ಕೋಲ್ಕತ್ತಾ, ಏಪ್ರಿಲ್ 29: ಹಿರಿಯ ಕ್ರಿಕೆಟರ್, ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ಗೌತಮ್ ಗಂಭೀರ್ ಅವರು ಸುಕ್ಮಾ ಹುತಾತ್ಮ ಯೋಧರ ಮಕ್ಕಳ ಶಿಕ್ಷಣದ ಜವಾಬ್ದಾರಿ ಹೊತ್ತುಕೊಂಡಿರುವುದು ತಿಳಿದಿರಬಹುದು. ಈಗ ತಮ್ಮ ಉತ್ತಮ ನಡೆಯನ್ನು ಮುಂದುವರೆಸಿ, ಪಂದ್ಯ ಶ್ರೇಷ್ಠ ಪ್ರಶಸ್ತಿ ಮೊತ್ತವನ್ನುಹುತಾತ್ಮ ವೀರರಿಗೆ ಅರ್ಪಿಸಿ, ಅವರ ಕುಟುಂಬಕ್ಕೆ ದಾನ ಮಾಡಿದ್ದಾರೆ.
ಡೆಲ್ಲಿ ವಿರುದ್ಧ ನಡೆದ ಪಂದ್ಯದಲ್ಲಿ ಕೆಕೆಆರ್ ತಂಡದ ಗೆಲುವಿಗೆ ಕಾರಣರಾಗಿ ಪಂದ್ಯ ಪುರುಷೋತ್ತಮ ಪ್ರಶಸ್ತಿಗೆ ಭಾಜನರಾದ ಗಂಭೀರ್ ತಮ್ಮ ಪ್ರಶಸ್ತಿಯ ಮೊತ್ತವನ್ನು ಸುಕ್ಮಾ ದಾಳಿಯಲ್ಲಿ ತಮ್ಮ ಪ್ರಾಣವನ್ನು ಕಳೆದುಕೊಂಡು ಹುತಾತ್ಮರಾದಂತಹ ವೀರ ಯೋಧರಿಗೆ ಅರ್ಪಿಸಿದರು. ಡೆಲ್ಲಿ ವಿರುದ್ಧ ಅಜೇಯ 71 ರನ್ ಗಳಿಸಿ ತಂಡದ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದ್ದರು.
