ಐಪಿಎಲ್ನಲ್ಲಿ ಇಂದು ಈ ಆವೃತ್ತಿಯ ಎರಡು ಬಲಿಷ್ಠ ತಂಡಗಳು ಮುಖಾಮುಖಿಯಾಗಿವೆ. ಅಂಕಪಟ್ಟಿಯಲ್ಲಿ ಅಗ್ರಸ್ಥಾನವನ್ನು ಪಡೆದುಕೊಂಡಿರುವ ಎರಡು ತಮಡಗಳ ನಡುವಿನ ಈ ಮುಖಾಮುಖಿ ಎಲ್ಲರ ಗಮನ ಸೆಳೆದಿದೆ. ಈ ಪಂದ್ಯದಲ್ಲೊ ಯಾರು ಗೆಲ್ಲಲಿದ್ದಾರೆ ಎಂಬ ಕುತೂಹಲ ಈಗ ಎಲ್ಲರಲ್ಲೂ ಇದೆ. ಈ ಕುತೂಹಲಕಾರಿ ಮುಖಾಮುಖಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್ ಟಾಸ್ ಗೆದ್ದಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಸದ್ಯ ಅಂಕಪಟ್ಟಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಸಮಾನ ಅಂಕಗಳಿಸಿದೆ. ಆದರೆ ನೆಟ್ರನ್ರೇಟ್ನಲ್ಲಿ ಸಿಎಸ್ಕೆ ಡೆಲ್ಲಿ ತಂಡಕ್ಕಿಂತ ಮುಂದಿದ್ದು ಅಗ್ರ ಸ್ಥಾನದಲ್ಲಿದೆ. ಆದರೆ ಈ ಹಿನ್ನಡೆಯನ್ನು ಹಿಂದಿಕ್ಕಲು ಡೆಲ್ಲಿ ತಂಡಕ್ಕೆ ಉತ್ತಮ ಅವಕಾಶವಿದ್ದು ಚೆನ್ನೈ ಸೂಪರ್ ಕಿಂಗ್ಸ್ಗೆ ಸೋಲುಣಿಸಿದರೆ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದುಕೊಳ್ಳುವ ಅವಕಾಶವಿದೆ.
ಇನ್ನು ಈ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಈ ಪಂದ್ಯದಲ್ಲಿ ಮೂರು ಬದಲಾವಣೆ ಮಾಡಿಕೊಂಡಿದೆ. ಕನ್ನಡಿಗ ರಾಬಿನ್ ಉತ್ತಪ್ಪ ಈ ಪಂದ್ಯದಲ್ಲಿ ಅವಕಾಶ ಪಡೆದುಕೊಂಡಿದ್ದಾರೆ. ಸ್ಯಾಮ್ ಕರನ್, ಆಸಿಫ್ ಹಾಗೂ ಸುರೇಶ್ ರೈನಾ ಈ ಪಂದ್ಯದಿಂದ ಹೊರಗುಳಿದಿದ್ದು ಈ ಆಟಗಾರರ ಬದಲಿಗೆ ಕ್ರಮವಾಗಿ ಡ್ವೇಯ್ನ್ ಬ್ರಾವೋ, ರಾಹುಲ್ ಚಹರ್ ಮತ್ತು ರಾಬಿನ್ ಉತ್ತಪ್ಪ ಆಡುವ ಅವಕಾಶ ಪಡೆದಿದ್ದಾರೆ.
ಇನ್ನು ಈ ಬಾರಿಯ ಟೂರ್ನಿಯಲ್ಲಿ ಎಂಎಸ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಅಧಿಕೃತವಾಗಿ ಪ್ಲೇ ಆಫ್ ಪ್ರವೇಶಿಸಿದ ಮೊದಲ ತಂಡ ಎನಿಸಿಕೊಂಡಿತು. ಇದರ ಬೆನ್ನಲ್ಲೇ ರಿಷಭ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಕೂಡ ಅಧಿಕೃತವಾಗಿ ಪ್ಲೇ ಆಫ್ ಹಂತವನ್ನು ತಲುಪುವುದರ ಮೂಲಕ ಈ ಬಾರಿಯ ಟೂರ್ನಿಯಲ್ಲಿ ಪ್ಲೇ ಆಫ್ ಪ್ರವೇಶಿಸಿದ ಎರಡನೇ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು.
ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಯಿಂಗ್ XI: ಪೃಥ್ವಿ ಶಾ, ಶಿಖರ್ ಧವನ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೆಟ್ ಕೀಪರ್), ರಿಪಾಲ್ ಪಟೇಲ್, ಅಕ್ಷರ್ ಪಟೇಲ್, ಶಿಮ್ರಾನ್ ಹೆಟ್ಮೇರ್, ರವಿಚಂದ್ರನ್ ಅಶ್ವಿನ್, ಕಾಗಿಸೊ ರಬಾಡಾ, ಅವೇಶ್ ಖಾನ್, ಅನ್ರಿಚ್ ನಾರ್ಕಿಯಾ
ಬೆಂಚ್: ಸ್ಯಾಮ್ ಬಿಲ್ಲಿಂಗ್ಸ್, ಮಾರ್ಕಸ್ ಸ್ಟೋಯಿನಿಸ್, ಉಮೇಶ್ ಯಾದವ್, ಲುಕ್ಮಾನ್ ಮೇರಿವಾಲಾ, ಟಾಮ್ ಕರನ್, ಬೆನ್ ದ್ವಾರಶುಯಿಸ್, ಪ್ರವೀಣ್ ದುಬೆ, ವಿಷ್ಣು ವಿನೋದ್, ಕುಲ್ವಂತ್ ಖೆಜ್ರೋಲಿಯಾ, ಲಲಿತ್ ಯಾದವ್, ಇಶಾಂತ್ ಶರ್ಮಾ, ಅಜಿಂಕ್ಯ ರಹಾನೆ, ಅಮಿತ್ ಮಿಶ್ರಾ, ಸ್ಟೀವನ್ ಸ್ಮಿತ್
ಚೆನ್ನೈ ಸೂಪರ್ ಕಿಂಗ್ಸ್ ಪ್ಲೇಯಿಂಗ್ XI: ಋತುರಾಜ್ ಗಾಯಕ್ವಾಡ್, ಫಾಫ್ ಡು ಪ್ಲೆಸಿಸ್, ರಾಬಿನ್ ಉತ್ತಪ್ಪ, ಮೊಯೀನ್ ಅಲಿ, ಅಂಬಾಟಿ ರಾಯುಡು, ಎಂಎಸ್ ಧೋನಿ (ನಾಯಕ/ ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಡ್ವೇಯ್ನ್ ಬ್ರಾವೋ, ಶಾರ್ದೂಲ್ ಠಾಕೂರ್, ದೀಪಕ್ ಚಾಹರ್, ಜೋಶ್ ಹ್ಯಾಜಲ್ವುಡ್
ಬೆಂಚ್: ಇಮ್ರಾನ್ ತಾಹಿರ್, ಚೇತೇಶ್ವರ ಪೂಜಾರ, ಕರ್ನ್ ಶರ್ಮಾ, ಜೇಸನ್ ಬೆಹ್ರೆಂಡೋರ್ಫ್, ಕೃಷ್ಣಪ್ಪ ಗೌತಮ್, ಲುಂಗಿ ನ್ಗಿಡಿ, ಮಿಚೆಲ್ ಸ್ಯಾಂಟ್ನರ್, ರವಿಶ್ರೀನಿವಾಸನ್ ಸಾಯಿ ಕಿಶೋರ್, ಹರಿ ನಿಶಾಂತ್, ಎನ್ ಜಗದೀಶನ್, ಹರಿಶಂಕರ್ ರೆಡ್ಡಿ, ಭಗತ್ ವರ್ಮ, ಸ್ಯಾಮ್ ಕರನ್, ಕೆಎಂ ಆಸಿಫ್, ಸುರೇಶ್ ರೈನಾ