2024ರ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ (ಐಪಿಎಲ್) ಉತ್ತಮ ನಾಯಕತ್ವದ ಜೊತೆಗೆ ಬ್ಯಾಟಿಂಗ್ನಲ್ಲಿಯೂ ಸ್ಥಿರ ಪ್ರದರ್ಶನ ನೀಡುತ್ತಿರುವ ರಾಜಸ್ಥಾನ್ ರಾಯಲ್ಸ್ ನಾಯಕ ಸಂಜು ಸ್ಯಾಮ್ಸನ್ ದೊಡ್ಡ ಬಹುಮಾನ ಪಡೆದುಕೊಂಡಿದ್ದಾರೆ.
ಯುಎಸ್ಎ ಮತ್ತು ವೆಸ್ಟ್ ಇಂಡೀಸ್ನಲ್ಲಿ ನಡೆಯಲಿರುವ 2024ರ ಟಿ20 ವಿಶ್ವಕಪ್ ಪಂದ್ಯಾವಳಿಗೆ ಪ್ರಕಟಿಸಲಾದ 15 ಸದಸ್ಯರ ಭಾರತ ತಂಡದಲ್ಲಿ ಸಂಜು ಸ್ಯಾಮ್ಸನ್ಗೆ ಸ್ಥಾನ ನೀಡಲಾಗಿದೆ.

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ಯು ಮಂಗಳವಾರ, ಏಪ್ರಿಲ್ 30ರಂದು ತಂಡವನ್ನು ಸಲ್ಲಿಸುವ ಗಡುವು ದಿನಕ್ಕಿಂತ ಒಂದು ದಿನ ಮುಂಚಿತವಾಗಿ ಪ್ರಾಥಮಿಕ ತಂಡವನ್ನು ಘೋಷಿಸಿದೆ.
ಐಪಿಎಲ್ 2024ರಲ್ಲಿ ಸಂಜು ಸ್ಯಾಮ್ಸನ್ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ ಮತ್ತು ಟಿ20 ವಿಶ್ವಕಪ್ ಭಾರತ ತಂಡದಲ್ಲಿ 2ನೇ ವಿಕೆಟ್ ಕೀಪರ್ ಸ್ಥಾನಕ್ಕೆ ಕೆಎಲ್ ರಾಹುಲ್ ಮತ್ತು ಜಿತೇಶ್ ಶರ್ಮಾ ಅವರನ್ನು ಹಿಂದಿಕ್ಕಿದ್ದಾರೆ.
ರಾಜಸ್ಥಾನ್ ರಾಯಲ್ಸ್ ಪರ ಅದ್ಭುತ ಬ್ಯಾಟಿಂಗ್ ಫಾರ್ಮ್ಗಾಗಿ ಸಂಜು ಸ್ಯಾಮ್ಸನ್ಗೆ ಬಹುಮಾನ ನೀಡಲಾಗಿದ್ದು, ಅವರು ರಾಜಸ್ಥಾನ್ ರಾಯಲ್ಸ್ ತಂಡವನ್ನು ಮೊದಲ 9 ಪಂದ್ಯಗಳಿಂದ 8 ಗೆಲುವುಗಳಿಗೆ ಮುನ್ನಡೆಸಿದ್ದಾರೆ.

ವಿಕೆಟ್ಕೀಪರ್-ಬ್ಯಾಟರ್ ಕೆಎಲ್ ರಾಹುಲ್, ದಿನೇಶ್ ಕಾರ್ತಿಕ್ ಮತ್ತು ಜಿತೇಶ್ ಶರ್ಮಾ ಅವರೊಂದಿಗೆ ಸಂಜು ಸ್ಯಾಮ್ಸನ್ ಸ್ಪರ್ಧೆಯಲ್ಲಿದ್ದರು. ಆದರೆ ಐಪಿಎಲ್ನುದ್ದಕ್ಕೂ ಸ್ಥಿರ ಪ್ರದರ್ಶನದೊಂದಿಗೆ ಸ್ಪರ್ಧೆಯನ್ನು ಗೆದ್ದಿದ್ದಾರೆ.
