ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಇಂದು ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಟಾಸ್ ಗೆದ್ದಿದ್ದು ಮೊದಲಿಗೆ ಎದುರಾಳಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಬ್ಯಾಟಿಂಗ್ಗೆ ಆಹ್ವಾನಿಸಿದೆ.
ಈ ಬಾರಿಯ ಆವೃತ್ತಿಯನ್ನು ಸೋಲಿನೊಂದಿಗೆ ಆರಂಭಿಸಿದರೂ ಚೆನ್ನೈ ಸೂಪರ್ ಕಿಂಗ್ಸ್ ಬಳಿಕ ಉತ್ತಮ ಪ್ರದರ್ಶನದ ಮೂಲಕ ಗೆಲುವಿನ ಹಾದಿಗೆ ಮರಳಿದೆ. ಸತತ ಎರಡು ಪಂದ್ಯಗಳನ್ನು ಗೆದ್ದಿರುವುದು ಧೋನಿ ಪಡೆಗೆ ಉತ್ಸಾಹವನ್ನು ಹೆಚ್ಚಿಸಿದೆ. ಇಂದಿನ ಪಂದ್ಯಕ್ಕಾಗಿ ಚೆನ್ನೈ ತಂಡ ಒಂದು ಬದಲಾವಣೆಯನ್ನು ಮಾಡಿದ್ದು ಡ್ವೇಯ್ನ್ ಬ್ರಾವೋಗೆ ವಿಶ್ರಾಂತಿ ನೀಡಲಾಗಿದ್ದು ಲುಂಗಿ ಎನ್ಗಿಡಿ ಆಡುವ ಬಳಗದಲ್ಲಿ ಅವಕಾಶ ಪಡೆದಿದ್ದಾರೆ.
ಕೊಲ್ಕತ್ತಾ ನೈಟ್ ರೈಡರ್ಸ್ ಆರಂಭಿಕ ಎರಡು ಪಂದ್ಯಗಳನ್ನು ಸೋತ ಬಳಿಕ ಗೆಲುವಿನ ರುಚಿ ಕಂಡಿತ್ತು. ಈಗ ಈ ಗೆಲುವಿನ ಲಯವನ್ನು ಮುಂದುವರಿಸಲು ಬಯಸಿದೆ. ಕೆಕೆಆರ್ ತಂಡದಲ್ಲಿ ಎರಡು ಬದಲಾವಣೆಯಾಗಿದ್ದು ಅನುಭವಿ ಹರ್ಭಜನ್ ಸಿಂಗ್ ಈ ಪಂದ್ಯದಿಂದ ಹೊರಗುಳಿದಿದ್ದು ಯುವ ಆಟಗಾರ ಕಮಲೇಶ್ ನಾಗರ್ಕೋಟಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ ಜೊತೆಗೆ ಶಕೀಬ್ ಅಲ್ ಹಸನ್ ಬದಲಿಗೆ ಸುನಿಲ್ ನರೈನ್ ಆಡುವ ಬಳಗದಲ್ಲಿ ಕಾಣಿಸಿಕೊಂಡಿದ್ದಾರೆ.
ಕೊಲ್ಕತ್ತಾ ನೈಟ್ ರೈಡರ್ಸ್ ಆಡುವ ಬಳಗ:
ನಿತೀಶ್ ರಾಣಾ, ಶುಬ್ಮನ್ ಗಿಲ್, ರಾಹುಲ್ ತ್ರಿಪಾಠಿ, ಇಯಾನ್ ಮೋರ್ಗಾನ್ (ನಾಯಕ), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಸುನಿಲ್ ನರೈನ್, ಆಂಡ್ರೆ ರಸ್ಸೆಲ್, ಪ್ಯಾಟ್ ಕಮ್ಮಿನ್ಸ್, ಕಮಲೇಶ್ ನಾಗರ್ಕೋಟಿ, ವರುಣ್ ಚಕ್ರವರ್ತಿ, ಪ್ರಸಿದ್ಧ್ ಕೃಷ್ಣ
ಚೆನ್ನೈ ಸೂಪರ್ ಕಿಂಗ್ಸ್ ಆಡುವ ಬಳಗ: ಋತುರಾಜ್ ಗಾಯಕ್ವಾಡ್, ಫಾಫ್ ಡು ಪ್ಲೆಸಿಸ್, ಮೊಯೀನ್ ಅಲಿ, ಸುರೇಶ್ ರೈನಾ, ಅಂಬಾಟಿ ರಾಯುಡು, ರವೀಂದ್ರ ಜಡೇಜಾ, ಎಂ.ಎಸ್.ಧೋನಿ (ನಾಯಕ /ವಿಕೆಟ್ ಕೀಪರ್), ಸ್ಯಾಮ್ ಕರನ್, ಶಾರ್ದುಲ್ ಠಾಕೂರ್, ಲುಂಗಿ ಎನ್ಗಿಡಿ, ದೀಪಕ್ ಚಾಹರ್