
ದ್ರಾವಿಡ್ ಆಡುತ್ತಿದ್ದ ಸಮಯದಲ್ಲಿ ಟೀಮ್ ಇಂಡಿಯಾ ಸೋಲಬಾರದು ಎಂಬ ಉದ್ದೇಶದಿಂದ ಕಣಕ್ಕಿಳಿಯುತ್ತಿತ್ತು
ರಾಹುಲ್ ದ್ರಾವಿಡ್ ಆಟಗಾರನಾಗಿ ಕಣಕ್ಕಿಳಿಯುತ್ತಿದ್ದ ಸಂದರ್ಭದಲ್ಲಿ ಟೀಮ್ ಇಂಡಿಯಾ ಸೋಲಬಾರದು ಎಂಬ ಉದ್ದೇಶದಿಂದ ಕಣಕ್ಕಿಳಿಯುತ್ತಿತ್ತು. ಆದರೆ ವಿರಾಟ್ ಕೊಹ್ಲಿ ಅವರ ಪ್ರಮುಖ ಉದ್ದೇಶ ಗೆಲ್ಲಬೇಕು ಎಂಬುದು ಹೀಗಾಗಿಯೇ ಅವರು 5 ಬೌಲರ್ಗಳುಳ್ಳ ತಂಡದೊಂದಿಗೆ ವಿದೇಶಿ ನೆಲದಲ್ಲಿ ಕಣಕ್ಕಿಳಿಯುತ್ತಾರೆ ಎಂದು ರಾಜ್ ಕುಮಾರ್ ಶರ್ಮಾ ಹೇಳಿಕೆ ನೀಡಿದ್ದಾರೆ.

ಅಂತಿಮವಾಗಿ ಕೊಹ್ಲಿಯೇ ತಂಡವನ್ನು ಮುನ್ನಡೆಸಬೇಕು
ಇನ್ನು ರಾಹುಲ್ ದ್ರಾವಿಡ್ ವಿದೇಶಿ ನೆಲಗಳಲ್ಲಿ ಆಟಗಾರನಾಗಿ ಸಾಕಷ್ಟು ಅನುಭವವನ್ನು ಹೊಂದಿದ್ದು, ಪ್ರಸ್ತುತ ಕೋಚ್ ಆಗಿ ತಂಡದ ಆಟಗಾರರಿಗೆ ಸಲಹೆ ಮತ್ತು ಕಣಕ್ಕಿಳಿಯಲು ಉತ್ತೇಜನವನ್ನು ತುಂಬಿ ಪ್ರೇರೇಪಿಸಬಹುದು. ಆದರೆ ಅಂತಿಮವಾಗಿ ಮೈದಾನದಲ್ಲಿ ತಂಡವನ್ನು ಮುನ್ನಡೆಸುವುದು ನಾಯಕ ಮಾತ್ರ ಎಂದು ರಾಜ್ ಕುಮಾರ್ ಶರ್ಮಾ ಹೇಳಿಕೆ ನೀಡಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ಧ ಗೆಲ್ಲುವ ವಿಶ್ವಾಸದಲ್ಲಿ ಟೀಂ ಇಂಡಿಯಾ
ಇನ್ನು ದಕ್ಷಿಣ ಆಫ್ರಿಕಾ ಪ್ರವಾಸವನ್ನು ಕೈಗೊಂಡು ಮೊದಲಿಗೆ ಹರಿಣಗಳ ವಿರುದ್ಧ 3 ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಕಣಕ್ಕಿಳಿಯಲಿರುವ ಟೀಮ್ ಇಂಡಿಯಾ ಹರಿಣಗಳ ನೆಲದಲ್ಲಿ ತನ್ನ ಚೊಚ್ಚಲ ಟೆಸ್ಟ್ ಸರಣಿ ಜಯವನ್ನು ಸಾಧಿಸುವ ಯೋಜನೆಯಲ್ಲಿದೆ. ಕಳೆದ 12 ತಿಂಗಳಿನಲ್ಲಿ ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ನೆಲದಲ್ಲಿ ಟೆಸ್ಟ್ ಸರಣಿಯನ್ನು ಗೆದ್ದು ಬೀಗಿರುವ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾದಲ್ಲಿಯೂ ಕೂಡ ಜಯವನ್ನು ಸಾಧಿಸಿ ತನ್ನ ಕೆಟ್ಟ ದಾಖಲೆಯನ್ನು ಅಳಿಸಿ ಹಾಕುವ ಸಾಧ್ಯತೆಗಳು ಹೆಚ್ಚಿವೆ.


Click it and Unblock the Notifications