ಐಪಿಎಲ್ 2024ರಲ್ಲಿ ಸದ್ಯ ಸಂಜು ಸ್ಯಾಮ್ಸನ್ ಆಡಿದ 9 ಪಂದ್ಯಗಳಿಂದ 385 ರನ್ ಗಳಿಸಿ ಆರೆಂಜ್ ಕ್ಯಾಪ್ ಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದ್ದಾರೆ. ರಾಜಸ್ಥಾನ್ ರಾಯಲ್ಸ್ ನಾಯಕ 77ರ ಸರಾಸರಿ ಮತ್ತು 161ರ ಸ್ಟ್ರೈಕ್ ರೇಟ್ನಲ್ಲಿ ಬ್ಯಾಟಿಂಗ್ ಮಾಡಿದ್ದಾರೆ.
ಆಸ್ಟ್ರೇಲಿಯಾ ಮಾಜಿ ನಾಯಕ ಮತ್ತು ಟಿ20 ವಿಶ್ವಕಪ್ ವಿಜೇತ ಆರೋನ್ ಫಿಂಚ್ ಅವರು ಸದ್ಯ ನಡೆಯುತ್ತಿರುವ ಐಪಿಎಲ್ ಆವೃತ್ತಿಯಲ್ಲಿ ಸಂಜು ಸ್ಯಾಮ್ಸನ್ ಅವರ ಅದ್ಭುತ ಪ್ರದರ್ಶನಕ್ಕಾಗಿ ಶ್ಲಾಘಿಸಿದ್ದಾರೆ.
"ಸಂಜು ಸ್ಯಾಮ್ಸನ್ ನಂಬಲಾಗದಷ್ಟು ಉತ್ತಮವಾಗಿ ತಂಡವನ್ನು ಮುನ್ನಡೆಸುತ್ತಿದ್ದಾರೆ ಎಂದು ನಾನು ಭಾವಿಸುತ್ತೇನೆ. ರಾಜಸ್ಥಾನ್ ರಾಯಲ್ಸ್ ಒತ್ತಡದಲ್ಲಿದ್ದಾಗ ಎಷ್ಟು ಶಾಂತವಾಗಿರುತ್ತದೆ ಎಂಬುದನ್ನು ನೀವು ನೋಡಬಹುದು. ಅವರು ಸೋತ ಏಕೈಕ ಪಂದ್ಯವೆಂದರೆ ಗುಜರಾತ್ ಟೈಟನ್ಸ್ ವಿರುದ್ಧ. ರಾಜಸ್ಥಾನ್ ರಾಯಲ್ಸ್ ಈ ಐಪಿಎಲ್ನಲ್ಲಿ ಕ್ಲಿನಿಕಲ್ ಪ್ರದರ್ಶನ ನೀಡಿದ್ದಾರೆ ಮತ್ತು ಅದಕ್ಕಾಗಿ ಹೆಚ್ಚಿನ ಕ್ರೆಡಿಟ್ ಸಂಜು ಸ್ಯಾಮ್ಸನ್ಗೆ ಸಲ್ಲಬೇಕು," ಎಂದು ಆರೋನ್ ಫಿಂಚ್ ತಿಳಿಸಿದರು.
ಸಂಜು ಸ್ಯಾಮ್ಸನ್ ಅವರನ್ನು 2022ರ ಟಿ20 ವಿಶ್ವಕಪ್ ಮತ್ತು 2023ರ ಏಕದಿನ ವಿಶ್ವಕಪ್ಗೆ ನಿರ್ಲಕ್ಷಿಸಲಾಗಿದೆ. ಇದು ಅಭಿಮಾನಿಗಳಿಂದ ಬಲವಾದ ವಿರೋಧ ಎದುರಿಸುವಂತಾಗಿತ್ತು.
2022ರಲ್ಲಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅವರು ಸಂಜು ಸ್ಯಾಮ್ಸನ್ ನಂಬಲಾಗದ ಆಸ್ತಿ ಎಂದು ತಂಡಕ್ಕೆ ತಿಳಿದಿತ್ತು ಮತ್ತು ಭವಿಷ್ಯದಲ್ಲಿ ಅವಕಾಶವನ್ನು ಪಡೆಯುತ್ತಾರೆ ಎಂದು ಅಭಿಮಾನಿಗಳಿಗೆ ಭರವಸೆ ನೀಡಿದ್ದರು. ಇನ್ನು ಭಾರತ ತನ್ನ ಮೊದಲ ಪಂದ್ಯವನ್ನು ಜೂನ್ 5ರಂದು ಐರ್ಲೆಂಡ್ ವಿರುದ್ಧ ಆಡಲಿದೆ.
ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಶ್ದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ.
ಮೀಸಲು ಆಟಗಾರರು: ಶುಭ್ಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್, ಅವೇಶ್ ಖಾನ್