ಅಹ್ಮದಾಬಾದ್: ಗುಜರಾತ್ನ ಅಹ್ಮದಾಬಾದ್ನಲ್ಲಿರುವ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು (ಏಪ್ರಿಲ್ 26) ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 21ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಕಾದಾಡುತ್ತಿವೆ. ಟಾಸ್ ಗೆದ್ದಿರುವ ಕೆಕೆಆರ್ ಬೌಲಿಂಗ್ ಆಯ್ದುಕೊಂಡಿದೆ.
ಪ್ರಮುಖ ಕ್ರಿಕೆಟಿಗರು ಐಪಿಎಲ್ ತೊರೆಯುತ್ತಿರುವುದಕ್ಕೆ ಅಸಲಿ ಕಾರಣಗಳಿವು!
ಪಂಜಾಬ್ ಕಿಂಗ್ಸ್ ಇಲ್ಲೀವರೆಗೆ ಆಡಿರುವ 5 ಪಂದ್ಯಗಳಲ್ಲಿ 2ರಲ್ಲಿ ಗೆದ್ದು ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ. ಕೋಲ್ಕತ್ತಾ ನೈಟ್ ರೈಡರ್ಸ್ ಆಡಿರುವ 5 ಪಂದ್ಯಗಳಲ್ಲಿ 1ರಲ್ಲಿ ಗೆದ್ದು ಪಾಯಿಂಟ್ಸ್ ಟೇಬಲ್ನಲ್ಲಿ ಕೊನೇ ಸ್ಥಾನದಲ್ಲಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಕೆಕೆಆರ್ಗೆ ಗೆಲುವು ತುಂಬಾ ಅನಿವಾರ್ಯವಾಗಿದೆ.
ಕೋಲ್ಕತ್ತಾ ನೈಟ್ ರೈಡರ್ಸ್ ಪ್ಲೇಯಿಂಗ್ XI
ನಿತೀಶ್ ರಾಣಾ, ಶುಬ್ಮನ್ ಗಿಲ್, ರಾಹುಲ್ ತ್ರಿಪಾಠಿ, ಸುನಿಲ್ ನರೈನ್, ಇಯಾನ್ ಮಾರ್ಗನ್ (ಸಿ), ದಿನೇಶ್ ಕಾರ್ತಿಕ್ (ವಿಕೆ), ಆ್ಯಂಡ್ರೆ ರಸೆಲ್, ಪ್ಯಾಟ್ ಕಮ್ಮಿನ್ಸ್, ಶಿವಂ ಮಾವಿ, ಪ್ರಸಿದ್ಧ್ ಕೃಷ್ಣ, ವರುಣ್ ಚಕ್ರವರ್ತಿ.
ಪಂಜಾಬ್ ಕಿಂಗ್ಸ್ ಪ್ಲೇಯಿಂಗ್ XI
ಕೆ.ಎಲ್. ರಾಹುಲ್ (ವಿಕೆ /ನಾಯಕ), ಮಾಯಾಂಕ್ ಅಗರ್ವಾಲ್, ಕ್ರಿಸ್ ಗೇಲ್, ದೀಪಕ್ ಹೂಡಾ, ನಿಕೋಲಸ್ ಪೂರನ್, ಮೊಯಿಸಸ್ ಹೆನ್ರಿಕ್ಸ್, ಶಾರುಖ್ ಖಾನ್, ಕ್ರಿಸ್ ಜೋರ್ಡಾನ್, ಮೊಹಮ್ಮದ್ ಶಮಿ, ರವಿ ಬಿಷ್ಣೋಯ್, ಅರ್ಷ್ದೀಪ್ ಸಿಂಗ್.