೈಟೆಡ್ ಸ್ಟೇಟ್ಸ್, ರಷ್ಯಾ ಮತ್ತು ಚೀನಾ ನಂತರ ಚಂದ್ರನ ಮೇಲೆ ರೋವರ್ ಅನ್ನು ಯಶಸ್ವಿಯಾಗಿ ಇಳಿಸಿದ ವಿಶ್ವದ ನಾಲ್ಕನೇ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ.
ಇನ್ನು ರೋಹಿತ್ ಶರ್ಮಾ ಅವರು ಇಸ್ರೋವನ್ನು ಅಭಿನಂದಿಸಿದ್ದು, ಇದು ದೇಶದ ಪ್ರತಿಯೊಬ್ಬ ನಾಗರಿಕರಿಗೂ ಹೆಮ್ಮೆಯ ಕ್ಷಣವಾಗಿದೆ ಎಂದು ಹೇಳಿದರು. ಇದೇ ವೇಳೆ ಮಾಜಿ ನಾಯಕ ವಿರಾಟ್ ಕೊಹ್ಲಿ ಕೂಡ ಟ್ವಿಟರ್ನ ಎಕ್ಸ್ನಲ್ಲಿ ಪೋಸ್ಟ್ ಮಾಡುವ ಮೂಲಕ ತಮ್ಮ ಸಂತೋಷವನ್ನು ವ್ಯಕ್ತಪಡಿಸಿದರು.
ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ಚಂದ್ರಯಾನ 3 ಸಾಧನೆಯ ಅಗಾಧತೆಯನ್ನು ಎತ್ತಿ ತೋರಿಸಿದರು ಮತ್ತು ಐತಿಹಾಸಿಕ ಕ್ಷಣವು ಮುಂದಿನ ಪೀಳಿಗೆಗೆ ಪ್ರತಿಧ್ವನಿಸುತ್ತದೆ ಎಂದು ತಿಳಿಸಿದ್ದಾರೆ.
ಪ್ರಮುಖವಾಗಿ, ದಕ್ಷಿಣ ಆಫ್ರಿಕಾದ ಜೋಹಾನ್ಸ್ಬರ್ಗ್ನಿಂದ ಚಂದ್ರಯಾನ 3ರ ಲ್ಯಾಂಡಿಂಗ್ ವೀಕ್ಷಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಐತಿಹಾಸಿಕ ಚಂದ್ರನ ಲ್ಯಾಂಡಿಂಗ್ ಅನ್ನು ಶ್ಲಾಘಿಸಿದರು ಮತ್ತು ವಿಜ್ಞಾನಿಗಳ ಕಠಿಣ ಪರಿಶ್ರಮವನ್ನು ಶ್ಲಾಘಿಸಿದರು.
"ಈ ಹಿಂದೆ ಯಾವುದೇ ದೇಶವು ಚಂದ್ರನ ದಕ್ಷಿಣ ಧ್ರುವವನ್ನು ತಲುಪಿಲ್ಲ. ನಮ್ಮ ವಿಜ್ಞಾನಿಗಳ ಕಠಿಣ ಪರಿಶ್ರಮದಿಂದ ನಾವು ಅಲ್ಲಿಗೆ ತಲುಪಿದ್ದೇವೆ," ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಬಾಹ್ಯಾಕಾಶ ನೌಕೆ ಇಳಿಯುತ್ತಿದ್ದಂತೆ ಇಸ್ರೋ ವಿಜ್ಞಾನಿಗಳು ಮತ್ತು ಅಧಿಕಾರಿಗಳು ಚಪ್ಪಾಳೆ ತಟ್ಟಿ, ಒಬ್ಬರಿಗೊಬ್ಬರು ಅಪ್ಪಿಕೊಂಡು ಸಂಭ್ರಮಿಸಿದರು. ಸರ್ಕಾರವು ಈಗ ಖಾಸಗಿ ಬಾಹ್ಯಾಕಾಶ ಉಡಾವಣೆಗಳು ಮತ್ತು ಸಂಬಂಧಿತ ಉಪಗ್ರಹ ಆಧಾರಿತ ವ್ಯವಹಾರಗಳಲ್ಲಿ ಹೂಡಿಕೆಯನ್ನು ಉತ್ತೇಜಿಸಲು ಎದುರು ನೋಡುತ್ತಿದೆ.
ಚಂದ್ರಯಾನ-3 ಬಾಹ್ಯಾಕಾಶ ನೌಕೆಯು ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿಯುತ್ತಿದ್ದಂತೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) ಮುಖ್ಯಸ್ಥ ಎಸ್ ಸೋಮನಾಥ್ ಅವರು 'ಭಾರತವು ಚಂದ್ರನ ಮೇಲಿದೆ' ಎಂದು ಹೇಳಿದರು.
ಇದು ಚಂದ್ರನ ಮೇಲೆ ಬಾಹ್ಯಾಕಾಶ ನೌಕೆಯನ್ನು ಇಳಿಸಲು ಭಾರತದ ಎರಡನೇ ಪ್ರಯತ್ನವಾಗಿದೆ. ಇದಕ್ಕೂ ಮುನ್ನ ರಷ್ಯಾದ ಲೂನಾ -25 ಮಿಷನ್ ವಿಫಲವಾದ ಐದು ದಿನಗಳ ನಂತರ ಭಾರತ ಯಶಸ್ವಿಯಾಗಿ ಇಳಿಸಿದೆ.