ಅಂತಿಮ 2 ಓವರ್ನಲ್ಲಿ ರಾಜಸ್ಥಾನ್ ಬೌಲರ್ಗಳ ಚಮತ್ಕಾರ
ರಾಜಸ್ಥಾನ್ ವಿರುದ್ಧದ ಪಂದ್ಯದಲ್ಲಿ ಒಂದೆರಡು ಓವರ್ಗಳು ಬಾಕಿ ಇರುವಾಗಲೇ ಗೆಲುವು ಸಾಧಿಸಲಿದೆ ಎನ್ನುವ ಮಟ್ಟಿಗೆ ಆರಂಭವನ್ನು ಪಡೆದುಕೊಂಡು ಗೆಲುವಿನತ್ತ ಮುನ್ನುಗ್ಗುತ್ತಿದ್ದ ಪಂಜಾಬ್ ಕಿಂಗ್ಸ್ ತಂಡಕ್ಕೆ ಅಂತಿಮ 2 ಓವರ್ ಬೌಲಿಂಗ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡದ ಮುಸ್ತಫಿಜರ್ ರಹಮಾನ್ ಮತ್ತು ಕಾರ್ತಿಕ್ ತ್ಯಾಗಿ ಖಳನಾಯಕರಾಗಿ ಕಾಡಿದರು. ಹೌದು ಅಂತಿಮವಾಗಿ ಪಂಜಾಬ್ ಕಿಂಗ್ಸ್ ತಂಡಕ್ಕೆ ಗೆಲ್ಲಲು 12 ಎಸೆತಗಳಲ್ಲಿ ಕೇವಲ 8 ರನ್ಗಳ ಅಗತ್ಯತೆ ಇತ್ತು. ಈ ಸಂದರ್ಭದಲ್ಲಿ 19ನೇ ಓವರ್ ಬೌಲಿಂಗ್ ಮಾಡಿದ ಮುಸ್ತಫಿಜರ್ ರಹಮಾನ್ ಕೇವಲ 4 ರನ್ ನೀಡಿ ಉತ್ತಮ ಬೌಲಿಂಗ್ ಮಾಡಿದರು. ನಂತರ ಕೊನೆಯ ಓವರ್ನಲ್ಲಿ ಪಂಜಾಬ್ ತಂಡಕ್ಕೆ ಗೆಲ್ಲಲು 4 ರನ್ಗಳ ಅಗತ್ಯತೆ ಇತ್ತು, ಕಣದಲ್ಲಿ ಬಲಿಷ್ಠ ಬ್ಯಾಟ್ಸ್ಮನ್ಗಳೂ ಕೂಡ ಇದ್ದರು ಹಾಗೂ ಕೈನಲ್ಲಿ ಇನ್ನೂ 8 ವಿಕೆಟ್ಗಳೂ ಸಹ ಇದ್ದವು. ಹೀಗೆ ಅಂತಿಮ ಓವರ್ನಲ್ಲಿ ಬಲಿಷ್ಠ ಬ್ಯಾಟ್ಸ್ಮನ್ಗಳಿದ್ದರೂ ಸಹ ಅತ್ಯದ್ಭುತ ಬೌಲಿಂಗ್ ಪ್ರದರ್ಶನ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡದ ಬೌಲರ್ ಕಾರ್ತಿಕ್ ತ್ಯಾಗಿ ನೀಡಿದ್ದು ಕೇವಲ ಒಂದು ರನ್. ಹೌದು 6 ಎಸೆತಗಳನ್ನು ಎಸೆದ ಕಾರ್ತಿಕ್ ತ್ಯಾಗಿ 1 ರನ್ ನೀಡಿ, 2 ವಿಕೆಟ್ ಪಡೆದುಕೊಳ್ಳುವುದರ ಮೂಲಕ ಒತ್ತಡ ಮತ್ತು ಕಠಿಣತೆಯಿಂದ ಕೂಡಿದ್ದ ಅಂತಿಮ ಓವರ್ನಲ್ಲಿ ಅತ್ಯದ್ಭುತ ಪ್ರದರ್ಶನವನ್ನು ನೀಡಿದರು. ಹೀಗೆ ಹತ್ತೊಂಬತ್ತನೇ ಮತ್ತು ಇಪ್ಪತ್ತನೇ ಓವರ್ಗಳಲ್ಲಿ ಅತ್ಯುತ್ತಮ ಬೌಲಿಂಗ್ ಮಾಡಿದ ಮುಸ್ತಫಿಜರ್ ರಹಮಾನ್ ಮತ್ತು ಕಾರ್ತಿಕ್ ತ್ಯಾಗಿ ರಾಜಸ್ಥಾನ್ ರಾಯಲ್ಸ್ ತಂಡದ ಪರ ಹೀರೋಗಳಾಗಿ ಹೊರಹೊಮ್ಮಿದರು.
ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದ ಕಾರ್ತಿಕ್ ತ್ಯಾಗಿ
ಕೊನೆಯ ಓವರ್ ಸಿಗುವ ತನಕ 3 ಓವರ್ ಬೌಲಿಂಗ್ ಮಾಡಿದ್ದ ಕಾರ್ತಿಕ್ ತ್ಯಾಗಿ ಯಾವುದೇ ವಿಕೆಟ್ ಪಡೆಯದೇ 28 ರನ್ ನೀಡಿ ಸಾಧಾರಣ ಪ್ರದರ್ಶನವನ್ನು ನೀಡಿದ್ದರು. ಆದರೆ ಅಂತಿಮ ಓವರ್ನಲ್ಲಿ ಕೇವಲ ಒಂದು ರನ್ ನೀಡಿ, 2 ವಿಕೆಟ್ ಪಡೆದ ಕಾರ್ತಿಕ್ ತ್ಯಾಗಿ ಪಂಜಾಬ್ ಕಿಂಗ್ಸ್ ತಂಡಕ್ಕೆ 4 ರನ್ ಬಾರಿಸಲು ಬಿಡದೇ ಆಕ್ರಮಣಕಾರಿ ಬೌಲಿಂಗ್ ಮಾಡಿದರು. ಹೀಗೆ ಅಂತಿಮ ಓವರ್ನಲ್ಲಿ ಅತ್ಯದ್ಭುತ ಬೌಲಿಂಗ್ ಪ್ರದರ್ಶನ ನೀಡಿದ ಕಾರ್ತಿಕ್ ತ್ಯಾಗಿಗೆ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಅಂಕಪಟ್ಟಿಯಲ್ಲಿ ರಾಜಸ್ಥಾನ್ ರಾಯಲ್ಸ್ ಸ್ಥಾನ
ಹೀಗೆ ಪಂಜಾಬ್ ಕಿಂಗ್ಸ್ ವಿರುದ್ಧ ರೋಚಕ ಜಯ ಸಾಧಿಸಿದ ರಾಜಸ್ಥಾನ್ ರಾಯಲ್ಸ್ ಅಂಕ ಪಟ್ಟಿಯಲ್ಲಿ ಐದನೇ ಸ್ಥಾನಕ್ಕೇರಿತು. ಟೂರ್ನಿಯಲ್ಲಿ ಇದುವರೆಗೂ 8 ಪಂದ್ಯಗಳನ್ನಾಡಿರುವ ರಾಜಸ್ಥಾನ್ ರಾಯಲ್ಸ್ 4 ಪಂದ್ಯಗಳಲ್ಲಿ ಜಯ ಗಳಿಸಿದ್ದು, 4 ಪಂದ್ಯಗಳಲ್ಲಿ ಸೋಲುಂಡಿದೆ. ಹೀಗೆ ಆಡಿರುವ ಅರ್ಧದಷ್ಟು ಪಂದ್ಯದಲ್ಲಿ ಜಯ ಗಳಿಸಿರುವ ರಾಜಸ್ಥಾನ್ ರಾಯಲ್ಸ್ 8 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ಐದನೇ ಸ್ಥಾನ ಪಡೆದುಕೊಂಡಿದೆ.