ನವದೆಹಲಿ: ಕೋವಿಡ್-19 ದ್ವಿತೀಯ ಅಲೆಯಿಂದಾಗಿ ನಗದು ಶ್ರೀಮಂತ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ಗೆ ಕಂಟಕಗಳು ಎದುರಾಗುತ್ತಿವೆ. ಕಳೆದ ಸಾರಿ ಟೂರ್ನಿ ಕೊರೊನಾ ಕಾರಣ ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ನಡೆದಿತ್ತು. ಆಗ ಪಂದ್ಯಗಳಿಗೇನೂ ತೊಂದರೆಯಾಗಿರಲಿಲ್ಲ. ಈ ಬಾರಿ ಭಾರತದಲ್ಲಿ ಪಂದ್ಯ ನಡೆಯುತ್ತಿದ್ದು, ಪಂದ್ಯ ನಡೆಸಲು ಸಮಸ್ಯೆ ಎದುರಾಗುತ್ತಿದೆ.
ಚೇತರಿಕೆಯಲ್ಲಿ ವರುಣ್, ವಾರಿಯರ್: ಮುಂದಿನ ಪಂದ್ಯದಲ್ಲಿ ಕೆಕೆಆರ್ ಕಣಕ್ಕೆ?
ಕೋಲ್ಕತ್ತಾ ನೈಟ್ ರೈಡರ್ಸ್ನ ಸ್ಪಿನ್ನರ್ ವರುಣ್ ಚಕ್ರವರ್ತಿ ಮತ್ತು ವೇಗಿ ಸಂದೀಪ್ ವಾರಿಯರ್ಗೆ ಕೊರೊನಾ ಸೋಂಕು ತಗುಲಿದ್ದರಿಂದ ಸೋಮವಾರ (ಮೇ 3) ನಡೆಯಲಿದ್ದ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಯಲ್ ಚಾಲರಂಜರ್ಸ್ ಬೆಂಗಳೂರು ಪಂದ್ಯ ಮುಂದೂಡಲ್ಪಟ್ಟಿತ್ತು.
ಈಗ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವಿನ ಪಂದ್ಯ ಕೂಡ ಮುಂದೂಡಲ್ಪಡುವ ಸಾಧ್ಯತೆಯಿದೆ ಎನ್ನಲಾಗಿದೆ. ಚೆನ್ನೈ ಸೂಪರ್ ಕಿಂಗ್ಸ್ನ ಬೌಲಿಂಗ್ ಕೋಚ್ ಲಕ್ಷ್ಮೀಪತಿ ಬಾಲಾಜಿಗೆ ಎರಡನೇ ಪರೀಕ್ಷೆಯಲ್ಲೂ ಕೋವಿಡ್-19 ಪಾಸಿಟಿವ್ ಬಂದಿರುವುದರಿಂದ ಮೇ 5ರಂದು ನಡೆಯಲಿರುವ ಸಿಎಸ್ಕೆ-ಆರ್ಆರ್ ಪಂದ್ಯ ಮುಂದೂಡಲ್ಪಡುವ ಸಾಧ್ಯತೆಯಿದೆ.
ದೆಹಲಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯ ಸ್ಥಗಿತಗೊಳಿಸುವಂತೆ ಕೋರ್ಟ್ಗೆ ಅರ್ಜಿ
'ಈಗಿನವರೆಗಿನ ಮಾಹಿತಿಯಂತೆ, ಮಂಗಳವಾರ (ಮೇ 4) ನಡೆಯುವ ಮುಂಬೈ ಇಂಡಿಯನ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವಿನ ಪಂದ್ಯ ನಡೆಯಲಿದೆ. ಆದರೆ ಬುಧವಾರ (ಮೇ 5) ನಡೆಯಲಿರುವ ಚೆನ್ನೈ ಮತ್ತು ರಾಜಸ್ಥಾನ್ ನಡುವಿನ ಪಂದ್ಯ ರದ್ದುಗೊಳ್ಳುವ ಸಾದ್ಯತೆಯಿದೆ. ಎರಡನೇ ಪರೀಕ್ಷೆಯಲ್ಲೂ ಬಾಲಾಜಿ ಪಾಸಿಟಿವ್ ಬಂದಿರುವುದರಿಂದ ಪಂದ್ಯ ರದ್ದಾಗುವುದರಲ್ಲಿದೆ,' ಎಂದು ಬಿಸಿಸಿಐ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.