
ಟ್ವೀಟ್ ಮೂಲಕ ನಿರಾಸೆ ಹೊರಹಾಕಿದ್ದ ತೆವಾಟಿಯಾ
ರಾಜಸ್ಥಾನ್ ರಾಯಲ್ಸ್ ಮೂಲಕ ಕಳೆದ ಕೆಲ ಐಪಿಎಲ್ ಆವೃತ್ತಿಗಳಲ್ಲಿ ಮಿಂಚಿ ಗುರುತಿಸಿಕೊಂಡಿದ್ದ ರಾಹುಲ್ ತೆವಾಟಿಯಾ ಈ ಬಾರಿ ಚಾಂಪಿಯನ್ ಗುಜರಾತ್ ಟೈಟನ್ಸ್ ಪರ ಆಡಿ ಗಮನಾರ್ಹ ಪ್ರದರ್ಶನ ನೀಡಿದರು. ಆದರೆ, ಐರ್ಲೆಂಡ್ ಪ್ರವಾಸಕ್ಕೆ ಪ್ರಕಟವಾದ ತಂಡದಲ್ಲಿ ತನಗೆ ಅವಕಾಶ ಸಿಗದೇ ಇದ್ದದ್ದನ್ನು ಕಂಡ ರಾಹುಲ್ ತೆವಾಟಿಯಾ ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ 'ನಿರೀಕ್ಷೆಗಳು ನೋವು ಮಾಡುತ್ತವೆ' ಎಂದು ಬರೆದುಕೊಳ್ಳುವುದರ ಮೂಲಕ ನಿರಾಸೆ ವ್ಯಕ್ತಪಡಿಸಿದರು.

ಟ್ವೀಟ್ ಮಾಡುವ ಬದಲು ಆಟದ ಕಡೆ ಗಮನಹರಿಸಬೇಕು
ಪ್ರಸ್ತುತ ಭಾರತದಲ್ಲಿ ಹಲವಾರು ಪ್ರತಿಭಾವಂತ ಆಟಗಾರರು ಇರುವ ಕಾರಣ ಅವಕಾಶ ಸುಲಭವಾಗಿ ಲಭಿಸುವುದಿಲ್ಲ, ಹೀಗಾಗಿ ಅವಕಾಶ ಸಿಗದೇ ಇದ್ದುದ್ದಕ್ಕೆ ಟ್ವೀಟ್ ಮಾಡುವ ಬದಲು ಉತ್ತಮ ಪ್ರದರ್ಶನ ನೀಡುವತ್ತ ಗಮನ ಹರಿಸಿದರೆ ಮುಂದಿನ ಬಾರಿ ಅವಕಾಶ ಲಭಿಸುವುದನ್ನು ಯಾರಿಂದಲೂ ತಪ್ಪಿಸಲಾಗುವುದಿಲ್ಲ ಎಂದು ಗ್ರೇಮ್ ಸ್ಮಿತ್ ರಾಹುಲ್ ತೆವಾಟಿಯಾಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.

ಐರ್ಲೆಂಡ್ ಪ್ರವಾಸಕ್ಕೆ ಪ್ರಕಟವಾದ ಭಾರತ ತಂಡ
ಹಾರ್ದಿಕ್ ಪಾಂಡ್ಯ (ನಾಯಕ), ಭುವನೇಶ್ವರ್ ಕುಮಾರ್ (ಉಪನಾಯಕ), ರುತುರಾಜ್ ಗಾಯಕ್ವಾಡ್, ಇಶನ್ ಕಿಶನ್, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್, ರಾಹುಲ್ ತ್ರಿಪಾಠಿ, ದೀಪಕ್ ಹೂಡಾ, ವೆಂಕಟೇಶ್ ಅಯ್ಯರ್, ಅಕ್ಷರ್ ಪಟೇಲ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಅವೇಶ್ ಖಾನ್, ಹರ್ಷಲ್ ಪಟೇಲ್, ಉಮ್ರಾನ್ ಮಲಿಕ್ , ಅರ್ಷದೀಪ್ ಸಿಂಗ್, ಯುಜ್ವೇಂದ್ರ ಚಹಾಲ್, ರವಿ ಬಿಷ್ಣೋಯ್.


Click it and Unblock the Notifications












