ಬೆಂಗಳೂರು, ಏ.10: ಇಂಡಿಯನ್ ಪ್ರಿಮಿಯರ್ ಲೀಗ್ ಟೂರ್ನಿಗೆ ಮತ್ತೊಮ್ಮೆ ಫಿಕ್ಸಿಂಗ ಭೂತ ಕಾಡತೊಡಗಿದೆ. ಐಪಿಎಲ್ 2015 ಶುರುವಾಗಿ ಮೂರು ದಿನಗಳು ಕಳೆಯುವುದರೊಳಗೆ 'ಎಫ್' ಪದ ಕೇಳಿ ಆಟಗಾರರು ಬೆಚ್ಚಿದ್ದಾರೆ. ರಾಜಸ್ಥಾನ ರಾಯಲ್ಸ್ ನ ಆಟಗಾರನೊಬ್ಬ ಈ ಬಗ್ಗೆ ಐಪಿಎಲ್ ಭ್ರಷ್ಟಾಚಾರ ನಿಯಂತ್ರಣ ತಂಡಕ್ಕೆ ದೂರು ನೀಡಿರುವ ಸುದ್ದಿ ಬೆಳಕಿಗೆ ಬಂದಿದೆ.
ಐಪಿಎಲ್ 8ರಲ್ಲಿ ರಾಜಸ್ಥಾನ ರಾಯಲ್ಸ್ ತಂಡದಲ್ಲಿರುವ ಮುಂಬೈ ಮೂಲದ ರಣಜಿ ಆಟಗಾರನೊಬ್ಬನನ್ನು ಬುಕ್ಕಿಯೊಬ್ಬ ಸಂಪರ್ಕಿಸಿದ್ದ ಎಂಬ ವಿಷಯ ಹೊರಕ್ಕೆ ಬಂದಿದೆ. ಈ ಬಗ್ಗೆ ಹೆಡ್ ಲೈನ್ಸ್ ಟುಡೇ ಇಂಗ್ಲೀಷ್ ಸುದ್ದಿ ವಾಹಿನಿ ಏ.10ರಂದು ಸುದ್ದಿ ಪ್ರಸಾರ ಮಾಡಿದೆ.
[47 ದಿನ, 60 ಪಂದ್ಯ, ಫುಲ್ ಟೈಂ ಟೇಬಲ್] | [8 ತಂಡಗಳ ನೂರೆಂಟು ಆಟಗಾರರು] | [ಐಪಿಎಲ್ 2015: ಫ್ಯಾನ್ಸಿಗೆ ಗೈಡ್]

ಕಳೆದ ತಿಂಗಳು ಈ ಘಟನೆ ನಡೆದಿದ್ದು,ಈ ಬಗ್ಗೆ ಬಿಸಿಸಿಐನ ಭ್ರಷ್ಟಾಚಾರ ನಿಯಂತ್ರಣ ಹಾಗೂ ಸುರಕ್ಷತಾ ಘಟಕ (ACSU)ಕ್ಕೆ ದೂರು ನೀಡಲಾಗಿದೆ. ಟೈಮ್ಸ್ ನೌ ಕೂಡಾ ಸುದ್ದಿಯನ್ನು ಸ್ಪಷ್ಟಪಡಿಸಿ ಆಟಗಾರ ಮುಂಬೈ ಮೂಲದವನು ಎಂದು ಹೇಳಿದೆ. ಎಸಿಎಸ್ ಯು ಈ ಬಗ್ಗೆ ತನಿಖೆ ಕೈಗೊಂಡಿದೆ. []
2013ರಲ್ಲಿ ರಾಜಸ್ಥಾನ ರಾಯಲ್ಸ್ ತಂಡ ಹಾಗೂ ಟೀಂ ಇಂಡಿಯಾ ವಿಶ್ವಕಪ್ ವಿಜೇತ ತಂಡದ ಸದಸ್ಯ ಎಸ್ ಶ್ರೀಶಾಂತ್ ಅವರು ಸ್ಪಾಟ್ ಫಿಕ್ಸಿಂಗ್ ನಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಬಿಸಿಸಿಐನಿಂದ ಆಜೀವ ನಿಷೇಧಕ್ಕೆ ಒಳಪಟ್ಟಿದ್ದನ್ನು ಇಲ್ಲಿ ಸ್ಮರಿಸಬಹುದು. [ಐಪಿಎಲ್ 8 ಆನ್ಲೈನ್ ಟಿಕೆಟ್ ಖರೀದಿ ಎಲ್ಲಿ? ಹೇಗೆ?]