Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IND vs SL: ಶ್ರೀಲಂಕಾ ಪ್ರವಾಸಕ್ಕೆ ಹೊರಟ ಭಾರತ ತಂಡ; ಹೊಸ ಬ್ಯಾಟಿಂಗ್‌ ಕೋಚ್‌ ಜೊತೆ‌ ಆಟಗಾರರು!

ಜುಲೈಬ 22 ಸೋಮವಾರ, ಶ್ರೀಲಂಕಾ ಪ್ರವಾಸಕ್ಕೆ ಭಾರತ ತಂಡ ತೆರಳಿದೆ. ಜುಲೈ 27 ರಿಂದ ಪ್ರಾರಂಭವಾಗುವ ಈ ಪ್ರವಾಸದಲ್ಲಿ ಟೀಮ್‌ ಇಂಡಿಯಾ ಹೊಸ ಕೋಚ್ ಗೌತಮ್ ಗಂಭೀರ್ ಮತ್ತು ಅವರ ಕೋಚಿಂಗ್ ಸ್ಟಾಫ್ ಜೊತೆ ಕಾಣಿಸಿಕೊಳ್ಳಲಿದೆ.

ಜುಲೈ 27 ರಿಂದ ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಶ್ರೀಲಂಕಾ ವಿರುದ್ಧ ಭಾರತ ಮೊದಲ ಮೂರು ಟಿ20 ಪಂದ್ಯಗಳ ಸರಣಿಯನ್ನು ಆಡಲಿದೆ. ಇದಾದ ನಂತರ ರೋಹಿತ್ ಶರ್ಮಾ ನೇತೃತ್ವದಲ್ಲಿ ಟೀಮ್‌ ಇಂಡಿಯಾ ಆಗಸ್ಟ್ 2 ರಿಂದ 3 ಏಕದಿನ ಪಂದ್ಯಗಳ ಸರಣಿಯನ್ನು ಆಡಲಿದೆ.

Indian team left for Sri Lanka tour

ಶ್ರೀಲಂಕಾಕ್ಕೆ ಹೊರಡುವ ಮುನ್ನ ಮುಂಬೈ ಏರ್‌ಪೋರ್ಟ್‌ನಲ್ಲಿ ಟೀಮ್ ಇಂಡಿಯಾ ಆಟಗಾರರು ಕಾಣಿಸಿಕೊಂಡಿದ್ದಾರೆ. ಈ ಸಾಮಾಜಿಕ ಜಾಲತಾಣದಲ್ಲಿ ಟೀಮ್‌ ಇಂಡಿಯಾ ಹೊಸ ಬ್ಯಾಟಿಂಗ್‌ ಕೋಚ್‌ ಕಾಣಿಸಿಕೊಂಡಿರುವ ವೈರಲ್‌ ಆಗಿದೆ.

ಈ ವೇಳೆ ಆಟಗಾರರು ಕೂಡ ಬಸ್ಸಿನಲ್ಲಿ ಕುಳಿತಿರುವುದು ಕಂಡು ಬಂದಿದೆ. ನಾಯಕ ಸೂರ್ಯಕುಮಾರ್ ಯಾದವ್, ಉಪನಾಯಕ ಶುಭಮನ್ ಗಿಲ್ ಮತ್ತು ಹಾರ್ದಿಕ್ ಪಾಂಡ್ಯ ಕೂಡ ವಿಡಿಯೋದಲ್ಲಿ ಕಾಣಿಸಿಕೊಂಡಿದ್ದಾರೆ.

ಹೊಸ ಬ್ಯಾಟಿಂಗ್ ಕೋಚ್

ಹಾರ್ದಿಕ್ ಪಾಂಡ್ಯ ಅವರು ಭಾರತ ತಂಡದ ಹೊಸ ಬ್ಯಾಟಿಂಗ್ ಕೋಚ್ ಅಭಿಷೇಕ್ ನಾಯರ್ ಅವರೊಂದಿಗೆ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿರುವುದು ವಿಶೇಷವಾಗಿತ್ತು. ಇಬ್ಬರೂ ಒಬ್ಬರನ್ನೊಬ್ಬರು ತಬ್ಬಿಕೊಳ್ಳುವ ಮೂಲಕ ಶುಭ ಕೋರಿದ್ದಾರೆ. ಈ ಮೂಲಕ ಟೀಮ್‌ ಇಂಡಿಯಾ ನೂತನ ಬ್ಯಾಟಿಂಗ್‌ ಕೋಚ್‌ ಯಾರು ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ.

ಟಿ20 ಅಂತರಾಷ್ಟ್ರೀಯ ಕ್ರಿಕೆಟ್‌ನಿಂದ ರೋಹಿತ್ ಶರ್ಮಾ ನಿವೃತ್ತಿಯ ನಂತರ ಹಾರ್ದಿಕ್ ಅವರಿಗೆ ನಾಯಕತ್ವ ಸಿಗುವ ನಿರೀಕ್ಷೆ ಇತ್ತು. ಆದರೆ ಕೋಚ್ ಗೌತಮ್ ಗಂಭೀರ್ ಮತ್ತು ಆಯ್ಕೆದಾರರು ಸೂರ್ಯಕುಮಾರ್ ಯಾದವ್ ಅವರನ್ನು ತಂಡದ ನಾಯಕರನ್ನಾಗಿ ಮಾಡಿದ್ದಾರೆ.

ಗಂಭೀರ್‌ ಮೊದಲ ಪ್ರವಾಸ

ಕೋಚ್ ಗೌತಮ್ ಗಂಭೀರ್ ಅವರು ತಮ್ಮ ಮೊದಲ ಪ್ರವಾಸದಲ್ಲಿರುವ ಭಾರತ ತಂಡದ ಹೊಸ ಕೋಚ್ ಆಗಿದ್ದಾರೆ . ಗೌತಮ್ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಅದಕ್ಕೂ ಮುನ್ನ ಸುದ್ದಿಗೋಷ್ಠಿಯಲ್ಲಿ ಗಂಭೀರ್ ಭಾಗವಹಿಸಿ ಮಾಧ್ಯಮದವರ ಹಲವು ಪ್ರಶ್ನೆಗಳಿಗೆ ಉತ್ತರಿಸಿದರು.

ಶ್ರೀಲಂಕಾ ಪ್ರವಾಸಕ್ಕಾಗಿ ಭಾರತದ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಶುಭಮನ್ ಗಿಲ್ (ಉಪನಾಯಕ), ಯಶಸ್ವಿ ಜೈಸ್ವಾಲ್, ರಿಂಕು ಸಿಂಗ್, ರಿಯಾನ್ ಪರಾಗ್, ರಿಷಭ್ ಪಂತ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಖಲೀಲ್ ಅಹ್ಮದ್, ಮೊಹಮ್ಮದ್ ಸಿರಾಜ್.

ಶ್ರೀಲಂಕಾ ಪ್ರವಾಸಕ್ಕಾಗಿ ಭಾರತದ ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರಿಷಬ್ ಪಂತ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ಶಿವಂ ದುಬೆ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ರಿಯಾನ್ ಪರಾಗ್, ಅಕ್ಷರ್ ಪಟೇಲ್, ಖಲೀಲ್ ಅಹ್ಮದ್, ಹರ್ಷಿತ್ ರಾಣಾ.

Story first published: Monday, July 22, 2024, 14:24 [IST]
Other articles published on Jul 22, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+